Featured

ವಿಟ್ಲ: ಹಿಂದು ಮುಸ್ಲಿಮ್ ಪ್ರೇಮ ಪ್ರಕರಣ : ಸಹಕರಿಸಿದ 18 ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ – Vishwanews24

ವಿಟ್ಲ: ಹಿಂದು ಯುವತಿ ಹಾಗೂ ಮುಸ್ಲಿಮ್ ಯುವಕನ ನಡುವಿನ ಪ್ರೇಮ ಪ್ರಕರಣ : ಸಹಕರಿಸಿದ ಹಾಗೂ ವಿವಾದ ಮಾಡಲು ಹೋದ 18 ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ-ಪರೀಕ್ಷೆಗಷ್ಟೇ ಹಾಜರಾಗಲು ಅವಕಾಶ

ವಿಟ್ಲ: ಖಾಸಗೀ ಪದವಿಪೂರ್ವ ಕಾಲೇಜಿನ ಹಿಂದು ಯುವತಿ ಹಾಗೂ ಮುಸ್ಲಿಂ ಯುವಕನ ನಡುವಿನ ಪ್ರೇಮ ಪ್ರಕರಣ ವಿಚಾರದಲ್ಲಿ ಸಹಕರಿಸಿದ ಹಾಗೂ ವಿವಾದ ಮಾಡಲು ಹೋದ ವಿದ್ಯಾರ್ಥಿಗಳನ್ನು ಪೋಷಕರ ಸಮ್ಮುಖದಲ್ಲಿ ಆಡಳಿತ ಮಂಡಳಿ ಮತ್ತು ಉಪನ್ಯಾಸಕರ ನಡೆವೆ ಮಾತುಕತೆ ನಡೆದು ಮುನ್ನೆಚ್ಚರಿಕೆ ದೃಷ್ಟಿಯಿಂದ ಸುಮಾರು 18 ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಮಾತ್ರ ಹಾಜರಾಗುವಂತೆ ಸೂಚಿಸಿ ಮನೆಗೆ ಕಳುಹಿಸಲಾಗಿದೆ.

ಕೆಲವು ಸಮಯದಿಂದ ಹಿಂದು ಯುವತಿ ಹಾಗೂ ಮುಸ್ಲಿಮ್ ಯುವಕನ ನಡುವೆ ಪ್ರೇಮ ಪ್ರಕರಣವಿದ್ದು, ಗಮನಕ್ಕೆ ಬಂದ ಕಾಲೇಜು ಆಡಳಿತ ವರ್ಗ ಪೊಷಕರನ್ನು ಕರೆಸಿ ವಿಷಯವನ್ನು ತಿಳಿಸಿತ್ತು. ಈ ಬಳಿಕ ಕೆಲವು ಸಮಯ ಯಾವುದೇ ಗೊಂದಲವಿಲ್ಲದೆ ನಡೆಯುತ್ತಿದ್ದ ಕಾಲೇಜು, ವಾರ್ಷಿಕೋತ್ಸವ ಸಮಯ ಮತ್ತೆ ಪ್ರೇಮ ಪ್ರಕರಣ ವಿಚಾರದಲ್ಲಿ ಚರ್ಚೆಗಳು ಆರಂಭವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಉಪನ್ಯಾಸಕರ ತಂಡ ತರಗತಿಯಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಸುವ ಬಗ್ಗೆ ತಪಾಸಣೆಗೆ ಮುಂದಾಗಿದ್ದಾರೆ. ಈ ಸಂದರ್ಭ ಹಿಂದು ಯುವತಿಯ ಕೈಯಲ್ಲಿ ಪ್ರೇಮ ಪತ್ರ ಪತ್ತೆಯಾಗಿತ್ತು. ಈ ದಿನ ಮುಸ್ಲಿಂ ಯುವಕ ಕಾಲೇಜಿಗೆ ಬಂದಿರಲಿಲ್ಲ. ಯುವತಿಯ ಪೊಷಕರಲ್ಲಿ ಮಾತುಕತೆ ನಡೆಸಿ ಮುನ್ನೆಚ್ಚರಿಕೆಯ ದೃಷ್ಟಿಯಿಂದ ಯುವತಿಯನ್ನು ಪರೀಕ್ಷೆಗೆ ಮಾತ್ರ ಆಗಮಿಸುವಂತೆ ಸೂಚನೆ ನೀಡಿದರು.

ಮುಸ್ಲಿಂ ಯುವಕ ತರಗತಿಗೆ ಹಾಜರಾಗುತ್ತಿದ್ದಂತೆ ಉಪನ್ಯಾಸಕರುಗಳಿಗೆ ಮಾಹಿತಿ ನೀಡದೆ ಕೆಲವು ಹಿಂದು ಯುವಕರು ಗುಂಪು ಕಟ್ಟಿಕೊಂಡು ಹೋಗಿ ಪ್ರಶ್ನಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಮುಸ್ಲಿಂ ಯುವಕ ಹಾಗೂ ಆತನಿಗೆ ಸಹಕಾರ ಮಾಡಿದ 6ಮಂದಿ ಮುಸ್ಲಿಂ ಯುವಕ ಯುವತಿಯರನ್ನು ಹಾಗೂ ಗುಂಪು ಕಟ್ಟಿಕೊಂಡು ಪ್ರಶ್ನಿಸಲು ಹೋದ ಹಿಂದು ಯುವಕರನ್ನು ಪೋಷಕರ ಸಮ್ಮುಖದಲ್ಲಿ ವಿಚಾರಣೆ ನಡೆಸಿ ಪರೀಕ್ಷೆಗೆ ಮಾತ್ರ ಹಾಜರಾಗುವಂತೆ ಸೂಚಿಸಿ ಮನೆಗೆ ಕಳುಹಿಸಿದ್ದಾರೆ. ಕಾಲೇಜು ಆಡಳಿತ ಮಂಡಳಿಯ ದಿಟ್ಟ ನಿರ್ಧಾರಕ್ಕೆ ಪ್ರಶಂಸೆಗಳು ಕೇಳಿ ಬರುತ್ತಿದೆ.

Vishwa News 24

Recent Posts

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ – vishwanews24

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…

38 minutes ago

ಉಡುಪಿ : ಜೂ.12 ರಂದು ನೇರ ಸಂದರ್ಶನ – vishwanews24

ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…

45 minutes ago

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ಭೇಟಿ – vishwanews24

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…

51 minutes ago

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ – vishwanews24

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…

1 hour ago

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ – vishwanews24

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…

2 hours ago

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ – vishwanews24

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…

2 hours ago