Featured

ವಿಟ್ಲ: ಮಲಗಿದಲ್ಲೇ ವ್ಯಕ್ತಿ ಅನುಮಾನಸ್ಪದ ಸಾವು ಪ್ರಕರಣ :  ಪತ್ನಿಯೇ ಕತ್ತು ಹಿಸುಕಿ ಕೊಲೆ – Vishwanews24

ವಿಟ್ಲ: ಮಲಗಿದಲ್ಲೇ ವ್ಯಕ್ತಿ ಅನುಮಾನಸ್ಪದ ಸಾವು ಪ್ರಕರಣ :  ಪತ್ನಿಯೇ ಕತ್ತು ಹಿಸುಕಿ ಕೊಲೆ

ವಿಟ್ಲ: ಕೋಣೆಯಲ್ಲಿ ಮಲಗಿದಲ್ಲಿಯೇ ವ್ಯಕ್ತಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಪತ್ನಿ ಹಾಗೂ ಪತ್ನಿಯ ಪರಿಚಯಸ್ಥ ಸೇರಿಕೊಂಡು ಕುತ್ತಿಗೆ ಹಿಸುಕಿ ಕೊಲೆ ಮಾಡಿರುವುದು ಪೊಲೀಸ್ ತನಿಖೆಯಿಂದ ದೃಢಪಟ್ಟಿದ್ದು, ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅರವಿಂದ ಅವರ ಪತ್ನಿ ಆಶಾ ಹಾಗೂ ಮನೆಯ ಸೆಂಟ್ರಿಂಗ್‌ ಕೆಲಸ ನಿರ್ವಹಿಸಿದ ಯೋಗೀಶ ಗೌಡ ಆರೋಪಿಗಳಾಗಿದ್ದಾರೆ.

ಅರವಿಂದ ಭಾಸ್ಕರ ಅವರು ಸುಮಾರು 2 ವರ್ಷಗಳ ಹಿಂದೆ ಹೊಸ ಮನೆಯನ್ನು ಕಟ್ಟಲು ಆರಂಭಿಸಿದ್ದು, ಅದರ ಸೆಂಟ್ರಿಂಗ್‌ ಕೆಲಸವನ್ನು ಯೋಗೀಶ ಗೌಡ ಎಂಬವರು ನಿರ್ವಹಿಸುತ್ತಿದ್ದು, ಆತ ಅರವಿಂದ ಭಾಸ್ಕರನ ಪತ್ನಿ ಆಶಾಳೊಂದಿಗೆ ತುಂಬಾ ಅನ್ಯೋನ್ಯವಾಗಿದ್ದ.

ಅರವಿಂದ ಭಾಸ್ಕರ ಅವರು ಅಡಿಕೆ ಮಾರಾಟ ಮಾಡಿ ಬಂದ ಹಣವನ್ನು ದುಂದುವೆಚ್ಚ ಮಾಡುತ್ತಿದ್ದ ಬಗ್ಗೆ ಆತನ ಪತ್ನಿ ಆಕ್ಷೇಪಿಸುತ್ತಿದ್ದುದಲ್ಲದೇ, ಯೋಗೀಶ ಆಶಾಳೊಂದಿಗೆ ಸೇರಿಕೊಂಡು ಅರವಿಂದ ಭಾಸ್ಕರನಿಗೆ ಹಲ್ಲೆ ನಡೆಸುತ್ತಿದ್ದರು. ಇದರಿಂದ ಹೆದರಿ ರಾತ್ರಿ ವೇಳೆಯಲ್ಲಿ ಮನೆಯ ಕೋಣೆಯ ಬಾಗಿಲಿನ ಚಿಲಕವನ್ನು ಹಾಕಿ ಮಲಗುತ್ತಿರುವ ಬಗ್ಗೆ ಸುಮಾರು 1 ತಿಂಗಳ ಹಿಂದೆ ತಿಳಿಸಿದ್ದರು.

ವಿಟ್ಲ ಕಸಬಾ ಗ್ರಾಮದ ಮೇಗಿನಪೇಟೆ ನಿವಾಸಿ ರಘುನಾಥ ಎಂಬವರು ನೀಡಿದ ದೂರಿನ ವಿವರ ಇಂತಿದೆ: ಫೆ. 26ರಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ ತಂದೆಯವರಿಗೆ ಕರೆ ಮಾಡಿದ ಆಶಾ, ಪತಿ ನಿನ್ನೆ ರಾತ್ರಿ 10 ಗಂಟೆಗೆ ಕೋಣೆಯಲ್ಲಿ ಮಲಗಿದ್ದು, ಬೆಳಗ್ಗಿನ ಜಾವ 7.30 ಸುಮಾರಿಗೆ ನೋಡುವಾಗ ಪತಿ ಏಳುತ್ತಿಲ್ಲ, ಮನೆಗೆ ಬನ್ನಿ ಎಂದು ತಿಳಿಸಿದ್ದಾಳೆ. ಬಳಿಕ ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಬಂದ ವಿಚಾರ ತಿಳಿದು ಅಲ್ಲಿಗೆ ಹೋದಾಗ ವೈದ್ಯರು ಅರವಿಂದ ಭಾಸ್ಕರನನ್ನು ಪರೀಕ್ಷಿಸಿ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಮೃತದೇಹದ ಸ್ಥಿತಿಗತಿಯನ್ನು ಪರಿಶೀಲಿಸಿದಾಗ ಕುತ್ತಿಗೆಯನ್ನು ಅಮುಕಿ ಹಿಡಿದು ಉಸಿರುಗಟ್ಟಿಸಿ ಕೊಲೆ ಮಾಡಿರುವ ಸಂಶಯ ವ್ಯಕ್ತವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

17 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

17 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago