ಮಂಡ್ಯ: ವಿದ್ಯುತ್ ಶಾಕ್ ತಗುಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಗರದ ಗುತ್ತಲು ಬಡಾವಣೆ ನಿವಾಸಿ ರಾಷ್ಟ್ರೀಯ ಫುಟ್ಬಾಲ್ ಆಟಗಾರ ವಿಶ್ವಾಸ್ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ.
ಜು.1ರಂದು ಸ್ವರ್ಣ ಫುಟ್ಬಾಲ್ ಸಂಸ್ಥೆ ಆಯೋಜಿಸಿದ್ದ ಹೊನಲು ಬೆಳಕಿನ ಏಳು ಮಂದಿ ಆಟಗಾರರ ಫುಟ್ಬಾಲ್ ಪಂದ್ಯಕ್ಕಾಗಿ ತಯಾರಿಯಲ್ಲಿದ್ದ ಪ್ರತಿಭಾವಂತ ಆಟಗಾರ ವಿಶ್ವಾಸ್, ಮನೆಯಲ್ಲಿ ಆಕಸ್ಮಿಕವಾಗಿ ವಿದ್ಯುತ್ ಶಾಕ್ಗೆ ಒಳಗಾಗಿದ್ದರು. ಬಳಿಕ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ನರಸಿಂಹಮೂರ್ತಿ ಮತ್ತು ಶ್ಯಾಮಲಾ ದಂಪತಿಯ ಪುತ್ರ ವಿಶ್ವಾಸ್, ನಗರದ ಪಿಇಎಸ್ ಕಾಲೇಜ್ನಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದರು. ಓದಿನ ಜೊತೆಗೆ ಫುಟ್ಬಾಲ್ ಕ್ರೀಡೆಯಲ್ಲಿಯೂ ತೊಡಗಿಸಿಕೊಂಡಿದ್ದರು. ಆದರೆ ಈ ಆಟಗಾರನ ಬಾಳಿನಲ್ಲಿ ವಿಧಿಯ ಆಟ ಬೇರೆಯಾಗಿತ್ತು. ಫುಟ್ಬಾಲ್ ಆಟದಲ್ಲಿ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಬೇಕೆಂಬ ಕನಸು ಕಂಡಿದ್ದ ವಿಶ್ವಾಸ್ ವಿದ್ಯುತ್ ಶಾಕ್ ತಗುಲಿ ದೇಹದ ಶೇ.80ರಷ್ಟು ಭಾಗ ಹಾನಿಗೊಳಗಾಗಿ ಕೋಮಾ ಸ್ಥಿತಿಗೆ ತಲುಪಿ ಆಸ್ಪತ್ರೆ ಸೇರಿದ್ದರು. ನಂತರ ಪೋಷಕರಿಗೆ ಆರ್ಥಿಕವಾಗಿ ಕಷ್ಟ ಇದ್ದುದರಿಂದಾಗಿ ವಿಶ್ವಾಸ್ಗೆ ಚಿಕಿತ್ಸೆ ಕೊಡಿಸಲು ಸಹಾಯ ಕೇಳಿದ್ದರು. ಸಾವಿರಾರು ಜನ ವಿಶ್ವಾಸ್ಗಾಗಿ ದೇಣಿಗೆ ನೀಡಿದ್ದರು. ಆದರೆ ವಿಶ್ವಾಸ್ ಮಾತ್ರ ಇಂದು ಎಲ್ಲರನ್ನು ಬಿಟ್ಟು ಇಹಲೋಕ ತ್ಯಜಿಸಿದ್ದಾರೆ.
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…
ನಾಳೆ SSLC ಫಲಿತಾಂಶ ಪ್ರಕಟ ಬೆಂಗಳೂರು: ನಾಳೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.…
ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್ ಢಿಕ್ಕಿ - ಬಾಲಕಿ ಸಾವು ಕಾಪು : ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ…