ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ವಿಟ್ಲ ಪೊಲೀಸರು ಪತ್ತೆ ಮಾಡಿ ವಾಹನ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿ ಬಶೀರ್ ಬಂತಾ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದು, ಚಾಲಕ ಬಾಳೆಪುಣಿ ನಿವಾಸಿ ಹನೀಫ್ (44) ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.
ಮೇ 21ರಂದು ಬೆಳಗ್ಗೆ ಅಕ್ರಮ ಗೋಸಾಗಾಟದ ಮಾಹಿತಿ ಪಡೆದ ಪೊಲೀಸರು ಪಂಜರಕೋಡಿ ಎಂಬಲ್ಲಿ ತೆರಳಿ ಪಿಕ್ ಅಪ್ ವಾಹನವನ್ನು ತಡೆದು ನಿಲ್ಲಿಸಿದರು. ಈ ವೇಳೆ ವಾಹನಕ್ಕೆ ಬೆಂಗಾವಲಾಗಿ ಬಂದಿದ್ದ ಕಾರಿನಲ್ಲಿದ್ದ ಬಶೀರ್ ಎಂಬಾತನು ಸ್ಥಳದಲ್ಲಿದ್ದ ಪೊಲೀಸರ ಪ್ರಾಣಕ್ಕೆ ಅಪಾಯವಾಗುವಂತೆ ತನ್ನ ಕಾರನ್ನು ಚಲಾಯಿಸಿಕೊಂಡು ಹೋಗಿ ಪರಾರಿಯಾದ. ಬಳಿಕ ಜಾನುವಾರು ಸಾಗಿಸುತ್ತಿದ್ದ ಪಿಕ್ ಆಫ್ ಅನ್ನು ಪರಿಶೀಲಿಸಿದಾಗ ಎರಡು ಜಾನುವಾರುಗಳನ್ನು ಹಿಂಸಾತ್ಮಕ ಕಟ್ಟಿರುವುದು ಪತ್ತೆಯಾಗಿದೆ. ಈ ಬಗ್ಗೆ ಪಿಕ್ ಅಪ್ ಚಾಲಕನಲ್ಲಿ ವಿಚಾರಿಸಿದಾಗ ಯಾವುದೇ ಪರವಾನಿಗೆ ಪಡೆಯದೇ ಜಾನುವಾರುಗಳನ್ನು ವಧೆ ಮಾಡಲು ಸಾಗಿಸುತ್ತಿರುವುದಾಗಿ ತಿಳಿದು ಬಂತು. ಕೃತ್ಯಕ್ಕೆ ಬಳಸಿದ ವಾಹನ, ಎರಡು ಜಾನುವಾರುಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಚಾಲಕ ಹನೀಪ್ ಹಾಗೂ ಬಶೀರ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…