ಉಡುಪಿ

ವಿದ್ಯಾವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯಯರ ನಿಧನಕ್ಕೆ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸಂತಾಪ ವ್ಯಕ್ತಪಡಿಸಿದರು.

ಉಡುಪಿ: ದೇಶದ ಪ್ರಮುಖ ವಿದ್ವಾಂಸರಲ್ಲಿ ಒಬ್ಬರಾದ ಉಡುಪಿ ಜಿಲ್ಲೆಯ ವಿದ್ಯಾವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯಯರ ನಿಧನಕ್ಕೆ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸಂತಾಪ ವ್ಯಕ್ತಪಡಿಸಿದರು.

ನಾಡಿನ ಹಿರಿಯ ವಿದ್ವಾಂಸರಾದ ಪದ್ಮಶ್ರೀ ಡಾ. ಬನ್ನಂಜೆ ಗೋವಿಂದಾಚಾರ್ಯ ಅವರ ನಿಧನದ ವಿಷಯ ಕೇಳಿ ಬೇಸರವಾಯಿತು. ವೇದ, ಪುರಾಣಗಳ ಕುರಿತ ಅವರ ಕೃತಿಗಳು, ಪ್ರವಚನಗಳು, ಅಸಂಖ್ಯಾತ ಬರಹಗಳು ಧಾರ್ಮಿಕ ಪ್ರಜ್ಞೆಯನ್ನು ಜಾಗೃತಗೊಳಿಸುವಂತಿದ್ದವು. ಅವರ ನಿಧನದಿಂದ ಸಾರಸ್ವತ ಲೋಕದ ಅಗಾಧ ಪ್ರತಿಭೆಯೊಂದನ್ನು ಕಳೆದುಕೊಂಡಂತಾಗಿದೆ. ಅವರ ಕುಟುಂಬ, ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಉಡುಪಿ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್  ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಬಾಣಭಟ್ಟನ ಕಾದಂಬರಿ, ಮಹಾಶ್ವೇತನ ಸಂಸ್ಕೃತ ಕತೆಗಳು, ಸಂಸ್ಕೃತ ಕಾವ್ಯಗಳು, ಕಾಳಿದಾಸನ ಶಾಕುಂತಲ, ಶೂದ್ರಕನ ಮೃಚ್ಛಕಟಿಕಾ ಮುಂತಾದ ಕೃತಿಗಳನ್ನು ಗೋವಿಂದಾಚಾರ್ಯರು ಸಂಸ್ಕೃತದಿಂದ ಕನ್ನಡಕ್ಕೆ ಅನುವಾದಿಸಿದ್ದಾರೆ. ಮಧ್ವಾಚಾರ್ಯ, ಶಂಕರಾಚಾರ್ಯ, ರಾಮಾನುಜಾಚಾರ್ಯ ಸಿನಿಮಾಗಳಿಗೆ ಗೋವಿಂದಾಚಾರ್ಯರು ಸಂಭಾಷಣೆಯನ್ನೂ ಬರೆದಿದ್ದಾರೆ.

ವರದಿ: ಸಾಲಿಯಾನ್ ಮೂಳೂರು

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

20 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

20 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago