ಬೆಂಗಳೂರು: ಯಶ್ ಬರ್ತ್ಡೇ ಪ್ರಯುಕ್ತ ಫ್ಲೆಕ್ಸ್ ಕಟ್ಟಲು ಹೋದ ಮೂವರು ಯುವಕರು ಕರೆಂಟ್ ಶಾಕ್ ಹೊಡೆದು ಮೃತಪಟ್ಟಿದ್ದರು. ರಾಕಿಂಗ್ ಸ್ಟಾರ್ ಅಭಿಮಾನಿಗಳ ಸಾವಿನ ನಂತರ ಸಂತ್ರಸ್ತ ಕುಟುಂಬಕ್ಕೆ ನೆರವಾಗುತ್ತೇನೆಂದು ಮಾತುಕೊಟ್ಟಿದ್ದರು. ಅದರಂತೆ ಇದೀಗ ಮೃತ ಅಭಿಮಾನಿಗಳ ಕುಟುಂಬಕ್ಕೆ ಹಣ ಸಹಾಯವನ್ನು ಮಾಡಿದ್ದಾರೆ.
ಯಶ್ ಜನ್ಮದಿನದ ಹಿನ್ನಲೆಯಲ್ಲಿ ಬ್ಯಾನರ್ ಕಟ್ಟುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ಅಭಿಮಾನಿಗಳು ನಿಧನರಾದ ನೋವು ಇನ್ನೂ ಹಸಿಯಾಗಿದೆ. ಮೃತ ಅಭಿಮಾನಿಗಳಾದ ಮುರಳಿ, ನವೀನ್ ಮತ್ತು ಹನುಮಂತ ಅವರ ಕುಟುಂಬದವರಿಗೆ ಪರಿಹಾರ ಹಣ ತಲುಪಿಸಲಾಗಿದೆ.
ಯಶ್ ಆಪ್ತರು ಗದಗ ಜಿಲ್ಲೆಯ ಸೊರಣಗಿ ಗ್ರಾಮಕ್ಕೆ ತೆರಳಿ ಪರಿಹಾರದ ಚೆಕ್ ನೀಡಿದ್ದಾರೆ. ಪ್ರತಿ ಕುಟುಂಬಕ್ಕೆ ತಲಾ ಐದು ಲಕ್ಷ ರೂಪಾಯಿ ಚೆಕ್ ನೀಡಲಾಗಿದೆ. ಯಶ್ ಸ್ನೇಹಿತರು ಜನವರಿ 17ರಂದು ಬೆಳಗ್ಗೆ 10 ಗಂಟೆಗೆ ಕುಟುಂಬದವರನ್ನ ಭೇಟಿ ಮಾಡಿದ್ದಾರೆ. ಸ್ನೇಹಿತರು ಬಂದು ಪರಿಹಾರ ಹಣ ನೀಡಿದ್ದಾಗ ಕುಟುಂಬಸ್ಥರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಮಕ್ಕಳನ್ನು ಕಳೆದುಕೊಂಡ ನೋವು ಪೋಷಕರನ್ನು ಕಾಡುತ್ತಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…