ಬೆಂಗಳೂರು: ವಿದೇಶಗಳಿಂದ ಇಲ್ಲಿಗೆ ಬರುವ ಪ್ರಯಾಣಿಕರು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಯ ನೆಗೆಟಿವ್ ವರದಿ ಹಾಗೂ ಲಸಿಕೆ ಪಡೆದಿರುವ ಬಗ್ಗೆ ಪ್ರಮಾಣಪತ್ರ ಹೊಂದಿರಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ.
ಕೆಲ ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿರುವುದರಿಂದ ವಿದೇಶಿ ಪ್ರಯಾಣಿಕರಿಗೆ ಇಲಾಖೆಯು ಪರಿಷ್ಕೃತ ಮಾರ್ಗಸೂಚಿಯನ್ನು ಹೊರಡಿಸಿದೆ. ಇಂಗ್ಲೆಂಡ್, ಯುರೋಪ್, ಮಧ್ಯಪ್ರಾಚ್ಯ, ದಕ್ಷಿಣ ಆಫ್ರಿಕಾ, ಬ್ರೆಜಿಲ್, ಬಾಂಗ್ಲಾದೇಶ, ಬೋಟ್ಸವಾನಾ, ಚೀನಾ, ಮಾರಿಷಸ್, ನ್ಯೂಜಿಲೆಂಡ್, ಜಿಂಬಾಬ್ವೆ ದೇಶಗಳಿಂದ ಬರುವವರು ಸೋಂಕಿತರಾಗಿಲ್ಲ ಎನ್ನುವುದರ ಬಗ್ಗೆ ಆರ್ಟಿ-ಪಿಸಿಆರ್ ಪರೀಕ್ಷಾ ವರದಿ ಹೊಂದಿರಬೇಕು. ಆ ವರದಿಯು ಪ್ರಯಾಣದ ಮೊದಲಿನ 72 ಗಂಟೆಗಳ ಅವಧಿಯದ್ದಾಗಿರಬೇಕು. ಕೋವಿಡ್ ರೂಪಾಂತರ ತಳಿಗಳು ಪತ್ತೆ ಮತ್ತು ಸೋಂಕು ಹೆಚ್ಚುತ್ತಿರುವುದರಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಇಲಾಖೆ ತಿಳಿಸಿದೆ.
ಪ್ರಯಾಣಕ್ಕೂ ಮೊದಲು ಸೇವಾಸಿಂಧು ಪೋರ್ಟಲ್ನಲ್ಲಿ ಸೋಂಕಿತರಾಗಿಲ್ಲ ಎನ್ನುವುದರ ಬಗ್ಗೆ ಪರೀಕ್ಷಾ ವರದಿಯನ್ನು ಅಪ್ಲೋಡ್ ಮಾಡಬೇಕು. ಪ್ರಯಾಣಿಕರ ಗಂಟಲು ದ್ರವ ಮಾದರಿಯನ್ನು ರಾಜ್ಯದ ಎಲ್ಲ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ, ಬಂದರುಗಳ ಪ್ರವೇಶದ್ವಾರದ ಬಳಿ ಪಡೆಯಬೇಕು ಎಂದು ಹೇಳಲಾಗಿದೆ.
ಲಸಿಕೆ ಪ್ರಮಾಣಪತ್ರದ ವಿಚಾರವಾಗಿ ದೇಶದೊಂದಿಗೆ ಒಪ್ಪಂದ ಮಾಡಿಕೊಂಡಿರುವ ಬ್ರಿಟನ್, ಫ್ರಾನ್ಸ್, ಜರ್ಮನಿ, ನೇಪಾಳ, ಬೆಲಾರಸ್, ಲೆಬನಾನ್, ಅರ್ಮೇನಿಯಾ, ಉಕ್ರೇನ್, ಬೆಲ್ಜಿಯಂ, ಹಂಗೇರಿ ಹಾಗೂ ಸರ್ಬಿಯಾ ದೇಶದಿಂದ ಇಲ್ಲಿಗೆ ಬಂದವರಿಗೆ ಪರೀಕ್ಷೆ ಇಲ್ಲದೆಯೇ ತೆರಳಲು ಅವಕಾಶ ಇರಲಿದೆ. ಆದರೆ ಅವರು 14 ದಿನಗಳು ಮನೆಯಲ್ಲಿಯೇ ನಿಗಾ ವ್ಯವಸ್ಥೆಗೆ ಒಳಪಡಬೇಕು ಎಂದು ಸೂಚಿಸಲಾಗಿದೆ
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…