Featured

ವಿಟ್ಲ: ಮಲಗಿದಲ್ಲೇ ವ್ಯಕ್ತಿ ಅನುಮಾನಸ್ಪದ ಸಾವು ಪ್ರಕರಣ :  ಪತ್ನಿಯೇ ಕತ್ತು ಹಿಸುಕಿ ಕೊಲೆ – Vishwanews24

ವಿಟ್ಲ: ಮಲಗಿದಲ್ಲೇ ವ್ಯಕ್ತಿ ಅನುಮಾನಸ್ಪದ ಸಾವು ಪ್ರಕರಣ :  ಪತ್ನಿಯೇ ಕತ್ತು ಹಿಸುಕಿ ಕೊಲೆ

ವಿಟ್ಲ: ಕೋಣೆಯಲ್ಲಿ ಮಲಗಿದಲ್ಲಿಯೇ ವ್ಯಕ್ತಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಪತ್ನಿ ಹಾಗೂ ಪತ್ನಿಯ ಪರಿಚಯಸ್ಥ ಸೇರಿಕೊಂಡು ಕುತ್ತಿಗೆ ಹಿಸುಕಿ ಕೊಲೆ ಮಾಡಿರುವುದು ಪೊಲೀಸ್ ತನಿಖೆಯಿಂದ ದೃಢಪಟ್ಟಿದ್ದು, ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅರವಿಂದ ಅವರ ಪತ್ನಿ ಆಶಾ ಹಾಗೂ ಮನೆಯ ಸೆಂಟ್ರಿಂಗ್‌ ಕೆಲಸ ನಿರ್ವಹಿಸಿದ ಯೋಗೀಶ ಗೌಡ ಆರೋಪಿಗಳಾಗಿದ್ದಾರೆ.

ಅರವಿಂದ ಭಾಸ್ಕರ ಅವರು ಸುಮಾರು 2 ವರ್ಷಗಳ ಹಿಂದೆ ಹೊಸ ಮನೆಯನ್ನು ಕಟ್ಟಲು ಆರಂಭಿಸಿದ್ದು, ಅದರ ಸೆಂಟ್ರಿಂಗ್‌ ಕೆಲಸವನ್ನು ಯೋಗೀಶ ಗೌಡ ಎಂಬವರು ನಿರ್ವಹಿಸುತ್ತಿದ್ದು, ಆತ ಅರವಿಂದ ಭಾಸ್ಕರನ ಪತ್ನಿ ಆಶಾಳೊಂದಿಗೆ ತುಂಬಾ ಅನ್ಯೋನ್ಯವಾಗಿದ್ದ.

ಅರವಿಂದ ಭಾಸ್ಕರ ಅವರು ಅಡಿಕೆ ಮಾರಾಟ ಮಾಡಿ ಬಂದ ಹಣವನ್ನು ದುಂದುವೆಚ್ಚ ಮಾಡುತ್ತಿದ್ದ ಬಗ್ಗೆ ಆತನ ಪತ್ನಿ ಆಕ್ಷೇಪಿಸುತ್ತಿದ್ದುದಲ್ಲದೇ, ಯೋಗೀಶ ಆಶಾಳೊಂದಿಗೆ ಸೇರಿಕೊಂಡು ಅರವಿಂದ ಭಾಸ್ಕರನಿಗೆ ಹಲ್ಲೆ ನಡೆಸುತ್ತಿದ್ದರು. ಇದರಿಂದ ಹೆದರಿ ರಾತ್ರಿ ವೇಳೆಯಲ್ಲಿ ಮನೆಯ ಕೋಣೆಯ ಬಾಗಿಲಿನ ಚಿಲಕವನ್ನು ಹಾಕಿ ಮಲಗುತ್ತಿರುವ ಬಗ್ಗೆ ಸುಮಾರು 1 ತಿಂಗಳ ಹಿಂದೆ ತಿಳಿಸಿದ್ದರು.

ವಿಟ್ಲ ಕಸಬಾ ಗ್ರಾಮದ ಮೇಗಿನಪೇಟೆ ನಿವಾಸಿ ರಘುನಾಥ ಎಂಬವರು ನೀಡಿದ ದೂರಿನ ವಿವರ ಇಂತಿದೆ: ಫೆ. 26ರಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ ತಂದೆಯವರಿಗೆ ಕರೆ ಮಾಡಿದ ಆಶಾ, ಪತಿ ನಿನ್ನೆ ರಾತ್ರಿ 10 ಗಂಟೆಗೆ ಕೋಣೆಯಲ್ಲಿ ಮಲಗಿದ್ದು, ಬೆಳಗ್ಗಿನ ಜಾವ 7.30 ಸುಮಾರಿಗೆ ನೋಡುವಾಗ ಪತಿ ಏಳುತ್ತಿಲ್ಲ, ಮನೆಗೆ ಬನ್ನಿ ಎಂದು ತಿಳಿಸಿದ್ದಾಳೆ. ಬಳಿಕ ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಬಂದ ವಿಚಾರ ತಿಳಿದು ಅಲ್ಲಿಗೆ ಹೋದಾಗ ವೈದ್ಯರು ಅರವಿಂದ ಭಾಸ್ಕರನನ್ನು ಪರೀಕ್ಷಿಸಿ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಮೃತದೇಹದ ಸ್ಥಿತಿಗತಿಯನ್ನು ಪರಿಶೀಲಿಸಿದಾಗ ಕುತ್ತಿಗೆಯನ್ನು ಅಮುಕಿ ಹಿಡಿದು ಉಸಿರುಗಟ್ಟಿಸಿ ಕೊಲೆ ಮಾಡಿರುವ ಸಂಶಯ ವ್ಯಕ್ತವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್‌ – vishwanews24

ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್‌ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…

1 hour ago

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ – vishwanews24

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…

22 hours ago

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ – vishwanews24

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…

23 hours ago

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ – vishwanews24

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ…

24 hours ago

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ – vishwanews24

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ  ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…

24 hours ago

ನಾಳೆ SSLC ಫಲಿತಾಂಶ  ಪ್ರಕಟ – vishwanews24

ನಾಳೆ SSLC ಫಲಿತಾಂಶ  ಪ್ರಕಟ ಬೆಂಗಳೂರು: ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ  ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.…

2 days ago