ರಾಜ್ಯ ವಿಧಾನಸಭೆ ಚುನಾವಣೆ ಬೆನ್ನಲ್ಲೇ ವಿದ್ಯುತ್ ದರ ಹೆಚ್ಚಳಕ್ಕೆ ವೇದಿಕೆ ಸಿದ್ಧಗೊಂಡಿದೆ. ವಿದ್ಯುತ್ ದರ ಪರಿಷ್ಕರಣೆ ಸಂಬಂಧ ರಾಜ್ಯ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ಸಿ) ಸೋಮವಾರ ತನ್ನ ನಿರ್ಧಾರ ಪ್ರಕಟಿಸಲಿದ್ದು, ಈ ಬಾರಿ ಪ್ರತಿ ಯೂನಿಟ್ಗೆ ಸರಾಸರಿ 50 ಪೈಸೆಯಷ್ಟು ಹೆಚ್ಚಳವಾಗಬಹುದು ಎಂದು ನಿರೀಕ್ಷಿಸಲಾಗಿದೆ.
ಪ್ರತಿ ವರ್ಷ ಏಪ್ರಿಲ್ ಮೊದಲ ವಾರ ವಿದ್ಯುತ್ ದರ ಪರಿಷ್ಕರಣೆ ತೀರ್ಮಾನ ಹೊರಬೀಳುತ್ತದೆ. ಈ ಬಾರಿ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಈ ಪ್ರಕ್ರಿಯೆ ಮುಂದೂಡಲಾಗಿತ್ತು.
ಯೂನಿಟ್ಗೆ 83 ಪೈಸೆಯಿಂದ 1.50 ರೂ. ವರೆಗೂ ಜಾಸ್ತಿ ಮಾಡುವಂತೆ ಎಸ್ಕಾಂಗಳು ಬೇಡಿಕೆ ಸಲ್ಲಿಸಿವೆ. ಈ ಪೈಕಿ ಬಿಬಿಎಂಪಿ ವ್ಯಾಪ್ತಿಗೆ ಸೀಮಿತವಾಗಿ ವಿದ್ಯುತ್ ದರದಲ್ಲಿ ಭಾರಿ ಹೆಚ್ಚಳ ಮಾಡುವಂತೆ ಬೆಸ್ಕಾಂ ಒತ್ತಡ ತಂದಿದೆ. ಈ ಎಲ್ಲ ಪ್ರಸ್ತಾವನೆ ಆಧರಿಸಿ ಎಲ್ಲ ವಿದ್ಯುತ್ ಸರಬರಾಜು ಕಂಪನಿಗಳ ಅಡಿ ಬರುವ ಜಿಲ್ಲೆಗಳಿಗೆ ಭೇಟಿ ನೀಡಿದ ಕೆಇಆರ್ಸಿ ಅಧಿಕಾರಿಗಳು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ್ದರು.
ಎಸ್ಕಾಂಗಳ ಪ್ರಸ್ತಾವ ಹಾಗೂ ಬಳಕೆದಾರರ ಅಭಿಪ್ರಾಯದೊಂದಿಗೆ ದರ ಪರಿಷ್ಕರಣೆ ಪ್ರಕ್ರಿಯೆಗೆ ಅಂತಿಮ ಸ್ವರೂಪ ಕೊಡಲಾಗಿದೆ. ಆಯೋಗದ ಅಧ್ಯಕ್ಷ ಹೊಸ ದರ ಪಟ್ಟಿಯ ವಿವರ ಒದಗಿಸಲಿದ್ದಾರೆ. ಇದು ಏಪ್ರಿಲ್ 1ರಿಂದ ಅನ್ವಯವಾಗುವಂತೆ ಜಾರಿಯಾಗಲಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…