ಶಿವಮೊಗ್ಗ: ವಿದ್ಯುತ್ ತಗುಲಿ ಯುವಕ ಸಾವನ್ನಪ್ಪಿದ ಘಟನೆ ರಿಪ್ಪನ್ಪೇಟೆಯ ಗವಟೂರಿನ ಹಳೂರು ಗ್ರಾಮದಲ್ಲಿ ನಡೆದಿದೆ.
ಕಾರ್ತಿಕ್ ಎಸ್ (19) ಮೃತಪಟ್ಟ ಯುವಕ. ಶುಕ್ರವಾರ ಬೆಳಗಿನಜಾವ ಮನೆ ಮುಂಭಾಗದಲ್ಲಿ ಘಟನೆ ನಡೆದಿದೆ. ಮನೆ ಮುಂಭಾಗದ IBX ಬೇಲಿ ಬಳಿಯಲ್ಲಿ ಮೂತ್ರ ವಿಸರ್ಜನೆ ಮಾಡುವಾಗ ಕರೆಂಟ್ ಶಾಕ್ ಹೊಡೆದಿದೆ.
ಮನೆ ಮುಂಭಾಗದ ಬೇಲಿ ಮೇಲೆ ವಿದ್ಯುತ್ ವೈರ್ ತುಂಡಾಗಿ ಬಿದ್ದಿತ್ತು. ಏಕಾಏಕಿ ವಿದ್ಯುತ್ ಪ್ರವಹಿಸಿ ಬೇಲಿಯ ಮೇಲೆ ಬಿದ್ದ ಯುವಕನನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಸಾಗಿಸಿದರೂ ಬದುಕುಳಿಯಲಿಲ್ಲ.
ಕಾರ್ತಿಕ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿಬಿಎ ವ್ಯಾಸಾಂಗ ಮಾಡುತಿದ್ದ.ರಿಪ್ಪನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…