ದಾವಣಗೆರೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಅದರಲ್ಲಿದ್ದ ಯುವತಿ ಸಾವನ್ನಪ್ಪಿ, ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ದಾವಣಗೆರೆಯ ಹೊರ ವಲಯದ ಮಿಟ್ಲಕಟ್ಟೆ ಗ್ರಾಮದ ಬಳಿ ನಡೆದಿದೆ.
ಮೃತ ಯುವತಿಯನ್ನು ಪ್ರಿಯಾ (21) ಹಾಗೂ ಗಾಯಗೊಂಡ ಯುವಕನನ್ನು ಯೋಗೇಶ್ ಎಂದು ಗುರುತಿಸಲಾಗಿದೆ. ಇಬ್ಬರು ದಾವಣಗೆರೆ ನಿವಾಸಿಗಳಾಗಿದ್ದು, ಕಾಲೇಜು ಮುಗಿಸಿ ಡಾಬಾವೊಂದಕ್ಕೆ ಸ್ನೇಹಿತರ ಜೊತೆ ಊಟಕ್ಕೆ ಹೋಗಿದ್ದರು. ಊಟ ಮುಗಿಸಿ ವಾಪಸ್ಸಾಗುವ ವೇಳೆ ಈ ಅಪಘಾತ ನಡೆದಿದೆ.
ಅಪಘಾತಕ್ಕೂ ಮುನ್ನ ಇಬ್ಬರ ನಡುವೆ ಜಗಳ
ಪ್ರಿಯಾ ಹಾಗೂ ಯೋಗೇಶ್ ನಡುವೆ ಡಾಬಾದಲ್ಲೇ ಗಲಾಟೆ ನಡೆದಿತ್ತು. ಇನ್ನೂ ಇಬ್ಬರ ಜಗಳ ಸಿಸಿ ಕ್ಯಾಮೆರಾದಲ್ಲಿ ಸಹ ಸೆರೆಯಾಗಿದೆ. ಜಗಳವಾಡಿ ಪ್ರಿಯಾ ಹಾಗೂ ಆಕೆಯ ಸ್ನೇಹಿತೆ ಒಂದು ಬೈಕ್ನಲ್ಲಿ ಹೋಗುತ್ತಿದ್ದರು. ಈ ವೇಳೆ, ಬುಲೆಟ್ ಬೈಕ್ನಲ್ಲಿ ಯುವತಿಯರನ್ನು ಹಿಂಬಾಲಿಸಿ ಹೊರಟ ಯೋಗೇಶ್, ನಡು ರಸ್ತೆಯಲ್ಲಿ ನಿಲ್ಲಿಸಿ ಪ್ರಿಯಾಳನ್ನು ತನ್ನ ಬೈಕ್ನಲ್ಲಿ ಕೂರಿಸಿಕೊಂಡು ಬಂದಿದ್ದ. ಆಗಲೂ ಜಗಳವಾಡುತ್ತಾ ಅಜಾಗರೂಕತೆಯಿಂದ ಬೈಕ್ ಚಲಾಯಿಸಿದ್ದು, ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಗಂಭೀರವಾಗಿ ಗಾಯಗೊಂಡ ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವಕನ ವಿರುದ್ಧ ಯುವತಿ ಕುಟುಂಬಸ್ಥರು ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…