ಬೆಂಗಳೂರು: ಸರ್ಕಾರಿ ಶಾಲೆಯಲ್ಲಿ ಶಿಕ್ಷಕರೊಬ್ಬರು ಪಕ್ಕೆಲುಬು ಎಂಬ ಪದವನ್ನು ಉಚ್ಚರಿಸುವಂತೆ ವಿದ್ಯಾರ್ಥಿಗಳಿಗೆ ಹೇಳಿಕೊಡುತ್ತಿರುವ ಮತ್ತು ಆ ಪದವನ್ನು ಸರಿಯಾಗಿ ಉಚ್ಚರಿಸಲಾಗದ ವಿದ್ಯಾರ್ಥಿ ಕಷ್ಟಪಡುತ್ತಿರುವ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವ ಶಾಲೆ ಶಿಕ್ಷಕ ಹಾಗೂ ಮುಖ್ಯ ಶಿಕ್ಷಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ.
ಪಕ್ಕೆಲುಬು ಪದ ಸರಿಯಾಗಿ ಉಚ್ಚರಿಸಲಾಗದೇ ವಿದ್ಯಾರ್ಥಿ ಪದೇ ಪದೇ ಅದೇ ಪದವನ್ನು ಹೇಳುವಂತೆ ಒತ್ತಾಯಿಸುತ್ತಾ ಶಿಕ್ಷಕ ಕಪಾಳಕ್ಕೆ ಹೊಡೆದಿರುವ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು. ಇದರಿಂದ ಎಚ್ಚೆತ್ತುಕೊಂಡಿರುವ ಸಚಿವರು ಗುರುವಾರ ಆದೇಶ ಹೊರಡಿಸಿದ್ದು, ಯಾವ ಶಾಲೆಯಲ್ಲಿ ಈ ಘಟನೆ ನಡೆದಿದೆ ಎಂಬುದನ್ನು ತಿಳಿಯುವುದಕ್ಕಾಗಿ ಸೈಬರ್ ಕ್ರೈಂ ಠಾಣೆ ದೂರು ನೀಡಿದ್ದು, ಸಂಬಂಧಪಟ್ಟ ಶಿಕ್ಷಕರು ಹಾಗೂ ಮುಖ್ಯ ಶಿಕ್ಷಕರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಪ್ರಾಥಮಿಕ ಮತ್ತು ಪ್ರೌಢಶಾಲಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಅವರಿಗೆ ಪತ್ರ ಬರೆಯಲಾಗಿತ್ತು
ಮಕ್ಕಳು ತಪ್ಪು ಉಚ್ಚಾರ ಮಾಡುವುದು ಸಹಜ. ನಿರಂತರ ಕಲಿಕೆಯ ನಂತರ ಆ ಪದದ ಬಗ್ಗೆ ಸ್ಪಷ್ಟತೆ ಸಿಕ್ಕಾಗ ಸರಿಯಾದ ಉಚ್ಚಾರ ಮಾಡುವುದು ಸಾಧ್ಯವಾಗಲಿದೆ. ಶಿಕ್ಷಕರಾದವರು ಮಕ್ಕಳಿಗೆ ಸರಿಯಾದ ಉಚ್ಚಾರ ಮಾಡಿಸಬೇಕೇ ವಿನಃ ಅದನ್ನೇ ದೊಡ್ಡ ಅಪರಾಧವೆಂಬಂತೆ ಬಿಂಬಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದು ಕೂಡ ಅಪರಾಧವಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…