ಕುಣಿಗಲ್ : ಕ್ರೇಜಿಸ್ಟಾರ್ ರವಿಚಂದ್ರನ್ರನ್ನು ಹೋಲುವ, ಜ್ಯೂನಿಯರ್ ರವಿಚಂದ್ರನ್ ಎಂದೇ ಖ್ಯಾತಿಗಳಿಸಿದ್ದ ಲಕ್ಮೀ ನಾರಾಯಣ ಎಂಬವರು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾರೆ.
ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಕಸಬಾ ಹೋಬಳಿಯ ಹೇರೂರು ಗ್ರಾಮದ ಲಕ್ಷ್ಮೀ ನಾರಾಯಣ್ (35) ಇಂದು ತಮ್ಮ ಮನೆಯಲ್ಲಿರುವ ಸಂಪ್ ಗೆ ನೀರು ಬಿಡಲು ಮೋಟರ್ ಸ್ವಿಚ್ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಕರೆಂಟ್ ಶಾಕ್ ನಿಂದ ಲಕ್ಷ್ಮೀ ನಾರಾಯಣ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಇವರು ತುಮಕೂರಿನ ಆರ್ಕೆಸ್ಟ್ರಾವೊಂದರಲ್ಲಿ ಕಲಾವಿದರಾಗಿ ಕೆಲಸ ಮಾಡುತ್ತಿದ್ದರು. ಲಕ್ಷ್ಮೀ ನಾರಾಯಣ್ ರಾಜ್ಯದೆಲ್ಲೆಡೆ ಸಂಗೀತ ಸಂಜೆ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಹಾಡು ಹೇಳಿ ಜನರನ್ನು ರಂಜಿಸುತ್ತಿದ್ದರು. ಜೊತೆಗೆ ರವಿಚಂದ್ರನ್ ಅವರಂತೆಯೇ ಕಾಣುತ್ತಿದ್ದ ಅವರು ರವಿಚಂದ್ರನ್ ಅಭಿನಯದ ದೃಶ್ಯಗಳನ್ನು ವೇದಿಕೆ ಮೇಲೆ ಅಭಿನಯಿಸುವ ಮೂಲಕ ಜನರ ಮನಗೆದ್ದಿದ್ದರು.
ಸ್ಯಾಂಡಲ್ವುಡ್ ಹಿರಿಯ ನಟ ರವಿಚಂದ್ರನ್ ಹೋಲುವ ಲಕ್ಷ್ಮೀನಾರಾಯಣ್ ಅವರ ರೀತಿಯಲ್ಲಿಯೇ ವೇಷಭೂಷಣ ಧರಿಸಿಕೊಳ್ಳುತ್ತಿದ್ದರು. ಇವರು ಅಪಾರ ಅಭಿಮಾನಿ ವರ್ಗವನ್ನು ಪಡೆದಿದ್ದರು.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…