ವಿಟ್ಲ : ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವೇಳೆ ಆಟೋ ರಿಕ್ಷಾ ಚಾಲಕರೋರ್ವರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮಾಣಿ ಸಮೀಪ ಇಂದು ಬೆಳಿಗ್ಗೆ ನಡೆದಿದೆ.
ಕಲ್ಲಡ್ಕ ಕುದ್ರೆಬೆಟ್ಟು ನಿವಾಸಿ ಜಯಕರ ಪೂಜಾರಿ (45) ಮೃತಪಟ್ಟವರು.
ಜಯಕರ ಪೂಜಾರಿ ಅವರು ಆಟೋ ರಿಕ್ಷಾ ಚಾಲಕರಾಗಿದ್ದು, ಪ್ರತಿದಿನ ಬೆಳಗ್ಗೆ ಕೆಲ ಮಕ್ಕಳನ್ನು ಶಾಲೆಗೆ ಬಿಡುತ್ತಿದ್ದರು. ಎಂದಿನಂತೆ ಇಂದು ಮಕ್ಕಳನ್ನು ಆಟೋ ರಿಕ್ಷಾದಲ್ಲಿ ಶಾಲೆಗೆ ಕರೆದುಕೊಂಡು ಬರುತ್ತಿದ್ದರು. ಈ ವೇಳೆ ಮಕ್ಕಳು ಜೆರಾಕ್ಸ್ ಶಾಪ್ ಹತ್ತಿರ ಆಟೋ ನಿಲ್ಲಿಸಲು ಸೂಚಿಸಿದ್ದು, ಈ ವೇಳೆ ಆಟೋ ರಿಕ್ಷಾ ನಿಲ್ಲಿಸಿದ್ದರು. ಈ ನಡುವೆ ಮಕ್ಕಳು ಜೆರಾಕ್ಸ್ ತೆಗೆದು ಹಿಂದಿರುಗಿದ ವೇಳೆ ಜಯಕರ ಪೂಜಾರಿ ಅವರು ಕುಸಿದು ಬಿದ್ದಿದ್ದರು ಎನ್ನಲಾಗಿದೆ.
ತೊಡಿಕಾನ : ಆಕಸ್ಮಿಕವಾಗಿ ಹೊಳೆಗೆ ಬಿದ್ದು ಪಾರೆಸ್ಟ್ ವಾಚರ್ ಸಾವು – Vishwanews24
ತಕ್ಷಣ ಅವರನ್ನು ಹತ್ತಿರದ ಕ್ಲಿನಿಕ್ ಗೆ ಚಿಕಿತ್ಸೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಅವರನ್ನು ಪರೀಕ್ಷಿಸಿದ ವೈದ್ಯರು ಅವರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…