Featured

ವಿದೇಶಕ್ಕೆ ತೆರಳುವವರಿಗೆ 28 ದಿನಕ್ಕೆ ಎರಡನೇ ಡೋಸ್ : ಆರೋಗ್ಯ ಇಲಾಖೆ ಆದೇಶ -Vishwanews24

ವಿದೇಶಕ್ಕೆ ತೆರಳುವವರಿಗೆ 28 ದಿನಕ್ಕೆ ಎರಡನೇ ಡೋಸ್ : ಆರೋಗ್ಯ ಇಲಾಖೆ ಆದೇಶ -Vishwanews24

ಬೆಂಗಳೂರು : ಉನ್ನತ ವ್ಯಾಸಂಗ, ನೌಕರಿ, ಒಲಿಂಪಿಕ್ಸ್‌ಗಾಗಿ ವಿದೇಶಕ್ಕೆ ತೆರಳುವವರಿಗಾಗಿ ಕೋವಿಡ್ ಲಸಿಕೆ ಮೊದಲ ಡೋಸ್‌ ಪಡೆದ 28 ದಿನಗಳ ನಂತರ ಎರಡನೇ ಡೋಸ್‌ ನೀಡಲು ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕಿ ಅರುಂಧತಿ ಚಂದ್ರಶೇಖರ್‌ ಅವರು ಬಿಬಿಎಂಪಿ ಮುಖ್ಯ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಸದ್ಯ ಕೋವಿಶೀಲ್ಡ್‌ ಕೊರೊನಾ ಲಸಿಕೆ ಮೊದಲ ಡೋಸ್‌ ಪಡೆದವರು 84 ದಿನಗಳ ನಂತರ ಎರಡನೇ ಡೋಸ್‌ ಪಡೆಯಬೇಕೆಂಬ ನಿಯಮವಿದೆ. ಈ ನಿಯಮದಿಂದ ವಿದೇಶಕ್ಕೆ ತೆರಳುವವರಿಗೆ ತೊಂದರೆಯಾಗಿತ್ತು. ಹೀಗಾಗಿ ಈ ಆದೇಶದ ಬಳಿಕ ಮೊದಲ ಡೋಸ್‌ ಪಡೆದ 28 ದಿನಗಳ ಎರಡನೇ ಡೋಸ್ ಪಡೆಯಬಹುದಾಗಿದೆ.

ಸ್ವಯಂ ಘೋಷಣಾ ಪ್ರಮಾಣ ಪತ್ರದಲ್ಲಿ ಅಭ್ಯರ್ಥಿಯು ನೀಡುವ ಮಾಹಿತಿಯನ್ನು ಪಡೆದು, ದಾಖಲೆಗಳನ್ನು ಪರಿಶೀಲಿಸಿ, ದೃಢೀಕರಣ ಪತ್ರವನ್ನು ನೀಡಬೇಕು. ಈ ಪತ್ರವನ್ನು ಕೋವಿನ್‌ ಪೋರ್ಟಲ್‌ನಲ್ಲಿ ಅಪ್‌ಡೇಟ್‌ ಮಾಡಬೇಕು. ಇನ್ನು ವಿದೇಶಕ್ಕೆ ತೆರಳುವವರು ಮೊದಲ ಡೋಸ್‌ ಲಸಿಕೆ ಪಡೆಯುವಾಗ ನೋಂದಣಿಗಾಗಿ ಪಾಸ್‌ ಪೋರ್ಟ್‌ ನಂಬರ್‌ ಅಥವಾ ಇತರ ಮಾಹಿತಿ ನೀಡದಿದ್ದಾರೆ, ಎರಡನೇ ಡೋಸ್‌ ಪಡೆಯುವ ಸಂದರ್ಭದಲ್ಲಿ ಕಡ್ಡಾಯವಾಗಿ ಲಸಿಕೆ ಪ್ರಮಾಣಪತ್ರವನ್ನು ಒದಗಿಸಬೇಕು ಎಂದು ಇಲಾಖೆ ಸೂಚಿಸಿದೆ

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

13 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

13 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago