Featured

ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪುಷ್ಪಾನಂದ ಫೌಂಡೇಶನ್ ಮೂಲಕ ಯಶ್‌ಪಾಲ್ ಸುವರ್ಣರ ಕಾರ್ಯ ಅಭಿನಂದನಾರ್ಹ : ಮಟ್ಟಾರು ರತ್ನಾಕರ ಹೆಗ್ಡೆ -Vishwanews24

ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪುಷ್ಪಾನಂದ ಫೌಂಡೇಶನ್ ಮೂಲಕ ಯಶ್‌ಪಾಲ್ ಸುವರ್ಣರ ಕಾರ್ಯ ಅಭಿನಂದನಾರ್ಹ : ಮಟ್ಟಾರು ರತ್ನಾಕರ ಹೆಗ್ಡೆ

ತನ್ನ ಹೆತ್ತವರ ಹೆಸರನ್ನು ಚಿರಸ್ಥಾಯಿಯಾಗಿಸುವ ಉದ್ದೇಶದಿಂದ ಯಶ್‌ಪಾಲ್ ಸುವರ್ಣ ತಮ್ಮ ಪುಷ್ಪಾನಂದ ಫೌಂಡೇಶನ್ ಮೂಲಕ ಕಾಪು ಕ್ಷೇತ್ರದ ೨೯ ಗ್ರಾಮಗಳ ಸುಮಾರು ೧೮೦೦ ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುತ್ತಿರುವ ಕಾರ್ಯ ಅಭಿನಂದನಾರ್ಹ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ ಹೇಳಿದರು.

ಪುಷ್ಪಾನಂದ ಫೌಂಡೇಶನ್ ವತಿಯಿಂದ ಶಿರ್ವ ಮಹಿಳಾ ಸೌಧದಲ್ಲಿ ಆಯೋಜಿಸಿದ್ದ ಕುರ್ಕಾಲು, ಶಿರ್ವ, ಮಜೂರು, ಮುದರಂಗಡಿ, ಇನ್ನಂಜೆ, ಮೂಡುಬೆಳ್ಳೆ ಹಾಗೂ ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಮಾರು ೨೦೦ ಮಂದಿ ವಿದ್ಯಾರ್ಥಿಗಳಿಗೆ ಸುಮಾರು ೨.೫ ಲಕ್ಷ ಮೌಲ್ಯದ ಪ್ರತಿಭಾ ಪುರಸ್ಕಾರ ವಿತರಣಾ ಸಮಾರಂಭವನ್ನುದ್ದೇಶಿಸಿ ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪುಷ್ಪಾನಂದ ಫೌಂಡೇಶನ್ ಪ್ರವರ್ತಕರಾದ ಯಶ್‌ಪಾಲ್ ಎ. ಸುವರ್ಣ ಮಾತನಾಡಿ ತಮ್ಮ ತಾಯಿಯ ಆಶಯದಂತೆ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸಹಕಾರ ನೀಡಲು ತಮ್ಮ ಫೌಂಡೇಶನ್ ಮೂಲಕ ಪ್ರತಿಭಾ ಪುರಸ್ಕಾರ ವಿತರಿಸಲು ನಿರ್ಧರಿಸಿದ್ದು, ಈ ಬಾರಿ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ೧೮೦೦ ಮಂದಿ ವಿದ್ಯಾರ್ಥಿಗಳಿಗೆ ಸುಮಾರು ೧೮ ಲಕ್ಷ ಮೌಲ್ಯದ ಧನಸಹಾಯ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಫೌಂಡೇಶನ್ ಮೂಲಕ ನಿರಂತರ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುವ ಆಶಯ ವ್ಯಕ್ತಪಡಿಸಿದರು.

ಸಮಾರಂಭದ ಮುಖ್ಯ ಅತಿಥಿಗಳಾದ ಶಿರ್ವ ಸಿ. ಎ. ಬ್ಯಾಂಕ್ ಅಧ್ಯಕ್ಷರಾದ ಪ್ರಸಾದ್ ಶೆಟ್ಟಿ ಕುತ್ಯಾರು, ಶಿರ್ವ ಮಹಿಳಾ ಮಂಡಲದ ಗೌರವಾಧ್ಯಕ್ಷರಾದ ಶ್ರೀಮತಿ ಬಬಿತಾ ಜೆ. ಅರಸ್ ಮಾತನಾಡಿದರು.
ಸಮಾರಂಭದಲ್ಲಿ ಸಮಾಜ ಸೇವಕರಾದ ಕೊಲ್ಲಬೆಟ್ಟು ರವೀಂದ್ರ ಶೆಟ್ಟಿ, ಕಾಪು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಸಂತೋಷ್ ಕುಮಾರ್ ಮೂಡುಬೆಳ್ಳೆ, ಮಹಿಳಾ ಮೋರ್ಚಾ ಅಧ್ಯಕ್ಷರಾದ ಸುಮಾ ಶೆಟ್ಟಿ, ತಾ. ಪಂ ಮಾಜಿ ಅಧ್ಯಕ್ಷೆ ಶಶಿಪ್ರಭಾ ಶೆಟ್ಟಿ, ಬೆಳ್ಳೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಧಾಕರ ಪೂಜಾರಿ, ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲತಾ ಆಚಾರ್ಯ, ಮುದರಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಯೋಗಿನಿ ಶೆಟ್ಟಿ, ಮಜೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಶರ್ಮಿಳಾ ಆಚಾರ್ಯ, ಕಾಪು ಬಿಜೆಪಿ ಮಂಡಲ ಕಾರ್ಯದರ್ಶಿ ಮಾಲಿನಿ ಶೆಟ್ಟಿ, ಶಿರ್ವ ಗ್ರಾಮ ಪಂಚಾಯತ್ ಸದಸ್ಯ ಪ್ರವೀಣ್ ಸಾಲ್ಯಾನ್, ಶಿರ್ವ ಅಯ್ಯಪ್ಪ ಭಕ್ತವೃಂದದ ಗೋಪಾಲ ಗುರುಸ್ವಾಮಿ ಉಪಸ್ಥಿತರಿದ್ದರು. ಯಶ್‌ಪಾಲ್ ಸುವರ್ಣ ಆಪ್ತ ಕಾರ್ಯದರ್ಶಿ ಮಟ್ಟು ಯತೀಶ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

*** ತಂದೆ ತಾಯಿಯ ಸ್ಮರಣಾರ್ಥ ಪುಷ್ಪಾನಂದ ಫೌಂಡೇಶನ್ ವತಿಯಿಂದ ಪ್ರತಿಭಾ ಪುರಸ್ಕಾರ ವಿತರಿಸುವ ಮೂಲಕ ಬಡ ವಿದ್ಯಾರ್ಥಿಗಳಿಗೆ ಸಹಕರಿಸುವ ಕಾರ್ಯ ನಿರಂತರವಾಗಿ ಮುಂದುವರೆಯಲಿದ್ದು, ಪ್ರತಿಭಾನ್ವಿತ ವಿದ್ಯಾರ್ಥಿಗಳ ಈ ಸಾಧನೆ ಇತರ ವಿದ್ಯಾರ್ಥಿಗಳಿಗೂ ಇನ್ನೂ ಹೆಚ್ಚಿನ ಶೈಕ್ಷಣಿಕ ಸಾಧನೆಗೆ ಪ್ರೇರಣೆಯಾಗಲಿ.
ಯಶ್‌ಪಾಲ್ ಎ. ಸುವರ್ಣ
ಪ್ರವರ್ತಕರು, ಪುಷ್ಪಾನಂದ

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago