Featured

ವಿಜಯ ಬ್ಯಾಂಕ್ ಇನ್ನು ಮುಂದೆ ನೆನಪು ಮಾತ್ರ : ಏ.1 ರಿಂದ ಬ್ಯಾಂಕ್ ಆಫ್ ಬರೋಡಾದೊಂದಿಗೆ ವಿಲೀನ – Vishwanews24

ಉಡುಪಿ : ಏ.೧ ರಿಂದ ದಕ್ಷಿಣ ಕನ್ನಡ ಮೂಲದ ವಿಜಯ ಬ್ಯಾಂಕ್‌, ಬ್ಯಾಂಕ್‌ ಆಫ್‌ ಬರೋಡ ಜತೆ ವಿಲೀನಗೊಳ್ಳಲಿದೆ. ಈ ಕುರಿತು  ಇದೀಗ ಅಧಿಕೃತವಾಗಿ ಬ್ಯಾಂಕಿನ ಗ್ರಾಹಕರಿಗೆ ಸಂದೇಶ ರವಾನೆಯಾಗಿದೆ.  ಎಪ್ರಿಲ್ 1ರಿಂದ ವಿಜಯ ಬ್ಯಾಂಕ್‌ ಹೆಸರೂ, ಹಳದಿ ಲೋಗೋ ಕೂಡ ಗ್ರಾಹಕರ ಕಣ್ಣಿಂದ ಕಣ್ಮರೆಯಾಗಲಿದೆ.  ಇನ್ನೇನಿದ್ದರೂ ಬ್ಯಾಂಕ್ ಹೆಸರು ಇತಿಹಾಸದ  ಪುಟ ಸೇರಲಿದೆ.
ಕರಾವಳಿಯ ಹೆಮ್ಮೆಯ ವಿಜಯ ಬ್ಯಾಂಕ್‌ ಅನ್ನು ಬ್ಯಾಂಕ್‌ ಆಫ್‌ ಬರೋಡ ಜತೆಗೆ ವಿಲೀನಗೊಳಿಸುವ ನಿರ್ಧಾರ ಘೋಷಣೆಯಾಗುತ್ತಿದ್ದಂತೆ ಕರಾವಳಿ ಭಾಗದಲ್ಲಿ ಅದರಲ್ಲಿಯೂ ದ.ಕ., ಉಡುಪಿ ಜಿಲ್ಲೆಯಲ್ಲಿ ಸಾಕಷ್ಟು ವಿರೋಧ-ಪ್ರತಿಭಟನೆಗಳು ನಡೆದರೂ, ಆದರೆ, ಅಸ್ತಿತ್ವ ಉಳಿಸುವ ಸಂಬಂಧ ವಿಜಯ ಬ್ಯಾಂಕ್‌ ನಿವೃತ್ತ ಅಧಿಕಾರಿಗಳು, ಅಭಿಮಾನಿಗಳ ಹೋರಾಟದ ನಡುವೆಯೂ ವಿಲೀನಗೊಳಿಸುವ ಪ್ರಕ್ರಿಯೆಗಳು ನಡೆದಿತ್ತು. ಕೊನೆಯ ಹಂತದಲ್ಲಿಯಾದರೂ ಲಾಭದಲ್ಲಿರುವ ವಿಜಯ ಬ್ಯಾಂಕ್‌ ಅನ್ನು ವಿಲೀನ ಪ್ರಕ್ರಿಯೆ ಯಿಂದ ಕೈಬಿಡಬಹುದು ಎನ್ನುವ ನಿರೀಕ್ಷೆ ಹೋರಾಟಗಾರರಲ್ಲಿ, ಕರಾವಳಿಗರಲ್ಲಿ ಇತ್ತು. ಆ ನಿರೀಕ್ಷೆ ಈಗ ಹುಸಿಯಾಗಿದೆ. ವಿಜಯಾ ಬ್ಯಾಂಕ್, ಬ್ಯಾಂಕ್ ಆಫ್ ಬರೋಡ ಆಗಲಿದ್ದು  ವಿಜಯಾ ಬ್ಯಾಂಕ್ ಜೊತೆ ವ್ಯವಹಾರ ನಡೆಸುವವರಿಗೆ ಏನೂ ತೊಂದರೆ ಇಲ್ಲ.

“ಬ್ಯಾಂಕ್‌ಗಳ ತೊಟ್ಟಿಲು” ಎಂದೇ ಖ್ಯಾತಿ ಪಡೆದಿರುವ ಕರಾವಳಿಯಲ್ಲಿಯೇ ಕೆನರಾ ಬ್ಯಾಂಕ್‌, ವಿಜಯ ಬ್ಯಾಂಕ್‌, ಸಿಂಡಿಕೇಟ್ ಬ್ಯಾಂಕ್‌, ಕಾರ್ಪೊರೇಷನ್‌ ಬ್ಯಾಂಕ್‌ ಹಾಗೂ ಖಾಸಗಿ ಕರ್ನಾಟಕ ಬ್ಯಾಂಕ್‌ಗಳು ಸ್ಥಾಪನೆಯಾಗಿದ್ದು . ಈ ಪೈಕಿ ಕಾರ್ಪೊರೇಷನ್‌ ಬ್ಯಾಂಕ್‌, ಕರ್ನಾಟಕ ಬ್ಯಾಂಕ್‌ ಪ್ರಧಾನ ಕಚೇರಿ ಮಂಗಳೂರಿನಲ್ಲಿದ್ದರೆ, ಸಿಂಡಿಕೇಟ್‌ ಬ್ಯಾಂಕ್‌ ಪ್ರಧಾನ ಕಚೇರಿ ಮಣಿಪಾಲದಲ್ಲಿದೆ. ಉಳಿದೆಲ್ಲ ಬ್ಯಾಂಕ್‌ಗಳು ಪ್ರಧಾನ ಕಚೇರಿಗಳು ಬೆಂಗಳೂರಿಗೆ ಸ್ಥಳಾಂತರಗೊಂಡಿವೆ.

ಅತ್ತಾವರ ಬಾಲಕೃಷ್ಣ ಶೆಟ್ಟಿ ಅವರಿಂದ ಮಂಗಳೂರಿನ ಬಂಟ್ಸ್‌ ಹಾಸ್ಟೆಲ್‌ನ ಸಣ್ಣ ಕೊಠಡಿಯೊಂದರಲ್ಲಿ ಪ್ರಗತಿಪರ ರೈತರ ಬೆಂಬಲದೊಂದಿಗೆ ವಿಜಯ ಬ್ಯಾಂಕ್‌ ಸ್ಥಾಪನೆಯಾಯಿತು. ವಿಜಯ ದಶಮಿಯಂದು ಬ್ಯಾಂಕ್‌ ಪ್ರಾರಂಭಗೊಂಡಿದ್ದರಿಂದ ವಿಜಯ ಬ್ಯಾಂಕ್‌ ಎನ್ನುವ ಹೆಸರನ್ನು ಇಡಲಾಯಿತು. ಆದರೆ ಇವೆಲ್ಲವೂ ಕರಾವಳಿಗರ ಪಾಲಿಗೆ ಇನ್ನುಮುಂದೆ ನೆನಪು ಮಾತ್ರ.

ದೇನಾ, ವಿಜಯ ಬ್ಯಾಂಕ್ ಗ್ರಾಹಕರು ಏನು ಮಾಡಬೇಕು?
1. ಗ್ರಾಹಕರಿಗೆ ಹೊಸ ಖಾತೆಯ ಸಂಖ್ಯೆ ಮತ್ತು ಕಸ್ಟಮರ್ ಐಡಿ ಸಿಗಲಿದೆ.
2. ದೇನಾ ಮತ್ತು ವಿಜಯಾ ಬ್ಯಾಂಕ್ ಗ್ರಾಹಕರೆಲ್ಲರಿಗೂ ಹೊಸ ಖಾತೆ ನಂಬರ್ ದೊರೆತ ಕೂಡಲೇ, ಆದಾಯ ತೆರಿಗೆ ಇಲಾಖೆ, ವಿಮೆ, ಪಿಂಚಣಿಗಳಿಗೆ ಮಾಹಿತಿಯನ್ನು ನೀಡಬೇಕು.
3. ಸಾಲಗಾರರು ಅಥವಾ ಇಎಂಐ ಗ್ರಾಹಕರು ಹೊಸ ಅರ್ಜಿಯನ್ನು ಭರ್ತಿ ಮಾಡಿ, ಸಂಬಂಧಪಟ್ಟ ದಾಖಲೆಗಳನ್ನು ಬ್ಯಾಂಕಿಗೆ ಸಲ್ಲಿಸಬೇಕು.
4. ಬ್ಯಾಂಕ್ ಆಫ್ ಬರೋಡಾಗೆ ಸೇರ್ಪಡೆಯಾಗುವ ಎಲ್ಲ ಗ್ರಾಹಕರಿಗೆ ಹೊಸ ಡೆಬಿಟ್ ಕಾರ್ಡ್, ಚೆಕ್‍ಬುಕ್ ಮತ್ತು ಕ್ರೆಡಿಟ್ ಕಾರ್ಟ್ ನೀಡಲಾಗುತ್ತದೆ.
6. ವಾಹನಗಳ ಮೇಲಿನ ಸಾಲ, ಗೃಹ ಸಾಲ, ವೈಯಕ್ತಿಕ ಸಾಲ ಪಡೆದ ಗ್ರಾಹಕರು ಪಾವತಿಸುತ್ತಿರುವ ಬಡ್ಡಿ ಮೊತ್ತದಲ್ಲಿ ಯಾವುದೇ ಬದಲಾವಣೆಗಳಿಲ್ಲ.
7. ಬ್ಯಾಂಕ್‍ಗಳ ವಿಲೀನದಿಂದಗ ಕೆಲ ಶಾಖೆಗಳು ಬಂದ್ ಆಗಲಿವೆ. ಹಾಗಾಗಿ ಗ್ರಾಹಕರು ಸಮೀಪದ ಬ್ಯಾಂಕ್ ಬರೋಡಾ ಬ್ಯಾಂಕ್ ಸಂಪರ್ಕಿಸಬೇಕು.

ಏನು ಬದಲಾಗಲಿದೆ?

ವಿಲೀನದ ನಂತರ ದೇನಾ ಮತ್ತು ವಿಜಯಾ ಬ್ಯಾಂಕ್ ಗ್ರಾಹಕರೆಲ್ಲ ಬ್ಯಾಂಕ್ ಆಫ್ ಬರೋಡಾಗೆ ವರ್ಗಾವಣೆಯಾಗಲಿದ್ದಾರೆ.

– ಗ್ರಾಹಕರಿಗೆ ಹೊಸ ಖಾತೆಯ ಸಂಖ್ಯೆ ಮತ್ತು ಕಸ್ಟಮರ್ ಐಡಿ ನೀಡಲಾಗುತ್ತದೆ.

– ಸಾಲಗಾರರು, ಇಎಂಐ ಪಾವತಿಸುವವರು ಹೊಸ ಅರ್ಜಿ ದಾಖಲೆಗಳನ್ನು ಬ್ಯಾಂಕಿಗೆ ಸಲ್ಲಿಸಬೇಕು.

– ಹೊಸ ಡೆಬಿಟ್ ಕಾರ್ಡ್, ಚೆಕ್ ಬುಕ್ ಮತ್ತು ಕ್ರೆಡಿಟ್ ಕಾರ್ಡ್ ನೀಡಲಾಗುವುದು.

3ನೇ ದೊಡ್ಡ ಬ್ಯಾಂಕ್

ಪಸ್ತುತ 45.85 ಲಕ್ಷ ಕೋಟಿ ಮೌಲ್ಯದ ವ್ಯವಹಾರಗಳೊಂದಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮೊದಲ ಸ್ಥಾನದಲ್ಲಿದೆ. 15.8 ಲಕ್ಷ ಕೋಟಿ ವ್ಯವಹಾರಗಳೊಂದಿಗೆ ಎಚ್‍ಡಿಎಫ್‍ಸಿ ಎರಡನೇ ಸ್ಥಾನದಲ್ಲಿ, 11.02 ಲಕ್ಷ ಕೋಟಿ ವ್ಯವಹಾರಗಳೊಂದಿಗೆ ಐಸಿಐಸಿಐ ಮೂರನೇ ಸ್ಥಾನದಲ್ಲಿವೆ. ದೇನಾ ಮತ್ತು ವಿಜಯಾ ಬ್ಯಾಂಕ್‍ಗಳ ವಿಲೀನದಿಂದಾಗಿ ಬ್ಯಾಂಕ್ ಆಫ್ ಬರೋಡಾದ ವ್ಯವಹಾರದ ಮೌಲ್ಯ 15.4 ಲಕ್ಷ ಕೋಟಿ ಆಗಲಿದೆ. ಐಸಿಐಸಿಐ ಬ್ಯಾಂಕ್ ನ್ನು ಹಿಂದೆ ತಳ್ಳಿ ಬ್ಯಾಂಕ್ ಆಫ್ ಬರೋಡಾ ಮೂರನೇ ಸ್ಥಾನವನ್ನ ಅಲಂಕರಿಸಲಿದೆ.

‘2019 ಎ. 1ರಿಂದ ಬ್ಯಾಂಕ್‌ ಆಫ್‌ ಬರೋಡ, ವಿಜಯ ಬ್ಯಾಂಕ್‌. ದೇನಾ ಬ್ಯಾಂಕುಗಳು ಪರಸ್ಪರ ವಿಲೀನಗೊಳ್ಳಲಿವೆ. ಇನ್ನು ಮುಂದಿನ ದಿನಗಳಲ್ಲಿ ನೀವು ದೇಶದ 3ನೇ ಅತಿ ದೊಡ್ಡ ಬ್ಯಾಂಕ್‌ ನೆಟ್ವರ್ಕ್‌ ಜತೆ ವ್ಯವಹಾರ ನಡೆಸಲಿದ್ದೀರಿ. ನಿಮ್ಮ ಈಗಿರುವ ಖಾತೆ ಸಂಖ್ಯೆ, ಡೆಬಿಟ್/ ಕ್ರೆಡಿಟ್ ಕಾರ್ಡ್‌, ಮೊಬೈಲ್ ಮತ್ತು ನೆಟ್ ಬ್ಯಾಂಕಿಂಗ್‌ ಸೌಲಭ್ಯಗಳೊಂದಿಗೆ ಸೇವೆಗಳು ಯಥಾಸ್ಥಿತಿ ಮುಂದುವರಿಯಲಿವೆ. ವಿವರಗಳಿಗೆ ನಿಮ್ಮ ಈಗಿರುವ ವಿಜಯ ಬ್ಯಾಂಕ್‌ ಶಾಖೆಯನ್ನು ಸಂಪರ್ಕಿಸಬಹುದು.’

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago