ರಾಜ್ಯ ವಿಧಾನಸಭೆ ಚುನಾವಣೆ ಬೆನ್ನಲ್ಲೇ ವಿದ್ಯುತ್ ದರ ಹೆಚ್ಚಳಕ್ಕೆ ವೇದಿಕೆ ಸಿದ್ಧಗೊಂಡಿದೆ. ವಿದ್ಯುತ್ ದರ ಪರಿಷ್ಕರಣೆ ಸಂಬಂಧ ರಾಜ್ಯ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ಸಿ) ಸೋಮವಾರ ತನ್ನ ನಿರ್ಧಾರ ಪ್ರಕಟಿಸಲಿದ್ದು, ಈ ಬಾರಿ ಪ್ರತಿ ಯೂನಿಟ್ಗೆ ಸರಾಸರಿ 50 ಪೈಸೆಯಷ್ಟು ಹೆಚ್ಚಳವಾಗಬಹುದು ಎಂದು ನಿರೀಕ್ಷಿಸಲಾಗಿದೆ.
ಪ್ರತಿ ವರ್ಷ ಏಪ್ರಿಲ್ ಮೊದಲ ವಾರ ವಿದ್ಯುತ್ ದರ ಪರಿಷ್ಕರಣೆ ತೀರ್ಮಾನ ಹೊರಬೀಳುತ್ತದೆ. ಈ ಬಾರಿ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಈ ಪ್ರಕ್ರಿಯೆ ಮುಂದೂಡಲಾಗಿತ್ತು.
ಯೂನಿಟ್ಗೆ 83 ಪೈಸೆಯಿಂದ 1.50 ರೂ. ವರೆಗೂ ಜಾಸ್ತಿ ಮಾಡುವಂತೆ ಎಸ್ಕಾಂಗಳು ಬೇಡಿಕೆ ಸಲ್ಲಿಸಿವೆ. ಈ ಪೈಕಿ ಬಿಬಿಎಂಪಿ ವ್ಯಾಪ್ತಿಗೆ ಸೀಮಿತವಾಗಿ ವಿದ್ಯುತ್ ದರದಲ್ಲಿ ಭಾರಿ ಹೆಚ್ಚಳ ಮಾಡುವಂತೆ ಬೆಸ್ಕಾಂ ಒತ್ತಡ ತಂದಿದೆ. ಈ ಎಲ್ಲ ಪ್ರಸ್ತಾವನೆ ಆಧರಿಸಿ ಎಲ್ಲ ವಿದ್ಯುತ್ ಸರಬರಾಜು ಕಂಪನಿಗಳ ಅಡಿ ಬರುವ ಜಿಲ್ಲೆಗಳಿಗೆ ಭೇಟಿ ನೀಡಿದ ಕೆಇಆರ್ಸಿ ಅಧಿಕಾರಿಗಳು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ್ದರು.
ಎಸ್ಕಾಂಗಳ ಪ್ರಸ್ತಾವ ಹಾಗೂ ಬಳಕೆದಾರರ ಅಭಿಪ್ರಾಯದೊಂದಿಗೆ ದರ ಪರಿಷ್ಕರಣೆ ಪ್ರಕ್ರಿಯೆಗೆ ಅಂತಿಮ ಸ್ವರೂಪ ಕೊಡಲಾಗಿದೆ. ಆಯೋಗದ ಅಧ್ಯಕ್ಷ ಹೊಸ ದರ ಪಟ್ಟಿಯ ವಿವರ ಒದಗಿಸಲಿದ್ದಾರೆ. ಇದು ಏಪ್ರಿಲ್ 1ರಿಂದ ಅನ್ವಯವಾಗುವಂತೆ ಜಾರಿಯಾಗಲಿದೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…