ಕುಟುಂಬದ ವಾರ್ಷಿಕ ಆದಾಯ ಗರಿಷ್ಟ 8 ಲಕ್ಷ ರೂ. ಇರುವರಿಗೆ ವಿದೇಶದಲ್ಲಿ ವ್ಯಾಸಂಗ ಮಾಡಲು ಸಂಪೂರ್ಣ ವೆಚ್ಚ ಸರ್ಕಾರವೇ ಭರಿಸಲಿದೆ.
ಬೆಂಗಳೂರು: ವಿದೇಶದಲ್ಲಿ ವ್ಯಾಸಂಗ ಮಾಡುವ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಪ್ರಬುದ್ಧ ಯೋಜನೆ ಮೂಲಕ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ.
ವಿದೇಶದಲ್ಲಿ ವ್ಯಾಸಂಗ ಮಾಡುವ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಪ್ರಬುದ್ಧ ಯೋಜನೆ ರಾಜ್ಯ ಸರಕಾರ ಜಾರಿಗೆ ತಂದಿದ್ದು, ಈ ಮೂಲಕ ವಿದೇಶದಲ್ಲಿ ವ್ಯಾಸಂಗ ಮಾಡುವ ಕನಸು ಕಂಡಿರುವ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ನೆರವಿಗೆ ರಾಜ್ಯ ಸರ್ಕಾರ ಮುಂದಾಗಿದೆ.
ಸಮಾಜ ಕಲ್ಯಾಣ ಇಲಾಖೆ ಪ್ರಬುದ್ಧ ಯೋಜನೆ ಯನ್ನು ವಿಧಾನಸೌಧದಲ್ಲಿ ಇಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಡಿಸಿಎಂ ಪರಮೇಶ್ವರ್ ಅವರು, ವಿದ್ಯಾರ್ಥಿ ವೇತನ ಪಡೆದು ನಾನು ಸಂಶೋಧನೆ ಮಾಡಿ ಆಸ್ಟ್ರೇಲಿಯಾದಲ್ಲಿ ಪಿಎಚ್ಡಿ ಪದವಿ ಪಡೆದೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ಕೂಡ ವಿದ್ಯಾರ್ಥಿ ವೇತನ ಪಡೆದು ವಿದೇಶದಲ್ಲಿ ವ್ಯಾಸಂಗ ಮಾಡಿ ಸಂವಿಧಾನ ರಚನೆ ಮಾಡಿದರು. ಹಿಂದುಳಿದವರಿಗೆ ಉನ್ನತ ಮಟ್ಟದ ಶಿಕ್ಷಣ ಕೊಡಿಸುವ ಉದ್ದೇಶದಿಂದ ಸರ್ಕಾರ ಪ್ರಬುದ್ಧ ಯೋಜನೆ ಜಾರಿಗೆ ತಂದಿದೆ ಎಂದರು. ಕಾರ್ಯಕ್ರಮದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಸೇರಿ ಹಲವರು ಭಾಗವಹಿಸಿದ್ದರು.’
ಕುಟುಂಬದ ವಾರ್ಷಿಕ ಆದಾಯ ಗರಿಷ್ಟ 8 ಲಕ್ಷ ರೂ. ಇರುವರಿಗೆ ವಿದೇಶದಲ್ಲಿ ವ್ಯಾಸಂಗ ಮಾಡಲು ಸಂಪೂರ್ಣ ವೆಚ್ಚ ಸರ್ಕಾರವೇ ಭರಿಸಲಿದೆ. 8-15 ಲಕ್ಷ ರೂ. ವಾರ್ಷಿಕ ಆದಾಯ ಹೊಂದಿರುವ ಕುಟುಂಬದ ವಿದ್ಯಾರ್ಥಿಗಳಿಗೆ ಶೇ.50ರಷ್ಟು ಹಣವನ್ನು ಸರ್ಕಾರ ಭರಿಸುತ್ತದೆ. 15 ಲಕ್ಷ ರೂ. ಮೇಲ್ಪಟ್ಟ ಆದಾಯ ಇರುವ ವಿದ್ಯಾರ್ಥಿಗಳಿಗೆ ಶೇ.33 ಹಣ ಸಹಾಯ ಮಾಡಲಾಗುತ್ತದೆ. ಪ್ರಬುದ್ಧ ಯೋಜನೆಯಲ್ಲಿ ವಿಕಲಚೇತನರಿಗೆ ಶೇ.4 ಹಾಗೂ ವಿದ್ಯಾರ್ಥಿನಿಯರಿಗೆ ಶೇ.33 ಮೀಸಲಾತಿ ಸಿಗಲಿದೆ.
ವಿಮಾನಯಾನ ವೆಚ್ಚ ಭರಿಸಲಾಗುವುದು ಈ ಯೋಜನೆಯೊಂದಿಗೆ ಅಂಬೇಡ್ಕರ್ ಕನಸಿನಂತೆ ಪ್ರಭುದ್ಧ ಭಾರತ ನನಸು ಮಾಡಲು ಮುಂದಾಗಿದ್ದೇವೆ ಎಂದು ಹೇಳಿದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…