ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡುವ ಐತಿಹಾಸಿಕ ಗ್ಯಾರಂಟಿ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಸಾರಿಗೆ ಸಚಿವರಾದ ಬೈರತಿ ಸುರೇಶ್ ಅವರು ಈ ಯೋಜನೆಯನ್ನು ಘೋಷಿಸಿದ್ದಾರೆ.
ಈಗಾಗಲೇ ಹಣ ಪಾವತಿ ಮಾಡಿ ಬಸ್ ಪಾಸ್ ಖರೀದಿಸಿರುವ ವಿದ್ಯಾರ್ಥಿಗಳಿಗೆ ಆ ಹಣವನ್ನು ವಾಪಸ್ ನೀಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಇದುವರೆಗೆ ವಿದ್ಯಾರ್ಥಿನಿಯರಿಗೆ ಮಾತ್ರ ಉಚಿತ ಬಸ್ ಪಾಸ್ ವಿತರಣೆ ಮಾಡಲಾಗುತ್ತಿತ್ತು. ಇದೀಗ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಗಂಡುಮಕ್ಕಳಿಗೂ ಈ ಸೌಲಭ್ಯವನ್ನು ಕಲ್ಪಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ. ಉಚಿತ ಬಸ್ ಪಾಸ್ ವಿತರಣೆಗೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗಿದ್ದು, ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ:
ಎಲ್ಲಾ ಮಕ್ಕಳಿಗೂ ಸೌಲಭ್ಯ
ಬಡವ ಶ್ರೀಮಂತ ಎನ್ನದೇ ಪ್ರತಿಯೊಬ್ಬ ಮಕ್ಕಳೂ ಆರ್ಥಿಕ ಹೊರೆ ಇಲ್ಲದೇ ತಮ್ಮ ವಿದ್ಯಾಭ್ಯಾಸ ಮಾಡಬೇಕೆಂಬುದು ನಮ್ಮ ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಅದರಂತೆ ಮುಖ್ಯಮಂತ್ರಿಗಳು ಈ ಉಚಿತ ಬಸ್ ಪಾಸ್ ಯೋಜನೆಯನ್ನು ಘೋಷಣೆ ಮಾಡಿದ್ದರು. ಅದನ್ನು ಸಾರಿಗೆ ಇಲಾಖೆ ಅನುಷ್ಠಾನಗೊಳಿಸುತ್ತಿದೆ ಎಂದರು.
ಕರ್ನಾಟಕ ಒನ್, ಬೆಂಗಳೂರು ಒನ್ನಲ್ಲಿ ಅರ್ಜಿ
ವಿದ್ಯಾರ್ಥಿಗಳು ಒಂದೆರಡು ದಿನಗಳಲ್ಲಿ ಕರ್ನಾಟಕ ಒನ್, ಬೆಂಗಳೂರು ಒನ್ ಕಚೇರಿಗಳಲ್ಲಿ ಉಚಿತ ಬಸ್ ಪಾಸ್ಗೆ ನಿಗದಿತ ಅರ್ಜಿಯನ್ನು ಸಲ್ಲಿಸಬೇಕು. ಇದನ್ನು ಪರಿಶೀಲನೆ ನಡೆಸಿದ ನಂತರ ಬಸ್ ಪಾಸ್ ಉಚಿತವಾಗಿ ವಿತರಿಸುವ ಪ್ರಕ್ರಿಯೆಯನ್ನು ಆರಂಭಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.
ಪಾವತಿಸಿರುವ ಹಣ ವಾಪಸ್
ಈಗಾಗಲೇ ಹಣ ಪಾವತಿ ಮಾಡಿ ಬಸ್ ಖರೀದಿಸಿರುವ ವಿದ್ಯಾರ್ಥಿಗಳಿಗೆ ಹಣವನ್ನು ವಾಪಸ್ ನೀಡಲಾಗುವುದು. ನಮ್ಮ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಈ ಮಹತ್ವಾಕಾಂಕ್ಷೆಯ ಯೋಜನೆಯನ್ನು ಎಲ್ಲಾ ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕೆಂದು ಅವರು ಮನವಿ ಮಾಡಿದರು.
ಆರೋಗ್ಯವಾಗಿದ್ದೇನೆ, ಆತಂಕ ಬೇಡ: ದೊಡ್ಡಣ್ಣ ಪ್ರತಿಕ್ರಿಯೆ ಬೆಂಗಳೂರು: ಹಿರಿಯ ಚಿತ್ರನಟ ದೊಡ್ಡಣ್ಣ ನಿಧನರಾಗಿದ್ದಾರೆ ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ…
ಇಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್ ; ದೇಗುಲ ಅರ್ಚಕರ ಮಹತ್ವದ ಮಾಹಿತಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ…
ಉಡುಪಿ: ಕೋಕಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದಇಬ್ಬರು ಆರೋಪಿಗಳ ಬಂಧನ ಉಡುಪಿ: ಕೋಟ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ…
ಬಂಟ, ಬಿಲ್ಲವ ಸಮುದಾಯಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪ : ಮಹಿಳೆ ಬಂಧನ ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಬಂಟ್…
ತಮ್ಮ ಬಗ್ಗೆ ಹರಡುತ್ತಿರುವುದು ಸುಳ್ಳು ಸುದ್ದಿ : ಧರ್ಮಸ್ಥಳ ಪ್ರಕರಣದ ಆರೋಪಕ್ಕೆ ಪ್ರಕಾಶ್ ರಾಜ್ ಸ್ಪಷ್ಟನೆ ಬೆಂಗಳೂರು:ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ…
ಭಾರತೀಯ ಶೂಟಿಂಗ್ ದಂತಕಥೆ ಮನುಬಾಕರ್ ಕೋಚ್ ಜಸ್ಪಾಲ್ ರಾಣಾ ನಿಧನ ನವದೆಹಲಿ: ಭಾರತೀಯ ಶೂಟಿಂಗ್ ದಂತಕಥೆ ಮತ್ತು ಪ್ರಸಿದ್ಧ ತರಬೇತುದಾರ…