ಬೆಂಗಳೂರು: ಕರ್ನಾಟಕದಿಂದ ವಿದೇಶಕ್ಕೆ ಪದವಿ, ಸ್ನಾತಕೋತ್ತರ ಪದವಿ ವ್ಯಾಸಂಗಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಅನುಕೂಲ ಆಗುವ ನಿಟ್ಟಿನಲ್ಲಿ, ಶೈಕ್ಷಣಿಕ ಸಾಲವನ್ನು 20 ಲಕ್ಷದಿಂದ 30 ಲಕ್ಷಕ್ಕೆ ಹೆಚ್ಚಳ ಮಾಡೋ ಚಿಂತನೆಯನ್ನು ರಾಜ್ಯ ಸರ್ಕಾರ ನಡೆಸಿದೆ ಎಂಬುದಾಗಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ದ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ 2023-24 ನೇ ಸಾಲಿನ ಯೋಜನೆಗಳಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ವಿದೇಶದಲ್ಲಿ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯಗಳಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡ ಬಯಸಿದರೆ ಪ್ರಸ್ತುತ 20 ಲಕ್ಷ ರೂ. ಶಿಕ್ಷಣ ಸಾಲ ನೀಡಲಾಗುತ್ತಿದ್ದು, ಇದೀಗ ಎನ್ಎಂಡಿಸಿ ನೆರವಿನೊಂದಿಗೆ ಹತ್ತು ಲಕ್ಷ ಹೆಚ್ಚುವರಿ ಯಾಗಿ ಒಟ್ಟು 30 ಲಕ್ಷ ರೂ.ಸಾಲ ಸೌಲಭ್ಯ ಒದಗಿಸುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.
ಹಳೇ ಯೋಜನೆ ಮತ್ತೆ ಆರಂಭಿಸಲಾಗಿದೆ. ನಾಲ್ಕು ಹೊಸ ಯೋಜನೆ ಪ್ರಾರಂಭಿಸಲಾಗುತ್ತಿದೆ. ನಿರುದ್ಯೋಗಿ ಗಳಿಗೆ ಕಾರು ಸೇರಿ ನಾಲ್ಕು ಚಕ್ರ ವಾಹನ ಖರೀದಿಗೆ 3 ಲಕ್ಷ ಸಬ್ಸಿಡಿ ನೀಡುವ ಸ್ವಾವಲಂಬಿ, ತಾಂತ್ರಿಕ ಕೌಶಲ್ಯ ತರಬೇತಿ ನೀಡುವ ಶ್ರಮಶಕ್ತಿ, ವಿಧವೆ, ವಿಚ್ಚೆಧಿತ, ಅವಿವಾಹಿತ ಮಹಿಳೆಯರಿಗೆ 50 ಸಾವಿರ ಸಾಲ ನೀಡುವ ಹಾಗೂ ವೃತ್ತಿ ಪ್ರೋತ್ಸಾಹ ಯೋಜನೆಗೆ ಚಾಲನೆ ನೀಡಿದ್ದೇವೆ ಎಂದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…