ಬೆಂಗಳೂರು: ಯಶ್ ಬರ್ತ್ಡೇ ಪ್ರಯುಕ್ತ ಫ್ಲೆಕ್ಸ್ ಕಟ್ಟಲು ಹೋದ ಮೂವರು ಯುವಕರು ಕರೆಂಟ್ ಶಾಕ್ ಹೊಡೆದು ಮೃತಪಟ್ಟಿದ್ದರು. ರಾಕಿಂಗ್ ಸ್ಟಾರ್ ಅಭಿಮಾನಿಗಳ ಸಾವಿನ ನಂತರ ಸಂತ್ರಸ್ತ ಕುಟುಂಬಕ್ಕೆ ನೆರವಾಗುತ್ತೇನೆಂದು ಮಾತುಕೊಟ್ಟಿದ್ದರು. ಅದರಂತೆ ಇದೀಗ ಮೃತ ಅಭಿಮಾನಿಗಳ ಕುಟುಂಬಕ್ಕೆ ಹಣ ಸಹಾಯವನ್ನು ಮಾಡಿದ್ದಾರೆ.
ಯಶ್ ಜನ್ಮದಿನದ ಹಿನ್ನಲೆಯಲ್ಲಿ ಬ್ಯಾನರ್ ಕಟ್ಟುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ಅಭಿಮಾನಿಗಳು ನಿಧನರಾದ ನೋವು ಇನ್ನೂ ಹಸಿಯಾಗಿದೆ. ಮೃತ ಅಭಿಮಾನಿಗಳಾದ ಮುರಳಿ, ನವೀನ್ ಮತ್ತು ಹನುಮಂತ ಅವರ ಕುಟುಂಬದವರಿಗೆ ಪರಿಹಾರ ಹಣ ತಲುಪಿಸಲಾಗಿದೆ.
ಯಶ್ ಆಪ್ತರು ಗದಗ ಜಿಲ್ಲೆಯ ಸೊರಣಗಿ ಗ್ರಾಮಕ್ಕೆ ತೆರಳಿ ಪರಿಹಾರದ ಚೆಕ್ ನೀಡಿದ್ದಾರೆ. ಪ್ರತಿ ಕುಟುಂಬಕ್ಕೆ ತಲಾ ಐದು ಲಕ್ಷ ರೂಪಾಯಿ ಚೆಕ್ ನೀಡಲಾಗಿದೆ. ಯಶ್ ಸ್ನೇಹಿತರು ಜನವರಿ 17ರಂದು ಬೆಳಗ್ಗೆ 10 ಗಂಟೆಗೆ ಕುಟುಂಬದವರನ್ನ ಭೇಟಿ ಮಾಡಿದ್ದಾರೆ. ಸ್ನೇಹಿತರು ಬಂದು ಪರಿಹಾರ ಹಣ ನೀಡಿದ್ದಾಗ ಕುಟುಂಬಸ್ಥರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಮಕ್ಕಳನ್ನು ಕಳೆದುಕೊಂಡ ನೋವು ಪೋಷಕರನ್ನು ಕಾಡುತ್ತಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…