ಶಾಲಾ ಶಿಕ್ಷಣ ಇಲಾಖೆ ಶನಿವಾರದ ಶಾಲಾ ಅವಧಿಯಲ್ಲಿ ಬದಲಾವಣೆ ಮಾಡಿದೆ. ಇನ್ನು ಮುಂದೆ ಶನಿವಾರ ಬೆಳಗ್ಗೆ 8.30ರಿಂದ ಮಧ್ಯಾಹ್ನ 12.30ರವರೆಗೆ ತರಗತಿಗಳು ನಡೆಯಲಿವೆ. ಇಲ್ಲಿಯವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೇರೆ ಬೇರೆ ಸಮಯ ಇತ್ತು. ಕೆಲವು ಶಾಲೆಗಳಲ್ಲಿ ಬೆಳಗ್ಗೆ 8ರಿಂದ 12 ಗಂಟೆಯವರೆಗೆ ತರಗತಿಗಳಿದ್ದರೆ, ಇನ್ನೂ ಕೆಲವು ಕಡೆ 7.30ರಿಂದ 11.30ರವರೆಗೆ ಶಾಲೆ ನಡೆಯುತ್ತಿತ್ತು.
ಇದನ್ನೂ ಓದಿ:
ಈ ಗೊಂದಲಕ್ಕೆ ತೆರೆ ಎಳೆದಿರುವ ಶಿಕ್ಷಣ ಇಲಾಖೆ, ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು ಒಂದೇ ಸಮಯವನ್ನು ಪಾಲಿಸಬೇಕು ಎಂದು ಸೂಚನೆ ನೀಡಿದೆ. ಈ ಹೊಸ ವೇಳೆಯಿಂದ ವಿದ್ಯಾರ್ಥಿಗಳು ಶನಿವಾರ ಬೆಳಗ್ಗೆ ತುಂಬಾ ಬೇಗ ಎದ್ದು ಶಾಲೆಗೆ ಹೋಗುವ ಅಗತ್ಯ ಇರುವುದಿಲ್ಲ. ಇದರಿಂದ ಮಕ್ಕಳಿಗೂ ಸ್ವಲ್ಪ ನೆಮ್ಮದಿ ಸಿಗಲಿದೆ.
ಶಿಕ್ಷಕರಿಗೂ ಈ ಬದಲಾವಣೆ ಅನುಕೂಲವಾಗಲಿದೆ. ಸರ್ಕಾರ ಈಗಾಗಲೇ ಆನ್ಲೈನ್ ಹಾಜರಾತಿಯನ್ನು ಕಡ್ಡಾಯಗೊಳಿಸಿದೆ. ಸಮಯಕ್ಕೆ ಸರಿಯಾಗಿ ಹಾಜರಾತಿ ದಾಖಲಿಸಲು ಹೊಸ ವೇಳೆ ಸಹಾಯವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ಇದನ್ನೂ ಓದಿ:
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…