ಹುಬ್ಬಳ್ಳಿ: ಕಾಂಗ್ರೆಸ್ನಲ್ಲಿ ಬಡಿದಾಟ ಶುರುವಾಗಿರುವುದು ಎಲ್ಲರಿಗೂ ಗೊತ್ತಿರುವ ವಿಚಾರವಾಗಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಜನಸ್ವರಾಜ ಯಾತ್ರೆ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನಸ್ವರಾಜ ಯಾತ್ರೆ ಹಿನ್ನೆಲೆಯಲ್ಲಿ 8 ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತಿರುವೆ. ಒಟ್ಟು ನಾಲ್ಕು ಭಾಗಗಳಾಗಿ ನಾವು ಕೆಲಸ ಮಾಡುತ್ತಿದ್ದೇವೆ. ಒಂದು ಕಡೆ ನಳಿನ್ ಕುಮಾರ್ ಕಟೀಲ್, ಮತ್ತೊಂದು ಕಡೆ ಕೆ.ಎಸ್.ಈಶ್ವರಪ್ಪ, ಜಗದೀಶ್ ಶೆಟ್ಟರ್ ಈ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿದ್ದೇವೆ ಎಂದು ತಿಳಿಸಿದರು.
ವಿಧಾನಪರಿಷತ್ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆದ್ದು, ಬಹುಮತ ಪಡೆಯಬೇಕು ಎಂಬ ಅಪೇಕ್ಷೆ ಇದೆ. ಆ ದಿಕ್ಕಿನಲ್ಲಿ ನಾವು ಕೆಲಸ ಮಾಡುತ್ತೇವೆ. ನಾವು ಹೆಚ್ಚಿನ ಸ್ಥಾನ ಗೆಲ್ಲುತ್ತೇವೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ನಾನು ಉತ್ತರ ಕನ್ನಡ ಮುಗಿಸಿ ಮತ್ತೆ ಹಾವೇರಿಗೆ ಹೋಗುತ್ತೇನೆ. ನಂತರ ಗದಗ, ಬಾಗಲಕೋಟೆ, ಬಿಜಾಪುರ, ಚಿಕ್ಕೋಡಿ, ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ನಾನು ಪ್ರವಾಸ ಮಾಡುತ್ತೇನೆ ಎಂದು ತಿಳಿಸಿದರು.
ಕಾಂಗ್ರೆಸ್ ಎರಡು ಬಣವಾಗಿರುವ ಕುರಿತು ಮಾತನಾಡಿದ ಅವರು, ನಾನು ಸಾಮಾನ್ಯವಾಗಿ ಯಾವ ಪಕ್ಷದ ಬಗ್ಗೆಯೂ ಟೀಕೆ,ಟಿಪ್ಪಣಿಗಳನ್ನು ಮಾಡುವುದಿಲ್ಲ. ಕಾಂಗ್ರೆಸ್ ನಲ್ಲಿ ಬಡಿದಾಟ ಶುರುವಾಗಿರುವುದು ಎಲ್ಲರಿಗೂ ಗೊತ್ತಿರುವ ವಿಚಾರವಾಗಿದೆ. ಮುಂದೆ ನೋಡೋಣ ಎಂದು ತಿಳಿಸಿದರು.
ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…
ಶಿರ್ವ : ಹುಚ್ಚುನಾಯಿ ಹಾವಳಿ ; ಹಲವರಿಗೆ ಕಡಿತ , ಸ್ಥಳೀಯರಲ್ಲಿ ಆತಂಕ ಶಿರ್ವ: ಶಿರ್ವ ಮತ್ತು ಕುತ್ಯಾರು ಗ್ರಾ.ಪಂ.…
ಗ್ಯಾಸ್ ಏಜೆನ್ಸಿಗಳಿಂದ ಎಲ್ಪಿಜಿ ಪೂರೈಕೆ: ನೆಟ್ವರ್ಕ್ ಇಲ್ಲದ ಕಡೆ ಒಟಿಪಿ ರಿಯಾಯಿತಿ : ಕೋಟ ಶ್ರೀನಿವಾಸ ಪೂಜಾರಿ ಮಣಿಪಾಲ: ನೆಟ್ವರ್ಕ್…
ಕಟಪಾಡಿ: ಮಟ್ಟು ಬೀಚ್ನಲ್ಲಿ ತೀವ್ರಗೊಂಡ ಕಡಲ್ಕೊರೆತ : ತುರ್ತು ಸುರಕ್ಷ ಕಾಮಗಾರಿ ಆರಂಭ ಕಟಪಾಡಿ: ಕಾಪು ತಾಲೂಕು ಕೋಟೆ ಗ್ರಾ.…
ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್…
ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ ಮೈಸೂರು: ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ ಎಂದು ಸಚಿವ ಡಾ.…