Featured

ವಿಟ್ಲ : ಛದ್ಮವೇಶದ ಮೂಲಕ ದೈವಾರಾಧನೆ ಪ್ರದರ್ಶನ ; ತೀವ್ರ ಆಕ್ರೋಶ – Vishwanews24

ವಿಟ್ಲ : ಛದ್ಮವೇಶದ ಮೂಲಕ ದೈವಾರಾಧನೆ ಪ್ರದರ್ಶನ – ತೀವ್ರ ಆಕ್ರೋಶ

ಬಂಟ್ವಾಳ: ವಿಟ್ಲದ ಖಾಸಗಿ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವೊಂದರಲ್ಲಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಕಾಂತಾರ ಚಿತ್ರದ ದೈವಾರಾಧನೆಯ ಸನ್ನಿವೇಶವನ್ನು ಛದ್ಮವೇಶದ ಮೂಲಕ ಪ್ರದರ್ಶಿಸಿದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ರಿಷಬ್‌ ಶೆಟ್ಟಿ ಅಭಿನಯದ ಕಾಂತಾರ ಚಲನಚಿತ್ರ ಇನ್ನಿಲ್ಲದಂತೆ ಯಶಸ್ವಿ ಕಂಡ ಬಳಿಕ ಎಲ್ಲೆಡೆ ದೈವಾರಾಧನೆ, ಭೂತಾರಾಧನೆ ಬಗ್ಗೆ ಜನತೆಗೆ ಒಲವು ಜಾಸ್ತಿಯಾಗಿದೆ. ಇದೇ ವೇಳೆ ಕೆಲವರು ಭೂತಾರಾಧನೆಯ ವೇಷ ಹಾಕಿಕೊಂಡು ವೇದಿಕೆಗೆ ಏರಿ ದೈವಕ್ಕೆ ಅಪಚಾರ ಎಸಗುವ ಕೆಲಸ ಮಾಡುತ್ತಿದ್ದಾರೆ.

ಟಿವಿಗಳಲ್ಲಿನ ರಿಯಾಲಿಟಿ ಶೋಗಳಲ್ಲಿ ಕಾಂತಾರ ಚಲನಚಿತ್ರದಲ್ಲಿ ಕಾಣುವ ಪಂಜುರ್ಲಿಯಂತೆ ವೇಷಧರಿಸಿ ಹಾಡು ಹಾಕಿ ಕುಣಿದು ಚಪ್ಪಾಳೆ ಗಿಟಿಸುವುದಕ್ಕೆ ದೈವಾರಾಧಕರು ಹಾಗೂ ತುಳುನಾಡಿನ ಜನತೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೀಗ ಖಾಸಗಿ ಶಾಲೆಯ ಬಾಲಕನೊಬ್ಬ ಕೈಯಲ್ಲಿ ದೈವದ ಆಯುಧವನ್ನು ಹಿಡಿದುಕೊಂಡು ನರ್ತಿಸುವ ಸನ್ನಿವೇಶವನ್ನು ನೆರೆದ ಪುಟ್ಟ ಮಕ್ಕಳು ಹಾಗೂ ಶಿಕ್ಷಕರು ಕೈಚಪ್ಪಾಳೆ ತಟ್ಟಿ ಪ್ರೋತ್ಸಾಹಿಸುತ್ತಿರುವುದು ಕೂಡಾ ಕಂಡು ಬಂದಿದೆ. ಒಟ್ಟಿನಲ್ಲಿ ಪೂಜ್ಯ ಭಾವನೆಯಿಂದ ಕಾಣಬೇಕಾದ ದೈವದ ನರ್ತನವನ್ನು ಶಾಲಾ ಕಾಲೇಜಿನ ವೇದಿಕೆಗಳಲ್ಲೂ ತಂದಿರುವುದಕ್ಕೆ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago