Featured

ವಿಟ್ಲ: ಹಿಂದು ಮುಸ್ಲಿಮ್ ಪ್ರೇಮ ಪ್ರಕರಣ : ಸಹಕರಿಸಿದ 18 ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ – Vishwanews24

ವಿಟ್ಲ: ಹಿಂದು ಯುವತಿ ಹಾಗೂ ಮುಸ್ಲಿಮ್ ಯುವಕನ ನಡುವಿನ ಪ್ರೇಮ ಪ್ರಕರಣ : ಸಹಕರಿಸಿದ ಹಾಗೂ ವಿವಾದ ಮಾಡಲು ಹೋದ 18 ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ-ಪರೀಕ್ಷೆಗಷ್ಟೇ ಹಾಜರಾಗಲು ಅವಕಾಶ

ವಿಟ್ಲ: ಖಾಸಗೀ ಪದವಿಪೂರ್ವ ಕಾಲೇಜಿನ ಹಿಂದು ಯುವತಿ ಹಾಗೂ ಮುಸ್ಲಿಂ ಯುವಕನ ನಡುವಿನ ಪ್ರೇಮ ಪ್ರಕರಣ ವಿಚಾರದಲ್ಲಿ ಸಹಕರಿಸಿದ ಹಾಗೂ ವಿವಾದ ಮಾಡಲು ಹೋದ ವಿದ್ಯಾರ್ಥಿಗಳನ್ನು ಪೋಷಕರ ಸಮ್ಮುಖದಲ್ಲಿ ಆಡಳಿತ ಮಂಡಳಿ ಮತ್ತು ಉಪನ್ಯಾಸಕರ ನಡೆವೆ ಮಾತುಕತೆ ನಡೆದು ಮುನ್ನೆಚ್ಚರಿಕೆ ದೃಷ್ಟಿಯಿಂದ ಸುಮಾರು 18 ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಮಾತ್ರ ಹಾಜರಾಗುವಂತೆ ಸೂಚಿಸಿ ಮನೆಗೆ ಕಳುಹಿಸಲಾಗಿದೆ.

ಕೆಲವು ಸಮಯದಿಂದ ಹಿಂದು ಯುವತಿ ಹಾಗೂ ಮುಸ್ಲಿಮ್ ಯುವಕನ ನಡುವೆ ಪ್ರೇಮ ಪ್ರಕರಣವಿದ್ದು, ಗಮನಕ್ಕೆ ಬಂದ ಕಾಲೇಜು ಆಡಳಿತ ವರ್ಗ ಪೊಷಕರನ್ನು ಕರೆಸಿ ವಿಷಯವನ್ನು ತಿಳಿಸಿತ್ತು. ಈ ಬಳಿಕ ಕೆಲವು ಸಮಯ ಯಾವುದೇ ಗೊಂದಲವಿಲ್ಲದೆ ನಡೆಯುತ್ತಿದ್ದ ಕಾಲೇಜು, ವಾರ್ಷಿಕೋತ್ಸವ ಸಮಯ ಮತ್ತೆ ಪ್ರೇಮ ಪ್ರಕರಣ ವಿಚಾರದಲ್ಲಿ ಚರ್ಚೆಗಳು ಆರಂಭವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಉಪನ್ಯಾಸಕರ ತಂಡ ತರಗತಿಯಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಸುವ ಬಗ್ಗೆ ತಪಾಸಣೆಗೆ ಮುಂದಾಗಿದ್ದಾರೆ. ಈ ಸಂದರ್ಭ ಹಿಂದು ಯುವತಿಯ ಕೈಯಲ್ಲಿ ಪ್ರೇಮ ಪತ್ರ ಪತ್ತೆಯಾಗಿತ್ತು. ಈ ದಿನ ಮುಸ್ಲಿಂ ಯುವಕ ಕಾಲೇಜಿಗೆ ಬಂದಿರಲಿಲ್ಲ. ಯುವತಿಯ ಪೊಷಕರಲ್ಲಿ ಮಾತುಕತೆ ನಡೆಸಿ ಮುನ್ನೆಚ್ಚರಿಕೆಯ ದೃಷ್ಟಿಯಿಂದ ಯುವತಿಯನ್ನು ಪರೀಕ್ಷೆಗೆ ಮಾತ್ರ ಆಗಮಿಸುವಂತೆ ಸೂಚನೆ ನೀಡಿದರು.

ಮುಸ್ಲಿಂ ಯುವಕ ತರಗತಿಗೆ ಹಾಜರಾಗುತ್ತಿದ್ದಂತೆ ಉಪನ್ಯಾಸಕರುಗಳಿಗೆ ಮಾಹಿತಿ ನೀಡದೆ ಕೆಲವು ಹಿಂದು ಯುವಕರು ಗುಂಪು ಕಟ್ಟಿಕೊಂಡು ಹೋಗಿ ಪ್ರಶ್ನಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಮುಸ್ಲಿಂ ಯುವಕ ಹಾಗೂ ಆತನಿಗೆ ಸಹಕಾರ ಮಾಡಿದ 6ಮಂದಿ ಮುಸ್ಲಿಂ ಯುವಕ ಯುವತಿಯರನ್ನು ಹಾಗೂ ಗುಂಪು ಕಟ್ಟಿಕೊಂಡು ಪ್ರಶ್ನಿಸಲು ಹೋದ ಹಿಂದು ಯುವಕರನ್ನು ಪೋಷಕರ ಸಮ್ಮುಖದಲ್ಲಿ ವಿಚಾರಣೆ ನಡೆಸಿ ಪರೀಕ್ಷೆಗೆ ಮಾತ್ರ ಹಾಜರಾಗುವಂತೆ ಸೂಚಿಸಿ ಮನೆಗೆ ಕಳುಹಿಸಿದ್ದಾರೆ. ಕಾಲೇಜು ಆಡಳಿತ ಮಂಡಳಿಯ ದಿಟ್ಟ ನಿರ್ಧಾರಕ್ಕೆ ಪ್ರಶಂಸೆಗಳು ಕೇಳಿ ಬರುತ್ತಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago