Featured

ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಮೂವರು ಅಭಿಮಾನಿಗಳ ಮನೆಗೆ ಯಶ್‌ ಭೇಟಿ : ಕುಟುಂಬಕ್ಕೆ ಸಾಂತ್ವನ – vishwanews24

ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಮೂವರು ಅಭಿಮಾನಿಗಳ ಮನೆಗೆ ಯಶ್‌ ಭೇಟಿ : ಕುಟುಂಬಕ್ಕೆ ಸಾಂತ್ವನ

ನಟ ಯಶ್  ಹುಟ್ಟುಹಬ್ಬದ ಸಲುವಾಗಿ ಕಟೌಟ್ ನಿಲ್ಲಿಸುವುದಕ್ಕೆ ಹೋಗಿ ವಿದ್ಯುತ್ ಸ್ಪರ್ಶದಿಂದ ನಿಧನರಾಗಿರುವ ಮೂವರು ಅಭಿಮಾನಿಗಳ ಕುಟುಂಬಸ್ಥರನ್ನು ಭೇಟಿ ಮಾಡಲು ರಾಕಿಂಗ್‌ ಸ್ಟಾರ್ ಗದಗದ ಸೊರಣಗಿ ಬಂದಿದ್ದಾರೆ. ಭದ್ರತೆಗಾಗಿ ಎಸ್ ಪಿ ವಾಹನದಲ್ಲಿ ಯಶ್ ಆಗಮಿಸಿದ್ದು, ಮೃತ‌ಪಟ್ಟ ಅಭಿಮಾನಿಗಳ ಕುಟುಂಬಕ್ಕೆ ಸಾಂತ್ವನ ನೀಡಿದ್ದಾರೆ

ಮೃತ ಮುರಳಿ ತಂದೆ ಕೈ ಹಿಡಿದು ಯಶ್‌ ಧೈರ್ಯ ತುಂಬಿದ್ದಾರೆ. 3 ಜನ ಮೃತರ ಮನೆಗೆ ಯಶ್‌ ಭೇಟಿ ನೀಡಿದ್ದಾರೆ. ಮೊದಲು ಮೃತ ಮುರಳಿ ಮನೆಗೆ ತೆರಳಿ, ಅವರ ತಂದೆಗೆ ಧೈರ್ಯ ಹೇಳಿ, ಮೃತ ನವೀನ್‌ ಗಾಜಿ ಮತ್ತು ಹನುಮಂತ ಹರಿಜನ್‌ ಮನೆಗೆ ಭೇಟಿ ಯಶ್‌ ಸಾಂತ್ವನ ಹೇಳಿದ್ದಾರೆ.

ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲು ಹುಬ್ಬಳ್ಳಿಗೆ ಯಶ್ ಬಂದಿಳಿದಿದ್ದಾರೆ. ಅಭಿಮಾನಿಗಳ ಕುಟುಂಬಕ್ಕೆ ಸಾಂತ್ವನ ಹೇಳಲು ಯಶ್ ಆಗಮಿಸಿದ್ದಾರೆ. ಯಶ್ ಹುಟ್ಟುಹಬ್ಬಕ್ಕೆ ಬೃಹತ್ ಗಾತ್ರದ ಕಟೌಟ್ ಕಟ್ಟಲು ಹೋಗಿ ವಿದ್ಯುತ್ ಸ್ಪರ್ಶದಿಂದ 3 ಜನ ಸಾವನ್ನಪ್ಪಿದ ಘಟನೆ ಲಕ್ಷ್ಮೇಶ್ವರ ಸೂರಣಗಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಮೃತರನ್ನು ಹನುಮಂತ ಹರಿಜನ್ (24), ಮುರಳಿ ನಡುವಿನಮನಿ (20) ಹಾಗೂ ನವೀನ್ ಗಾಜಿ (20) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮಂಜುನಾಥ್, ಪ್ರಕಾಶ್ ಹಾಗೂ ಹನುಮಂತ ಎಂಬವರಿಗೆ ಗಂಭೀರ ಗಾಯಾಳಾಗಿವೆ. ಮಧ್ಯರಾತ್ರಿ 1 ಗಂಟೆ ವೇಳೆ ಕಟೌಟ್ ಕಟ್ಟುವ ವೇಳೆ ಈ ದುರ್ಘಟನೆ ನಡೆದಿದೆ. ಗಾಯಾಳುಗಳನ್ನು ಲಕ್ಷ್ಮೇಶ್ವರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

ಮಧ್ಯರಾತ್ರಿ ವೇಳೆ, ಹತ್ತಾರು ಜನ ಯುವಕರು ಸೇರಿಕೊಂಡು ತಮ್ಮ ನೆಚ್ಚಿನ ನಟನ ಕಟೌಟ್ ಕಟ್ಟಲು ಮುಂದಾಗಿದ್ದಾರೆ. ರಾತ್ರಿ ಸಮಯ ಆಗಿದ್ದರಿಂದ ವಿದ್ಯುತ್ ತಂತಿ ಯುವಕರ ಗಮನಕ್ಕೆ ಬಂದಿಲ್ಲ. ಇದರಿಂದ ಈ ದುರ್ಘಟನೆ ಸಂಭವಿಸಿದೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಸೂತಕದ ಛಾಯೆ ಮನೆ ಮಾಡಿದೆ.ಈ ಸಂಬಂಧ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago