ಬೆಂಗಳೂರು: ಕರ್ನಾಟಕದಿಂದ ವಿದೇಶಕ್ಕೆ ಪದವಿ, ಸ್ನಾತಕೋತ್ತರ ಪದವಿ ವ್ಯಾಸಂಗಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಅನುಕೂಲ ಆಗುವ ನಿಟ್ಟಿನಲ್ಲಿ, ಶೈಕ್ಷಣಿಕ ಸಾಲವನ್ನು 20 ಲಕ್ಷದಿಂದ 30 ಲಕ್ಷಕ್ಕೆ ಹೆಚ್ಚಳ ಮಾಡೋ ಚಿಂತನೆಯನ್ನು ರಾಜ್ಯ ಸರ್ಕಾರ ನಡೆಸಿದೆ ಎಂಬುದಾಗಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ದ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ 2023-24 ನೇ ಸಾಲಿನ ಯೋಜನೆಗಳಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ವಿದೇಶದಲ್ಲಿ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯಗಳಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡ ಬಯಸಿದರೆ ಪ್ರಸ್ತುತ 20 ಲಕ್ಷ ರೂ. ಶಿಕ್ಷಣ ಸಾಲ ನೀಡಲಾಗುತ್ತಿದ್ದು, ಇದೀಗ ಎನ್ಎಂಡಿಸಿ ನೆರವಿನೊಂದಿಗೆ ಹತ್ತು ಲಕ್ಷ ಹೆಚ್ಚುವರಿ ಯಾಗಿ ಒಟ್ಟು 30 ಲಕ್ಷ ರೂ.ಸಾಲ ಸೌಲಭ್ಯ ಒದಗಿಸುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.
ಹಳೇ ಯೋಜನೆ ಮತ್ತೆ ಆರಂಭಿಸಲಾಗಿದೆ. ನಾಲ್ಕು ಹೊಸ ಯೋಜನೆ ಪ್ರಾರಂಭಿಸಲಾಗುತ್ತಿದೆ. ನಿರುದ್ಯೋಗಿ ಗಳಿಗೆ ಕಾರು ಸೇರಿ ನಾಲ್ಕು ಚಕ್ರ ವಾಹನ ಖರೀದಿಗೆ 3 ಲಕ್ಷ ಸಬ್ಸಿಡಿ ನೀಡುವ ಸ್ವಾವಲಂಬಿ, ತಾಂತ್ರಿಕ ಕೌಶಲ್ಯ ತರಬೇತಿ ನೀಡುವ ಶ್ರಮಶಕ್ತಿ, ವಿಧವೆ, ವಿಚ್ಚೆಧಿತ, ಅವಿವಾಹಿತ ಮಹಿಳೆಯರಿಗೆ 50 ಸಾವಿರ ಸಾಲ ನೀಡುವ ಹಾಗೂ ವೃತ್ತಿ ಪ್ರೋತ್ಸಾಹ ಯೋಜನೆಗೆ ಚಾಲನೆ ನೀಡಿದ್ದೇವೆ ಎಂದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…