Featured

ವಿದೇಶಕ್ಕೆ ತೆರಳುವವರಿಗೆ 28 ದಿನಕ್ಕೆ ಎರಡನೇ ಡೋಸ್ : ಆರೋಗ್ಯ ಇಲಾಖೆ ಆದೇಶ -Vishwanews24

ವಿದೇಶಕ್ಕೆ ತೆರಳುವವರಿಗೆ 28 ದಿನಕ್ಕೆ ಎರಡನೇ ಡೋಸ್ : ಆರೋಗ್ಯ ಇಲಾಖೆ ಆದೇಶ -Vishwanews24

ಬೆಂಗಳೂರು : ಉನ್ನತ ವ್ಯಾಸಂಗ, ನೌಕರಿ, ಒಲಿಂಪಿಕ್ಸ್‌ಗಾಗಿ ವಿದೇಶಕ್ಕೆ ತೆರಳುವವರಿಗಾಗಿ ಕೋವಿಡ್ ಲಸಿಕೆ ಮೊದಲ ಡೋಸ್‌ ಪಡೆದ 28 ದಿನಗಳ ನಂತರ ಎರಡನೇ ಡೋಸ್‌ ನೀಡಲು ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕಿ ಅರುಂಧತಿ ಚಂದ್ರಶೇಖರ್‌ ಅವರು ಬಿಬಿಎಂಪಿ ಮುಖ್ಯ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಸದ್ಯ ಕೋವಿಶೀಲ್ಡ್‌ ಕೊರೊನಾ ಲಸಿಕೆ ಮೊದಲ ಡೋಸ್‌ ಪಡೆದವರು 84 ದಿನಗಳ ನಂತರ ಎರಡನೇ ಡೋಸ್‌ ಪಡೆಯಬೇಕೆಂಬ ನಿಯಮವಿದೆ. ಈ ನಿಯಮದಿಂದ ವಿದೇಶಕ್ಕೆ ತೆರಳುವವರಿಗೆ ತೊಂದರೆಯಾಗಿತ್ತು. ಹೀಗಾಗಿ ಈ ಆದೇಶದ ಬಳಿಕ ಮೊದಲ ಡೋಸ್‌ ಪಡೆದ 28 ದಿನಗಳ ಎರಡನೇ ಡೋಸ್ ಪಡೆಯಬಹುದಾಗಿದೆ.

ಸ್ವಯಂ ಘೋಷಣಾ ಪ್ರಮಾಣ ಪತ್ರದಲ್ಲಿ ಅಭ್ಯರ್ಥಿಯು ನೀಡುವ ಮಾಹಿತಿಯನ್ನು ಪಡೆದು, ದಾಖಲೆಗಳನ್ನು ಪರಿಶೀಲಿಸಿ, ದೃಢೀಕರಣ ಪತ್ರವನ್ನು ನೀಡಬೇಕು. ಈ ಪತ್ರವನ್ನು ಕೋವಿನ್‌ ಪೋರ್ಟಲ್‌ನಲ್ಲಿ ಅಪ್‌ಡೇಟ್‌ ಮಾಡಬೇಕು. ಇನ್ನು ವಿದೇಶಕ್ಕೆ ತೆರಳುವವರು ಮೊದಲ ಡೋಸ್‌ ಲಸಿಕೆ ಪಡೆಯುವಾಗ ನೋಂದಣಿಗಾಗಿ ಪಾಸ್‌ ಪೋರ್ಟ್‌ ನಂಬರ್‌ ಅಥವಾ ಇತರ ಮಾಹಿತಿ ನೀಡದಿದ್ದಾರೆ, ಎರಡನೇ ಡೋಸ್‌ ಪಡೆಯುವ ಸಂದರ್ಭದಲ್ಲಿ ಕಡ್ಡಾಯವಾಗಿ ಲಸಿಕೆ ಪ್ರಮಾಣಪತ್ರವನ್ನು ಒದಗಿಸಬೇಕು ಎಂದು ಇಲಾಖೆ ಸೂಚಿಸಿದೆ

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago