ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ವಿಟ್ಲ ಪೊಲೀಸರು ಪತ್ತೆ ಮಾಡಿ ವಾಹನ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿ ಬಶೀರ್ ಬಂತಾ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದು, ಚಾಲಕ ಬಾಳೆಪುಣಿ ನಿವಾಸಿ ಹನೀಫ್ (44) ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.
ಮೇ 21ರಂದು ಬೆಳಗ್ಗೆ ಅಕ್ರಮ ಗೋಸಾಗಾಟದ ಮಾಹಿತಿ ಪಡೆದ ಪೊಲೀಸರು ಪಂಜರಕೋಡಿ ಎಂಬಲ್ಲಿ ತೆರಳಿ ಪಿಕ್ ಅಪ್ ವಾಹನವನ್ನು ತಡೆದು ನಿಲ್ಲಿಸಿದರು. ಈ ವೇಳೆ ವಾಹನಕ್ಕೆ ಬೆಂಗಾವಲಾಗಿ ಬಂದಿದ್ದ ಕಾರಿನಲ್ಲಿದ್ದ ಬಶೀರ್ ಎಂಬಾತನು ಸ್ಥಳದಲ್ಲಿದ್ದ ಪೊಲೀಸರ ಪ್ರಾಣಕ್ಕೆ ಅಪಾಯವಾಗುವಂತೆ ತನ್ನ ಕಾರನ್ನು ಚಲಾಯಿಸಿಕೊಂಡು ಹೋಗಿ ಪರಾರಿಯಾದ. ಬಳಿಕ ಜಾನುವಾರು ಸಾಗಿಸುತ್ತಿದ್ದ ಪಿಕ್ ಆಫ್ ಅನ್ನು ಪರಿಶೀಲಿಸಿದಾಗ ಎರಡು ಜಾನುವಾರುಗಳನ್ನು ಹಿಂಸಾತ್ಮಕ ಕಟ್ಟಿರುವುದು ಪತ್ತೆಯಾಗಿದೆ. ಈ ಬಗ್ಗೆ ಪಿಕ್ ಅಪ್ ಚಾಲಕನಲ್ಲಿ ವಿಚಾರಿಸಿದಾಗ ಯಾವುದೇ ಪರವಾನಿಗೆ ಪಡೆಯದೇ ಜಾನುವಾರುಗಳನ್ನು ವಧೆ ಮಾಡಲು ಸಾಗಿಸುತ್ತಿರುವುದಾಗಿ ತಿಳಿದು ಬಂತು. ಕೃತ್ಯಕ್ಕೆ ಬಳಸಿದ ವಾಹನ, ಎರಡು ಜಾನುವಾರುಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಚಾಲಕ ಹನೀಪ್ ಹಾಗೂ ಬಶೀರ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…
ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…
ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…
ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…
ಬಂಟ್ವಾಳ: ನೇತ್ರಾವತಿ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಬಂಟ್ವಾಳ : ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಯುವಕನೋರ್ವನ ಮೃತದೇಹ ಗುರುವಾರ ಪತ್ತೆಯಾಗಿದೆ.…
ಉಡುಪಿ :ಸಂಚಾರ ನಿಯಮ ಉಲ್ಲಂಘನೆ ಹಾಗೂ ಅತಿ ವೇಗದ ಚಾಲನೆಗೆ ಕಡಿವಾಣ ಹಾಕಲು ಜಿಲ್ಲೆಯಾದ್ಯಂತ ಹೈಟೆಕ್ ಸ್ಪೀಡ್ ರಾಡಾರ್ ಕ್ಯಾಮೆರಾ…