Featured

ವಿಟ್ಲ: ರಾಜೇಶ್ ಬಾಳೆಕಲ್ಲು ಬಿಜೆಪಿ ಸೇರ್ಪಡೆ ; ಅಸಮಧಾನದಿಂದ ಸಭೆಯಲ್ಲೇ ದಿಕ್ಕಾರ ಕೂಗಿದ ಕಾರ್ಯಕರ್ತರು – Vishwanews24

ವಿಟ್ಲ: ರಾಜೇಶ್ ಬಾಳೆಕಲ್ಲು ಬಿಜೆಪಿ ಸೇರ್ಪಡೆ ; ಬಿಜೆಪಿಯಲ್ಲಿ ಅಸಮಧಾನ –  ಸಭೆಯಲ್ಲೇ ದಿಕ್ಕಾರ ಕೂಗಿದ ಕಾರ್ಯಕರ್ತರು – Vishwanews24

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ವಿರೋಧ ಪಕ್ಷದ ಮಾಜಿ ನಾಯಕ, ಕಾಂಗ್ರೆಸ್ ಮುಖಂಡ ಅಶೋಕ್ ಕುಮಾರ್ ಶೆಟ್ಟಿ ಮತ್ತು ಮಾಣಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷ, ಜಿಲ್ಲಾ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ರಾಜೇಶ್ ಕುಮಾರ್ ಬಾಳೆಕಲ್ಲು ಅವರು ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು. ರಾಜೇಶ್ ಬಾಳೆಕಲ್ಲು ಬಿಜೆಪಿ ಸೇರ್ಪಡೆ ವೇಳೆ ಅವರ ಗ್ರಾಮದ ಬಿಜೆಪಿ ಕಾರ್ಯಕರ್ತರೆ ದಿಕ್ಕಾರ ಕೂಗಿದ ಘಟನೆ ನಡೆಯಿತು.

ಕಬಕದಲ್ಲಿ ಪುತ್ತೂರು ಗ್ರಾಮಾಂತರ ಬಿಜೆಪಿ ವತಿಯಿಂದ ನಡೆದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯಲ್ಲಿ ತಮ್ಮ ಬೆಂಬಲಿಗರೊಂದಿಗೆ ರಾಜೇಶ್ ಬಾಳೆಕಲ್ಲುರವರು ಬಿಜೆಪಿ ಸೇರ್ಪಡೆಗೊಂಡರು.

ರಾಜೇಶ್ ಬಾಳೆಕಲ್ಲು ಅವರನ್ನು ಈ ಹಿಂದೆ ಕಾಂಗ್ರೆಸ್ ಪಕ್ಷ ಉಚ್ಚಾಟಿಸಿತ್ತು. ಅಶೋಕ್ ಶೆಟ್ಟಿ ಮತ್ತು ರಾಜೇಶ್ ಕುಮಾರ್ ಅವರು ಕೆಲಸಮಯಗಳಿಂದ ಬಿಜೆಪಿಯಲ್ಲಿ ಕಾಣಿಸಿಕೊಂಡಿದ್ದರು. ಇಂದು ಅಧಿಕೃತವಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಎಸ್ ಅಂಗಾರ, ವಿಧಾನ ಪರಿಷತ್ ಅಭ್ಯರ್ಥಿ, ಪುತ್ತೂರು ಶಾಸಕ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡರು.

ರಾಜೇಶ್ ಬಾಳೆಕಲ್ಲು ಬಿಜೆಪಿ ಬರುವುದು ಮಾಣಿಲದ ಹಿರಿಯ ಬಿಜೆಪಿ ಕಾರ್ಯಕರ್ತರಿಗೆ ವಿರೋಧವಿತ್ತು. ರಾಜೇಶ್ ಬಾಳೆಕಲ್ಲುರವರನ್ನು ಬಿಜೆಪಿಗೆ ಸೇರಿಸುವ ವಿಚಾರಕ್ಕೆ ಸಂಬಂದಿಸಿ ಅಲ್ಲಿನ ಬಿಜೆಪಿ ಕಾರ್ಯಕರ್ತರು ತೀವ್ರವಿರೋಧ ವ್ಯಕ್ತಪಡಿಸಿದ್ದರು. ಆದರೆ ಅವರ ಮಾತನ್ನು ಗಣನೆಗೆ ತೆಗೆದುಕೊಳ್ಳದೆ ಕಾರ್ಯಕ್ರಮದಲ್ಲಿ ಹಿರಿಯರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಳಿಸರುವುದು ಹಿರಿಯ ಬಿಜೆಪಿ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿತ್ತು. ಇದರಿಂದಾಗಿ ಅವರು ಪಕ್ಷ ಸೇರ್ಪಡೆ ವೇಳೆ ರಾಜೇಶ್ ಕುಮಾರ್ ಬಾಳೆಕಲ್ಲುರವರಿಗೆ ದಿಕ್ಕಾರ ಕೂಗಿದರು.

 

Vishwa News 24

Recent Posts

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು -vishwanews24

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…

14 hours ago

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ -vishwanews24

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್‌…

16 hours ago

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು -vishwanews24

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…

16 hours ago

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ -vishwanews24

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…

17 hours ago

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ -vishwanews24

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…

17 hours ago

ಶಿರ್ವ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು -vishwanews24

ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…

17 hours ago