ವಿದ್ಯಾವಂತ ಯುವಕರಿಗೆ ಅವಕಾಶ : ಕರ್ನಾಟಕ ರಾಜ್ಯ ಕಾಂಗ್ರೆಸ್ ಇತಿಹಾಸದಲ್ಲಿ ಇದು ದೊಡ್ಡ ಬದಲಾವಣೆ : ಡಿ.ಕೆ. ಶಿವಕುಮಾರ್ – Vishwanews24
17 ಅಭ್ಯರ್ಥಿಗಳ ಎರಡನೇ ಪಟ್ಟಿ ಇಂದು ಅಂತಿಮ- ಉಳಿದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಮತ್ತೊಂದು ಸುತ್ತಿನ ಚರ್ಚೆ : ಡಿ.ಕೆ. ಶಿವಕುಮಾರ್
ನವದೆಹಲಿ: “17 ಅಭ್ಯರ್ಥಿಗಳ ಎರಡನೇ ಪಟ್ಟಿ ಇಂದು ಅಂತಿಮವಾಗಿದ್ದು, ಉಳಿದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಬೆಂಗಳೂರಿನಲ್ಲಿ ಮತ್ತೊಂದು ಸುತ್ತಿನ ಚರ್ಚೆ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ದೆಹಲಿಯಲ್ಲಿ ಬುಧವಾರ ನಡೆದ ಸಿಇಸಿ ಸಭೆ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಅಂತಿಮ ನಾಲ್ಕು ಕ್ಷೇತ್ರಗಳಲ್ಲಿ ಸ್ಥಳೀಯರ ಅಭಿಪ್ರಾಯ ಸಂಗ್ರಹಿಸಬೇಕು. ನಾಳೆ ಈ ಕ್ಷೇತ್ರಗಳ ಸ್ಥಳೀಯ ನಾಯಕರ ಸಭೆ ಕರೆಯಲಾಗಿದೆ. ನಂತರ ನಾಡಿದ್ದು ಜೂಮ್ ಮೂಲಕ ಚರ್ಚೆ ಮಾಡುತ್ತೇವೆ” ಎಂದು ತಿಳಿಸಿದರು.
ಕೋಲಾರ ನಾಯಕರ ಭೇಟಿ ಬಗ್ಗೆ ಕೇಳಿದಾಗ, “ರಾಜಕೀಯವಾಗಿ ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಪಕ್ಷ ಹೇಳಿದಂತೆ ಎಲ್ಲರೂ ಕೇಳುತ್ತಾರೆ” ಎಂದು ತಿಳಿಸಿದರು.
ಬಾಗಲಕೋಟೆ ಟಿಕೆಟ್ ಸಿಗದ ಕಾರಣ ವೀಣಾ ಕಾಶಪ್ಪನವರ್ ಕಣ್ಣೀರು ಹಾಕಿರುವ ಬಗ್ಗೆ ಕೇಳಿದಾಗ, “ಉಸ್ತುವಾರಿ ಸಚಿವರುಗಳು ಯಾರ ಹೆಸರನ್ನು ಸಲಹೆ ನೀಡಿದ್ದರೋ ಅವರ ಎಲ್ಲಾ ಹೆಸರುಗಳು ಸಿಇಸಿ ಸಭೆಯಲ್ಲಿ ಚರ್ಚೆ ಆಗಿದೆ” ಎಂದು ತಿಳಿಸಿದರು.
50% ಟಿಕೆಟ್ ಯುವಕರಿಗೆ ನೀಡಿದ್ದೇವೆ:
ಸಚಿವರ ಕುಟುಂಬದವರಿಗೆ ಟಿಕೆಟ್ ನೀಡಲಾಗುತ್ತಿದೆ ಎಂದು ಕೇಳಿದಾಗ, “ರಾಜಕೀಯ ವ್ಯವಸ್ಥೆಯಲ್ಲಿ ಕೆಲಸ ಮಾಡಿರುವವರಿಗೂ ಹೊಸ ಅಭ್ಯರ್ಥಿಗಳನ್ನು ತರುವುದಕ್ಕೂ ವ್ಯತ್ಯಾಸವಿದೆ. ಇಡೀ ದೇಶದಲ್ಲಿ ಕುಟುಂಬದ ಸದಸ್ಯರಿಗೆ ಟಿಕೆಟ್ ನೀಡಲಾಗುತ್ತಿದೆ. ಈ ಬಾರಿ ಐವರು ಮೊದಲ ಬಾರಿಗೆ ಸ್ಪರ್ಧಿಸುತ್ತಿದ್ದಾರೆ. ಇನ್ನು 50% ಯುವಕರಿಗೆ ಅವಕಾಶ ನೀಡಿದ್ದೇವೆ. ಕರ್ನಾಟಕ ರಾಜ್ಯ ಕಾಂಗ್ರೆಸ್ ಇತಿಹಾಸದಲ್ಲಿ ಇದು ದೊಡ್ಡ ಬದಲಾವಣೆ. ನಾವು ವಿದ್ಯಾವಂತ ಯುವಕರಿಗೆ ಅವಕಾಶ ನೀಡಿದ್ದೇವೆ. ಎಲ್ಲರೂ ಸಮರ್ಥರಿದ್ದು, ಎಲ್ಲರ ಮೇಲೂ ಹೊಣೆಗಾರಿಕೆ ಇದೆ” ಎಂದು ತಿಳಿಸಿದರು.
ಉಡುಪಿ : ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಶರ್ಫುದ್ದೀನ್ ಶೇಖ್ ನೇಮಕ – Vishwanews24
