ನವದೆಹಲಿ: ಹಿಂದಿ ಭಾಷೆ ಕಲಿಕೆ ಕಡ್ಡಾಯ ಎಂದು ಕೇಂದ್ರ ಸರ್ಕಾರ ನಿರ್ಧರಿಸಿದಾಗಿನಿಂದ ಹಲವು ರಾಜ್ಯಗಳಲ್ಲಿ ಸರ್ಕಾರದ ವಿರುದ್ಧ ಸಿಡಿದೆದ್ದ ಬೆನ್ನಲ್ಲೇ ಇದೀಗ ಎಂದು ಕೇಂದ್ರ ಸರ್ಕಾರ ಹಿಂದಿ ಕಡ್ಡಾಯ ಅಲ್ಲ ಎಂದು ಹೇಳಿದೆ. ಈ ಮೂಲಕ ರಾಜ್ಯಗಳಿಗಿದ್ದ ಆತಂಕವನ್ನು ದೂರ ಮಾಡಿದೆ.
ಈ ಮೊದಲು ಸ್ಥಳೀಯ ಭಾಷೆಗಳ ಜೊತೆಗೆ ಹಿಂದಿ ಕಡ್ಡಾಯ ಎನ್ನಲಾಗಿತ್ತು. ಆದರೆ ಹಿಂದಿ ಭಾಷೆ ಹೇರಿಕೆಗೆ ಕರ್ನಾಟಕ, ತಮಿಳುನಾಡು ಹಾಗೂ ಕೇರಳದಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು. ವಿರೋಧದ ಹಿನ್ನೆಲೆ ಕರಡು ನೀತಿಯಲ್ಲಿ ಕೇಂದ್ರ ಸರ್ಕಾರ ಬದಲಾವಣೆ ಮಾಡಿದೆ ಎನ್ನಲಾಗಿದೆ.
ಇದರಿಂದಾಗಿ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳು ಹಿಂದಿ ಭಾಷಾ ಕಡ್ಡಾಯ ಹೇರಿಕೆ ವಿರುದ್ಧ ಎತ್ತಿದ್ದ ಹೋರಾಟದ ಧ್ವನಿಗೆ ಜಯ ಲಭಿಸಿದಂತಾಗಿದೆ.
ಕೇಂದ್ರ ಸರ್ಕಾರ ಇಂದು ಬೆಳಿಗ್ಗೆ ಈ ಸಂಬಂಧ ಸ್ಪಷ್ಟನೆ ನೀಡಿದ್ದು, ಆಯಾ ರಾಜ್ಯಗಳಲ್ಲಿ ಹಿಂದಿ ಭಾಷೆ ಕಡ್ಡಾಯವಲ್ಲ, ಶಿಕ್ಷಣ ವ್ಯವಸ್ಥೆ ಈ ಹಿಂದೆ ಇದ್ದ ರೀತಿಯಲ್ಲಿಯೇ ಮುಂದುವರೆಯಲಿದೆ ಎಂದು ಸ್ಪಷ್ಟಪಡಿಸಿದೆ.
ಇನ್ನು ಯಾರ ಮೇಲೂ ಯಾವುದೇ ಭಾಷೆ ಹೇರುವ ಉದ್ದೇಶ ಸರ್ಕಾರಕ್ಕಿಲ್ಲ. ಹೊಸ ಶಿಕ್ಷಣ ನೀತಿ ಕುರಿತ ವರದಿಯನ್ನು ಮಾತ್ರ ಸಲ್ಲಿಸಲಾಗಿತ್ತು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…