ಉತ್ತರಪ್ರದೇಶ: ಉತ್ತರ ಪ್ರದೇಶದ 23 ವರ್ಷದ ಕಾನೂನು ವಿದ್ಯಾರ್ಥಿನಿಯ ಮೇಲೆ ತತ ಒಂದು ವರ್ಷಗಳ ಕಾಲ ಅತ್ಯಾಚಾರ ನಡೆಸಿರುವ ಆರೋಪ ಹೊತ್ತಿರುವ ಕೆಂದ್ರದ ಮಾಜಿ ಸಚಿವ, ಬಿಜೆಪಿ ಮುಖಂಡ ಸ್ವಾಮಿ ಚಿನ್ಮಯಾನಂದ ಅವರನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ.
ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿನ್ಮಯಾನಂದ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾಳೆ. ಎಸ್ಐಟಿ ಅಧಿಕಾರಿಗಳು ಸ್ವಾಮಿ ಚಿನ್ಮಯಾನಂದ ನಿವಾಸದಿಂದಲೇ ಅವರನ್ನು ಬಂಧಿಸಿ ಕರೆದೊಯ್ದಿದ್ದಾರೆ ಎಂದು ಮಾಹಿತಿ ನೀಡಿರುವ ಚಿನ್ಮಯಾನಂದ ಪರ ವಕೀಲ ಪೂಜಾ ಸಿಂಗ್, ಎಸ್ಐಟಿ ಅಧಿಕಾರಿಗಳು ಎಫ್ಐಆರ್ ಅಥವಾ ಯಾವುದೇ ಅಧಿಕೃತ ಮಾಹಿತಿ ಪ್ರತಿ ನೀಡದೇ ಅವರನ್ನು ಬಂಧಿಸಿದ್ದಾರೆಂದು ಆರೋಪಿಸಿದ್ದಾರೆ..
ಸ್ವಾಮಿ ಚಿನ್ಮಯಾನಂದ ಅವರನ್ನು ತಕ್ಷಣವೇ ಬಂಧಿಸದೇ ಇದ್ದರೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ವಿದ್ಯಾರ್ಥಿನಿ ಬುಧವಾರ ಬೆದರಿಕೆ ಹಾಕಿದ್ದರು
” ಕಳೆದ ವರ್ಷ ಕಾಲೇಜಿನಲ್ಲಿ ಅಡ್ಮಿಷನ್ ಪಡೆಯಲು ಅಂತ ಚಿನ್ಮಯಾನಂದರನ್ನ ಭೇಟಿಯಾಗಿದ್ದೆ. ನನಗೆ ಅಡ್ಮಿಷನ್ ನೀಡಿದ ಚಿನ್ಮಯಾನಂದ ಗ್ರಂಥಾಲಯದಲ್ಲಿ ಕೆಲಸ ನೀಡಿ, ಹಾಸ್ಟೆಲ್ನಲ್ಲಿ ಇರುವಂತೆ ಸೂಚಿಸಿದ್ದರು. ನಾನು ಹಾಸ್ಟೆಲ್ಗೆ ಶಿಫ್ಟ್ ಆದ ಬಳಿಕ ನಾನು ಸ್ನಾನ ಮಾಡುತ್ತಿರುವ ವಿಡಿಯೋವೊಂದನ್ನ ತೋರಿಸಿ, ಬೆದರಿಸಿ ನನ್ನ ಮೇಲೆ ಒಂದು ವರ್ಷದಿಂದ ಅತ್ಯಾಚಾರ ನಡೆಸಿದ್ದಾರೆ” ಎಂದು ದೂರಿನಲ್ಲಿ ತಿಳಿಸಿದ್ದಳು.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…