Featured

ವಿಟ್ಲ : ಛದ್ಮವೇಶದ ಮೂಲಕ ದೈವಾರಾಧನೆ ಪ್ರದರ್ಶನ ; ತೀವ್ರ ಆಕ್ರೋಶ – Vishwanews24

ವಿಟ್ಲ : ಛದ್ಮವೇಶದ ಮೂಲಕ ದೈವಾರಾಧನೆ ಪ್ರದರ್ಶನ – ತೀವ್ರ ಆಕ್ರೋಶ

ಬಂಟ್ವಾಳ: ವಿಟ್ಲದ ಖಾಸಗಿ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವೊಂದರಲ್ಲಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಕಾಂತಾರ ಚಿತ್ರದ ದೈವಾರಾಧನೆಯ ಸನ್ನಿವೇಶವನ್ನು ಛದ್ಮವೇಶದ ಮೂಲಕ ಪ್ರದರ್ಶಿಸಿದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ರಿಷಬ್‌ ಶೆಟ್ಟಿ ಅಭಿನಯದ ಕಾಂತಾರ ಚಲನಚಿತ್ರ ಇನ್ನಿಲ್ಲದಂತೆ ಯಶಸ್ವಿ ಕಂಡ ಬಳಿಕ ಎಲ್ಲೆಡೆ ದೈವಾರಾಧನೆ, ಭೂತಾರಾಧನೆ ಬಗ್ಗೆ ಜನತೆಗೆ ಒಲವು ಜಾಸ್ತಿಯಾಗಿದೆ. ಇದೇ ವೇಳೆ ಕೆಲವರು ಭೂತಾರಾಧನೆಯ ವೇಷ ಹಾಕಿಕೊಂಡು ವೇದಿಕೆಗೆ ಏರಿ ದೈವಕ್ಕೆ ಅಪಚಾರ ಎಸಗುವ ಕೆಲಸ ಮಾಡುತ್ತಿದ್ದಾರೆ.

ಟಿವಿಗಳಲ್ಲಿನ ರಿಯಾಲಿಟಿ ಶೋಗಳಲ್ಲಿ ಕಾಂತಾರ ಚಲನಚಿತ್ರದಲ್ಲಿ ಕಾಣುವ ಪಂಜುರ್ಲಿಯಂತೆ ವೇಷಧರಿಸಿ ಹಾಡು ಹಾಕಿ ಕುಣಿದು ಚಪ್ಪಾಳೆ ಗಿಟಿಸುವುದಕ್ಕೆ ದೈವಾರಾಧಕರು ಹಾಗೂ ತುಳುನಾಡಿನ ಜನತೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೀಗ ಖಾಸಗಿ ಶಾಲೆಯ ಬಾಲಕನೊಬ್ಬ ಕೈಯಲ್ಲಿ ದೈವದ ಆಯುಧವನ್ನು ಹಿಡಿದುಕೊಂಡು ನರ್ತಿಸುವ ಸನ್ನಿವೇಶವನ್ನು ನೆರೆದ ಪುಟ್ಟ ಮಕ್ಕಳು ಹಾಗೂ ಶಿಕ್ಷಕರು ಕೈಚಪ್ಪಾಳೆ ತಟ್ಟಿ ಪ್ರೋತ್ಸಾಹಿಸುತ್ತಿರುವುದು ಕೂಡಾ ಕಂಡು ಬಂದಿದೆ. ಒಟ್ಟಿನಲ್ಲಿ ಪೂಜ್ಯ ಭಾವನೆಯಿಂದ ಕಾಣಬೇಕಾದ ದೈವದ ನರ್ತನವನ್ನು ಶಾಲಾ ಕಾಲೇಜಿನ ವೇದಿಕೆಗಳಲ್ಲೂ ತಂದಿರುವುದಕ್ಕೆ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago