ವಿಟ್ಲ: ಜಾತ್ರೆಯ ಸಂತೆಯಲ್ಲಿ ವ್ಯಾಪಾರ ನಡೆಸುವ ವ್ಯಾಪಾರಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಗಣೇಶ್ ಕಡಂಬು, ಮಂಜುನಾಥ ಮತ್ತು ಇತರ ನಾಲ್ಕು ಮಂದಿ ಎಂದು ಗುರುತಿಸಲಾಗಿದೆ.
ಶ್ರೀ ಪಂಚಲಿಗೇಶ್ವರ ದೇವಸ್ಥಾನದ ಪಕ್ಕದಲ್ಲಿ ಜಾತ್ರೆಯ ಸಂದರ್ಭ ದೇವಸ್ಥಾನದ ಅನುಮತಿಯಂತೆ ಫ್ಯಾನ್ಸಿ ಮಳಿಗೆ ಇಟ್ಟು ವ್ಯಾಪಾರ ಮಾಡಿಕೊಂಡಿದ್ದ ಸುರೇಶ್ ದಾಸ್ ಎಂಬವರಿಗೆ ಆರು ಮಂದಿ ಆರೋಪಿಗಳು ಹಲ್ಲೆ ನಡೆಸಿದ್ದಾರೆನ್ನಲಾದ ಘಟನೆ ನಡೆದಿದೆ.
ಸುರೇಶ್ ದಾಸ್ ಎಂಬವರು ದೇವಸ್ಥಾನದ ಅನುಮತಿಯಂತೆ ಫ್ಯಾನ್ಸಿ ಮಳಿಗೆ ಇಟ್ಟು ವ್ಯಾಪಾರ ಮಾಡಿಕೊಂಡಿದ್ದರು. ರಾತ್ರಿ 12.30ಕ್ಕೆ ವ್ಯಾಪಾರ ಮುಗಿಸಿ ಮಳಿಗೆಯನ್ನು ಮುಚ್ಚುವ ಸಮಯದಲ್ಲಿ ಗಣೇಶ್ ಕಡಂಬು, ಮಂಜುನಾಥ ಮತ್ತು ಇತರ ನಾಲ್ಕು ಯುವಕರು ಬಂದು ಅಂಗಡಿ ಏಕೆ ಬಂದ್ ಮಾಡುತ್ತಿಯಾ ಎಂದು ಹೇಳಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿರುವುದಾಗಿ ದೂರು ನೀಡಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…