ನವದೆಹಲಿ: “17 ಅಭ್ಯರ್ಥಿಗಳ ಎರಡನೇ ಪಟ್ಟಿ ಇಂದು ಅಂತಿಮವಾಗಿದ್ದು, ಉಳಿದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಬೆಂಗಳೂರಿನಲ್ಲಿ ಮತ್ತೊಂದು ಸುತ್ತಿನ ಚರ್ಚೆ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ದೆಹಲಿಯಲ್ಲಿ ಬುಧವಾರ ನಡೆದ ಸಿಇಸಿ ಸಭೆ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಅಂತಿಮ ನಾಲ್ಕು ಕ್ಷೇತ್ರಗಳಲ್ಲಿ ಸ್ಥಳೀಯರ ಅಭಿಪ್ರಾಯ ಸಂಗ್ರಹಿಸಬೇಕು. ನಾಳೆ ಈ ಕ್ಷೇತ್ರಗಳ ಸ್ಥಳೀಯ ನಾಯಕರ ಸಭೆ ಕರೆಯಲಾಗಿದೆ. ನಂತರ ನಾಡಿದ್ದು ಜೂಮ್ ಮೂಲಕ ಚರ್ಚೆ ಮಾಡುತ್ತೇವೆ” ಎಂದು ತಿಳಿಸಿದರು.
ಕೋಲಾರ ನಾಯಕರ ಭೇಟಿ ಬಗ್ಗೆ ಕೇಳಿದಾಗ, “ರಾಜಕೀಯವಾಗಿ ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಪಕ್ಷ ಹೇಳಿದಂತೆ ಎಲ್ಲರೂ ಕೇಳುತ್ತಾರೆ” ಎಂದು ತಿಳಿಸಿದರು.
ಬಾಗಲಕೋಟೆ ಟಿಕೆಟ್ ಸಿಗದ ಕಾರಣ ವೀಣಾ ಕಾಶಪ್ಪನವರ್ ಕಣ್ಣೀರು ಹಾಕಿರುವ ಬಗ್ಗೆ ಕೇಳಿದಾಗ, “ಉಸ್ತುವಾರಿ ಸಚಿವರುಗಳು ಯಾರ ಹೆಸರನ್ನು ಸಲಹೆ ನೀಡಿದ್ದರೋ ಅವರ ಎಲ್ಲಾ ಹೆಸರುಗಳು ಸಿಇಸಿ ಸಭೆಯಲ್ಲಿ ಚರ್ಚೆ ಆಗಿದೆ” ಎಂದು ತಿಳಿಸಿದರು.
50% ಟಿಕೆಟ್ ಯುವಕರಿಗೆ ನೀಡಿದ್ದೇವೆ:
ಸಚಿವರ ಕುಟುಂಬದವರಿಗೆ ಟಿಕೆಟ್ ನೀಡಲಾಗುತ್ತಿದೆ ಎಂದು ಕೇಳಿದಾಗ, “ರಾಜಕೀಯ ವ್ಯವಸ್ಥೆಯಲ್ಲಿ ಕೆಲಸ ಮಾಡಿರುವವರಿಗೂ ಹೊಸ ಅಭ್ಯರ್ಥಿಗಳನ್ನು ತರುವುದಕ್ಕೂ ವ್ಯತ್ಯಾಸವಿದೆ. ಇಡೀ ದೇಶದಲ್ಲಿ ಕುಟುಂಬದ ಸದಸ್ಯರಿಗೆ ಟಿಕೆಟ್ ನೀಡಲಾಗುತ್ತಿದೆ. ಈ ಬಾರಿ ಐವರು ಮೊದಲ ಬಾರಿಗೆ ಸ್ಪರ್ಧಿಸುತ್ತಿದ್ದಾರೆ. ಇನ್ನು 50% ಯುವಕರಿಗೆ ಅವಕಾಶ ನೀಡಿದ್ದೇವೆ. ಕರ್ನಾಟಕ ರಾಜ್ಯ ಕಾಂಗ್ರೆಸ್ ಇತಿಹಾಸದಲ್ಲಿ ಇದು ದೊಡ್ಡ ಬದಲಾವಣೆ. ನಾವು ವಿದ್ಯಾವಂತ ಯುವಕರಿಗೆ ಅವಕಾಶ ನೀಡಿದ್ದೇವೆ. ಎಲ್ಲರೂ ಸಮರ್ಥರಿದ್ದು, ಎಲ್ಲರ ಮೇಲೂ ಹೊಣೆಗಾರಿಕೆ ಇದೆ” ಎಂದು ತಿಳಿಸಿದರು.
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…