ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ನ ಪ್ರಥಮ ಅವಧಿಗೆ ಅಧ್ಯಕ್ಷರಾಗಿ ಕರುಣಾಕರ ನಾಯ್ತೋಟ್ಟು, ಉಪಾಧ್ಯಕ್ಷೆಯಾಗಿ ಸಂಗೀತಾ ಜಗದೀಶ ಪಾಣೆಮಜಲು ಆಯ್ಕೆಯಾಗಿದ್ದಾರೆ.
ವಿಟ್ಲ ಪಟ್ಟಣ ಪಂಚಾಯತ್ ಗೆ ಚುನಾವಣೆ ನಡೆದು 2 ವರ್ಷ 8 ತಿಂಗಳು ಕಳೆದ ಬಳಿಕ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದೆ.
ಒಟ್ಟು 18 ವಾರ್ಡ್ ಗಳಲ್ಲಿ ಬಿಜೆಪಿ ಬೆಂಬಲಿತರು 12, ಕಾಂಗ್ರೆಸ್ ಬೆಂಬಲಿತರು 5 ಮತ್ತು ಎಸ್ ಡಿಪಿ ಐ ಬೆಂಬಲಿತರು 1 ಚುನಾಯಿತರಾಗಿದ್ದರು.
ಅಧ್ಯಕ್ಷ ಸ್ಥಾನವು ಹಿಂದುಳಿದ ವರ್ಗ ಬಿ ಮತ್ತು ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಮಹಿಳೆ ಮೀಸಲಾಗಿತ್ತು.
ಸ್ಥಾನಕ್ಕೆ ಕರುಣಾಕರ, ಉಪಾಧ್ಯಕ್ಷ ಸ್ಥಾನಕ್ಕೆ ಸಂಗೀತಾ ಪಾಣೆಮಜಲು ನಾಮಪತ್ರ ಸಲ್ಲಿಸಿದ್ದರು. ಆದರೆ ಕಾಂಗ್ರೆಸ್ ನಲ್ಲಿ ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಾನ ಅರ್ಹ ಅಭ್ಯರ್ಥಿಗಳಿಲ್ಲದ ಕಾರಣ ಕರುಣಾಕರ ಅವಿರೋಧವಾಗಿ ಆಯ್ಕೆಯಾದರು.
ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ನಿಂದ ಪದ್ಮಿನಿ ನಾಮಪತ್ರ ಸ್ಪರ್ಧಿಸಿದ್ದರು.
ತಹಶೀಲ್ದಾರ್ ಅರ್ಚನಾ ಭಟ್ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.
ಸಂಸದ ಕ್ಯಾ.ಬ್ರಿಜೇಶ್ ಚೌಟ, ಮಾಜಿ ಶಾಸಕ ಸಂಜೀವ ಮಠಂದೂರು ಅವರು ನೂತನ ಅಧ್ಯಕ್ಷ-ಉಪಾಧ್ಯಕ್ಷರನ್ನು ಅಭಿನಂದಿಸಿದರು.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…