ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದ ಅಭಿಮಾನಿಗಳ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಿದ ಯಶ್ – vishwanews24
ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದ ಅಭಿಮಾನಿಗಳ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಿದ ಯಶ್
ಬೆಂಗಳೂರು: ಯಶ್ ಬರ್ತ್ಡೇ ಪ್ರಯುಕ್ತ ಫ್ಲೆಕ್ಸ್ ಕಟ್ಟಲು ಹೋದ ಮೂವರು ಯುವಕರು ಕರೆಂಟ್ ಶಾಕ್ ಹೊಡೆದು ಮೃತಪಟ್ಟಿದ್ದರು. ರಾಕಿಂಗ್ ಸ್ಟಾರ್ ಅಭಿಮಾನಿಗಳ ಸಾವಿನ ನಂತರ ಸಂತ್ರಸ್ತ ಕುಟುಂಬಕ್ಕೆ ನೆರವಾಗುತ್ತೇನೆಂದು ಮಾತುಕೊಟ್ಟಿದ್ದರು. ಅದರಂತೆ ಇದೀಗ ಮೃತ ಅಭಿಮಾನಿಗಳ ಕುಟುಂಬಕ್ಕೆ ಹಣ ಸಹಾಯವನ್ನು ಮಾಡಿದ್ದಾರೆ.
ಯಶ್ ಜನ್ಮದಿನದ ಹಿನ್ನಲೆಯಲ್ಲಿ ಬ್ಯಾನರ್ ಕಟ್ಟುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ಅಭಿಮಾನಿಗಳು ನಿಧನರಾದ ನೋವು ಇನ್ನೂ ಹಸಿಯಾಗಿದೆ. ಮೃತ ಅಭಿಮಾನಿಗಳಾದ ಮುರಳಿ, ನವೀನ್ ಮತ್ತು ಹನುಮಂತ ಅವರ ಕುಟುಂಬದವರಿಗೆ ಪರಿಹಾರ ಹಣ ತಲುಪಿಸಲಾಗಿದೆ.
ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ಕ್ರಿಕೆಟಿಗ ಕೆ.ಎಲ್.ರಾಹುಲ್..vishwanews24
ಯಶ್ ಆಪ್ತರು ಗದಗ ಜಿಲ್ಲೆಯ ಸೊರಣಗಿ ಗ್ರಾಮಕ್ಕೆ ತೆರಳಿ ಪರಿಹಾರದ ಚೆಕ್ ನೀಡಿದ್ದಾರೆ. ಪ್ರತಿ ಕುಟುಂಬಕ್ಕೆ ತಲಾ ಐದು ಲಕ್ಷ ರೂಪಾಯಿ ಚೆಕ್ ನೀಡಲಾಗಿದೆ. ಯಶ್ ಸ್ನೇಹಿತರು ಜನವರಿ 17ರಂದು ಬೆಳಗ್ಗೆ 10 ಗಂಟೆಗೆ ಕುಟುಂಬದವರನ್ನ ಭೇಟಿ ಮಾಡಿದ್ದಾರೆ. ಸ್ನೇಹಿತರು ಬಂದು ಪರಿಹಾರ ಹಣ ನೀಡಿದ್ದಾಗ ಕುಟುಂಬಸ್ಥರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಮಕ್ಕಳನ್ನು ಕಳೆದುಕೊಂಡ ನೋವು ಪೋಷಕರನ್ನು ಕಾಡುತ್ತಿದೆ.
