Featured

ವಿಟ್ಲ: ಹಿಂದು ಮುಸ್ಲಿಮ್ ಪ್ರೇಮ ಪ್ರಕರಣ : ಸಹಕರಿಸಿದ 18 ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ – Vishwanews24

ವಿಟ್ಲ: ಹಿಂದು ಯುವತಿ ಹಾಗೂ ಮುಸ್ಲಿಮ್ ಯುವಕನ ನಡುವಿನ ಪ್ರೇಮ ಪ್ರಕರಣ : ಸಹಕರಿಸಿದ ಹಾಗೂ ವಿವಾದ ಮಾಡಲು ಹೋದ 18 ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ-ಪರೀಕ್ಷೆಗಷ್ಟೇ ಹಾಜರಾಗಲು ಅವಕಾಶ

ವಿಟ್ಲ: ಖಾಸಗೀ ಪದವಿಪೂರ್ವ ಕಾಲೇಜಿನ ಹಿಂದು ಯುವತಿ ಹಾಗೂ ಮುಸ್ಲಿಂ ಯುವಕನ ನಡುವಿನ ಪ್ರೇಮ ಪ್ರಕರಣ ವಿಚಾರದಲ್ಲಿ ಸಹಕರಿಸಿದ ಹಾಗೂ ವಿವಾದ ಮಾಡಲು ಹೋದ ವಿದ್ಯಾರ್ಥಿಗಳನ್ನು ಪೋಷಕರ ಸಮ್ಮುಖದಲ್ಲಿ ಆಡಳಿತ ಮಂಡಳಿ ಮತ್ತು ಉಪನ್ಯಾಸಕರ ನಡೆವೆ ಮಾತುಕತೆ ನಡೆದು ಮುನ್ನೆಚ್ಚರಿಕೆ ದೃಷ್ಟಿಯಿಂದ ಸುಮಾರು 18 ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಮಾತ್ರ ಹಾಜರಾಗುವಂತೆ ಸೂಚಿಸಿ ಮನೆಗೆ ಕಳುಹಿಸಲಾಗಿದೆ.

ಕೆಲವು ಸಮಯದಿಂದ ಹಿಂದು ಯುವತಿ ಹಾಗೂ ಮುಸ್ಲಿಮ್ ಯುವಕನ ನಡುವೆ ಪ್ರೇಮ ಪ್ರಕರಣವಿದ್ದು, ಗಮನಕ್ಕೆ ಬಂದ ಕಾಲೇಜು ಆಡಳಿತ ವರ್ಗ ಪೊಷಕರನ್ನು ಕರೆಸಿ ವಿಷಯವನ್ನು ತಿಳಿಸಿತ್ತು. ಈ ಬಳಿಕ ಕೆಲವು ಸಮಯ ಯಾವುದೇ ಗೊಂದಲವಿಲ್ಲದೆ ನಡೆಯುತ್ತಿದ್ದ ಕಾಲೇಜು, ವಾರ್ಷಿಕೋತ್ಸವ ಸಮಯ ಮತ್ತೆ ಪ್ರೇಮ ಪ್ರಕರಣ ವಿಚಾರದಲ್ಲಿ ಚರ್ಚೆಗಳು ಆರಂಭವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಉಪನ್ಯಾಸಕರ ತಂಡ ತರಗತಿಯಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಸುವ ಬಗ್ಗೆ ತಪಾಸಣೆಗೆ ಮುಂದಾಗಿದ್ದಾರೆ. ಈ ಸಂದರ್ಭ ಹಿಂದು ಯುವತಿಯ ಕೈಯಲ್ಲಿ ಪ್ರೇಮ ಪತ್ರ ಪತ್ತೆಯಾಗಿತ್ತು. ಈ ದಿನ ಮುಸ್ಲಿಂ ಯುವಕ ಕಾಲೇಜಿಗೆ ಬಂದಿರಲಿಲ್ಲ. ಯುವತಿಯ ಪೊಷಕರಲ್ಲಿ ಮಾತುಕತೆ ನಡೆಸಿ ಮುನ್ನೆಚ್ಚರಿಕೆಯ ದೃಷ್ಟಿಯಿಂದ ಯುವತಿಯನ್ನು ಪರೀಕ್ಷೆಗೆ ಮಾತ್ರ ಆಗಮಿಸುವಂತೆ ಸೂಚನೆ ನೀಡಿದರು.

ಮುಸ್ಲಿಂ ಯುವಕ ತರಗತಿಗೆ ಹಾಜರಾಗುತ್ತಿದ್ದಂತೆ ಉಪನ್ಯಾಸಕರುಗಳಿಗೆ ಮಾಹಿತಿ ನೀಡದೆ ಕೆಲವು ಹಿಂದು ಯುವಕರು ಗುಂಪು ಕಟ್ಟಿಕೊಂಡು ಹೋಗಿ ಪ್ರಶ್ನಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಮುಸ್ಲಿಂ ಯುವಕ ಹಾಗೂ ಆತನಿಗೆ ಸಹಕಾರ ಮಾಡಿದ 6ಮಂದಿ ಮುಸ್ಲಿಂ ಯುವಕ ಯುವತಿಯರನ್ನು ಹಾಗೂ ಗುಂಪು ಕಟ್ಟಿಕೊಂಡು ಪ್ರಶ್ನಿಸಲು ಹೋದ ಹಿಂದು ಯುವಕರನ್ನು ಪೋಷಕರ ಸಮ್ಮುಖದಲ್ಲಿ ವಿಚಾರಣೆ ನಡೆಸಿ ಪರೀಕ್ಷೆಗೆ ಮಾತ್ರ ಹಾಜರಾಗುವಂತೆ ಸೂಚಿಸಿ ಮನೆಗೆ ಕಳುಹಿಸಿದ್ದಾರೆ. ಕಾಲೇಜು ಆಡಳಿತ ಮಂಡಳಿಯ ದಿಟ್ಟ ನಿರ್ಧಾರಕ್ಕೆ ಪ್ರಶಂಸೆಗಳು ಕೇಳಿ ಬರುತ್ತಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

21 minutes ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

27 minutes ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago