ನವದೆಹಲಿ: ಹಿಂದಿ ಭಾಷೆ ಕಲಿಕೆ ಕಡ್ಡಾಯ ಎಂದು ಕೇಂದ್ರ ಸರ್ಕಾರ ನಿರ್ಧರಿಸಿದಾಗಿನಿಂದ ಹಲವು ರಾಜ್ಯಗಳಲ್ಲಿ ಸರ್ಕಾರದ ವಿರುದ್ಧ ಸಿಡಿದೆದ್ದ ಬೆನ್ನಲ್ಲೇ ಇದೀಗ ಎಂದು ಕೇಂದ್ರ ಸರ್ಕಾರ ಹಿಂದಿ ಕಡ್ಡಾಯ ಅಲ್ಲ ಎಂದು ಹೇಳಿದೆ. ಈ ಮೂಲಕ ರಾಜ್ಯಗಳಿಗಿದ್ದ ಆತಂಕವನ್ನು ದೂರ ಮಾಡಿದೆ.
ಈ ಮೊದಲು ಸ್ಥಳೀಯ ಭಾಷೆಗಳ ಜೊತೆಗೆ ಹಿಂದಿ ಕಡ್ಡಾಯ ಎನ್ನಲಾಗಿತ್ತು. ಆದರೆ ಹಿಂದಿ ಭಾಷೆ ಹೇರಿಕೆಗೆ ಕರ್ನಾಟಕ, ತಮಿಳುನಾಡು ಹಾಗೂ ಕೇರಳದಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು. ವಿರೋಧದ ಹಿನ್ನೆಲೆ ಕರಡು ನೀತಿಯಲ್ಲಿ ಕೇಂದ್ರ ಸರ್ಕಾರ ಬದಲಾವಣೆ ಮಾಡಿದೆ ಎನ್ನಲಾಗಿದೆ.
ಇದರಿಂದಾಗಿ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳು ಹಿಂದಿ ಭಾಷಾ ಕಡ್ಡಾಯ ಹೇರಿಕೆ ವಿರುದ್ಧ ಎತ್ತಿದ್ದ ಹೋರಾಟದ ಧ್ವನಿಗೆ ಜಯ ಲಭಿಸಿದಂತಾಗಿದೆ.
ಕೇಂದ್ರ ಸರ್ಕಾರ ಇಂದು ಬೆಳಿಗ್ಗೆ ಈ ಸಂಬಂಧ ಸ್ಪಷ್ಟನೆ ನೀಡಿದ್ದು, ಆಯಾ ರಾಜ್ಯಗಳಲ್ಲಿ ಹಿಂದಿ ಭಾಷೆ ಕಡ್ಡಾಯವಲ್ಲ, ಶಿಕ್ಷಣ ವ್ಯವಸ್ಥೆ ಈ ಹಿಂದೆ ಇದ್ದ ರೀತಿಯಲ್ಲಿಯೇ ಮುಂದುವರೆಯಲಿದೆ ಎಂದು ಸ್ಪಷ್ಟಪಡಿಸಿದೆ.
ಇನ್ನು ಯಾರ ಮೇಲೂ ಯಾವುದೇ ಭಾಷೆ ಹೇರುವ ಉದ್ದೇಶ ಸರ್ಕಾರಕ್ಕಿಲ್ಲ. ಹೊಸ ಶಿಕ್ಷಣ ನೀತಿ ಕುರಿತ ವರದಿಯನ್ನು ಮಾತ್ರ ಸಲ್ಲಿಸಲಾಗಿತ್ತು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…