ವಿಟ್ಲ: ಯುವಕನನ್ನು ಬೆಂಕಿ ಹಾಕಿ ಸುಟ್ಟು ಹಾಕಿದ ಪ್ರಕರಣ  : ಅನೈತಿಕ ಚಟುವಟಿಕೆಗೆ ಉದ್ಯೋಗ ಅಡ್ಡಿ ಎಂದು ಕೊಲೆ – Vishwanews24

Featured, ದಕ್ಷಿಣ ಕನ್ನಡ

ವಿಟ್ಲ: ಯುವಕನನ್ನು ಬೆಂಕಿ ಹಾಕಿ ಸುಟ್ಟು ಹಾಕಿದ ಪ್ರಕರಣ  : ಅನೈತಿಕ ಚಟುವಟಿಕೆಗೆ ಉದ್ಯೋಗ ಅಡ್ಡಿ ಎಂದು ಕೊಲೆ – Vishwanews24

ಸುರಿಬೈಲು ನಿವಾಸಿ ಸಮಾದ್ ಶವ ಮನೆಯವರಿಗೆ ಹಸ್ತಾಂತರ 

ಬಂಟ್ವಾಳ  : ಗಾಂಜ ವ್ಯಸನಿಯ ಅನೈತಿಕ ವ್ಯವಹಾರಕ್ಕೆ ಸಂಬಂಧಿಸಿದಂತೆ ಕೊಲೆಯಾದ ಯುವಕ ಸುರಿಬೈಲು ನಿವಾಸಿ ಸಮಾದ್ ನ ಶವವನ್ನು ಇಂದು ಮನೆಯವರಿಗೆ ಹಸ್ತಾಂತರ ಮಾಡಲಾಗಿದೆ.ಸ್ಥಳಕ್ಕೆ ಮಂಗಳೂರು ವಿಧಿವಿಜ್ಞಾನ ಪ್ರಯೋಗಲಾಯ ಹಾಗೂ ಕೆ.ಎಸ್.ಹೆಗ್ಡೆ ಮೆಡಿಕಲ್ ಆಸ್ಪತ್ರೆಯ ಮಹಾಬಲೇಶ್ವರ ಶೆಟ್ಟಿ ಹಾಗೂ ತಂಡ ಸ್ಥಳದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮನೆಯವರಿಗೆ ಶವವನ್ನು ಹಸ್ತಾಂತರ ಮಾಡಲಾಯಿತು.

ಘಟನೆಯ ವಿವರ

ಸುರಿಬೈಲು ನಿವಾಸಿ ಸಮಾದ್(19) ಕೊಲೆಯಾದ ಯುವಕನಾಗಿದ್ದು , ನ.1 ರಂದು ಈತನ ಕೊಲೆಯಾಗಿತ್ತು. ಸಾಲೆತ್ತೂರು ಸಮೀಪದ ಕಟ್ಟೆಪುನಿ ನಿವಾಸಿ ರಿಕ್ಷಾ ಚಾಲಕ ಅಬುಬಕ್ಕರ್ ಅವರು ಕೊಲೆ ಆರೋಪಿಯಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ: ಸುರಿಬೈಲು ನಿವಾಸಿ ಸಮಾದ್ ಶವ ಮನೆಯವರಿಗೆ ಹಸ್ತಾಂತರ - News Kannada (ನ್ಯೂಸ್ ಕನ್ನಡ)

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ತನಿಖೆಯ ದೃಷ್ಟಿಯಿಂದ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳುವ ಅವಕಾಶಗಳಿವೆ ಎಂದು ತಿಳಿದುಬಂದಿದೆ.

ಕೊಯಮತ್ತೂರು ಕಾರು ಸ್ಫೋಟ ಪ್ರಕರಣ : 45ಕ್ಕೂ ಹೆಚ್ಚು ಕಡೆ NIA ದಾಳಿ – Vishwanews24

ಸಮಾದ್ ಹಾಗೂ ಅದ್ರಾಮ ಇಬ್ಬರು ಸ್ನೇಹಿತರಾಗಿದ್ದು ಗಾಂಜಾ ವ್ಯಸನಿಗಳಾಗಿದ್ದಾರೆ, ಜೊತೆಗೆ ಇವರೊಳಗೆ ಅನೈತಿಕ ವ್ಯವಹಾರಗಳು ನಡೆಯುತ್ತಿದ್ದವು. ಈ ವಿಚಾರ ಮನೆಯವರಿಗೆ ಗೊತ್ತಾಗಿ ಬಳಿಕ ಸಮಾದ್ ನನ್ನು ಉದ್ಯೋಗಕ್ಕಾಗಿ ಬೆಂಗಳೂರಿಗೆ ಕಳುಹಿಸಿದ್ದರು. ಗಾಂಜಾ ವ್ಯಸನದ ಜೊತೆ ಅನೈತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಸಮಾದ್ ಬೆಂಗಳೂರಿನಲ್ಲಿ ಉದ್ಯೋಗಕ್ಕಾಗಿ ಹೋಗುವುದು ಅದ್ರಾಮನಿಗೆ ಇಷ್ಟವಿರಲಿಲ್ಲ. ಹಾಗಾಗಿ ಹೋಗುವದಕ್ಕೆ ಅನೇಕ ಬಾರಿ ವಿರೋಧ ವ್ಯಕ್ತಪಡಿಸಿದ್ದ ಎಂದು ಹೇಳಲಾಗಿದೆ‌. ಈ ಮಧ್ಯೆ ಅದ್ರಾಮ ಸಮಾದ್ ನನ್ನು ಊರಿಗೆ ಬರುವಂತೆ ಒತ್ತಾಯಿಸಿದ್ದು, ನ. 1 ರಂದು ಊರಿಗೆ ಬಂದಿದ್ದ ಸಮಾದ್ ಹಾಗೂ ಅದ್ರಾಮ ಇಬ್ಬರು ಸೇರಿ ಇರಾ ಜನನಿಬಿಡ ಗುಡ್ಡವೊಂದಕ್ಕೆ ಅದ್ರಾಮನ ರಿಕ್ಷಾದಲ್ಲಿ ಹೋಗಿದ್ದರು.
ಅರೋಪಿ ಪ್ರಾಥಮಿಕ ತನಿಖೆಯ ವೇಳೆ ಹೇಳಿದಂತೆ ಇಬ್ಬರು ಗಾಂಜಾ ಸೇವಿಸಿದ ಬಳಿಕ ಈತ ಬೆಂಗಳೂರಿಗೆ ತೆರಳದಂತೆ ಇವರಿಬ್ಬರ ಮಧ್ಯೆ ಜಗಳ ಆಗಿದೆ.
ಬಳಿಕ ಇಬ್ಬರೂ ‌ಗುಡ್ಡೆಯಲ್ಲಿ ಮಲಗಿದ್ದರು. ಅ ಸಂದರ್ಭದಲ್ಲಿ ಅದ್ರಾಮ ರಿಕ್ಷಾದಲ್ಲಿ ಇರಿಸಿದ್ದ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ್ದಾನೆ ಎಂಬ ಮಾಹಿತಿ ತನಿಖೆ ವೇಳೆ ಬಹಿರಂಗ ವಾಗಿದೆ ಎಂದು ಹೇಳಲಾಗಿದೆ.

ಈ ವಿಚಾರವನ್ನು ಅದ್ರಾಮ ಅವರ ಸಂಬಂಧಿಯೊರ್ವನಿಗೆ ತಿಳಿಸಿದ ಕಾರಣ ಕೊಲೆ ವಿಚಾರ ಬಹಿರಂಗ ವಾಗಿದೆ. ಅವರೆಗೆ ಅದ್ರಾಮನ ಮನೆಯವರು ಈತ ಬೆಂಗಳೂರಿಗೆ ತೆರಳಿದ್ದಾನೆ ಎಂಬುದೇ ನಂಬಿಕೆಯಾಗಿತ್ತು.

ಕೊಯಮತ್ತೂರು ಕಾರು ಸ್ಫೋಟ ಪ್ರಕರಣ : 45ಕ್ಕೂ ಹೆಚ್ಚು ಕಡೆ NIA ದಾಳಿ – Vishwanews24

ಘಟನಾ ಸ್ಥಳದಲ್ಲಿ ಶವದ ಪರೀಕ್ಷೆ ನಡೆದಿದ್ದು, ಸ್ಥಳದಲ್ಲಿ ಅಡಿಸನಲ್ ಎಸ್.ಪಿ.ಕುಮಾರ್ ಚಂದ್ರ, ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಟಿ‌.ಡಿ. ನಾಗರಾಜ್ , ಎಸ್.ಐ.ಹರೀಶ್ ಹಾಗೂ ಸಿಬ್ಬಂದಿ ಗಳು ಹಾಜರಿದ್ದರು.

Leave a Reply