Featured

ವಿಧಾನಪರಿಷತ್ ಚುನಾವಣೆ : 25 ಸ್ಥಾನಗಳ ಪೈಕಿ ಬಿಜೆಪಿ 15 ಸ್ಥಾನ ಗೆಲ್ಲಲಿದೆ : ಜಗದೀಶ್ ಶೆಟ್ಟರ್  – Vishwanews24

ವಿಧಾನಪರಿಷತ್ ಚುನಾವಣೆ : 25 ಸ್ಥಾನಗಳ ಪೈಕಿ ಬಿಜೆಪಿ 15 ಸ್ಥಾನ ಗೆಲ್ಲಲಿದೆ: ಜಗದೀಶ್ ಶೆಟ್ಟರ್  – Vishwanews24

ತುಮಕೂರು: ವಿಧಾನಪರಿಷತ್ ಸ್ಥಳೀಯ ಸಂಸ್ಥೆಗಳಿಗೆ ನಡೆಯುವ ಚುನಾವಣೆಯಲ್ಲಿ 25 ಸ್ಥಾನಗಳ ಪೈಕಿ ಹದಿನೈದು ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿ ಗಳು ಗೆಲುವು ಸಾಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಜನ ಸ್ವರಾಜ್ ಸಮಾವೇಶಕ್ಕೂ ಮುನ್ನ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ 45 ಸಾವಿರಕ್ಕೂ ಹೆಚ್ಚು ಗ್ರಾಪಂ ಸದಸ್ಯರು ಬಿಜೆಪಿ ಬೆಂಬಲಿತರಿದ್ದು ಪರಿಷತ್ ಚುನಾವಣೆಯಲ್ಲಿ ಅತೀ ಹೆಚ್ಚು ಸ್ಥಾನ ಗೆಲ್ಲುವುದರೊಂದಿಗೆ ಪರಿಷತ್ ಬಹುಮತ ಸಾಧಿಸಲಿದೆ ಎಂದರು.

ಗ್ರಾಮ ಪಂಚಾಯಿತಿಯಿಂದ ದೆಹಲಿಯವರೆಗೆ ಬಿಜೆಪಿ ಬೆಳವಣಿಗೆ ದಾಖಲೆಯಾಗಿದ್ದು ಅತೀ ಹೆಚ್ಚು ಸಂಸದರು, ಶಾಸಕರು ಹಾಗೂ 19 ಕೋಟಿ ಸದಸ್ಯರನ್ನು ಹೊಂದುವ ಮೂಲಕ ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವೆನಿಸಿದೆ ಎಂದರು.

ತುಮಕೂರು ಜಿಲ್ಲೆಯಲ್ಲಿ ಬಿಜೆಪಿ ಪಕ್ಷದ ಐವರು ಶಾಸಕರು, ಸಂಸದರು, ಕೇಂದ್ರ ಸಚಿವರು ಸೇರಿದಂತೆ ಮೂವರು ಸಚಿವರು, ಇಬ್ಬರು ವಿಧಾನ ಪರಿಷತ್ ಸದಸ್ಯ ರಿದ್ದು ಕಳೆದ ಬಾರಿ ಪಕ್ಷದ ಒಬ್ಬ ರೇ ಶಾಸಕರಿದ್ದರೂ ಅಭ್ಯರ್ಥಿಯಾಗಿದ್ದ ಹುಲಿನಾಯ್ಕರ್ ಅವರು 1700 ಮತಗಳನ್ನು ಪಡೆದಿದ್ದರು. ಈ ಬಾರಿ ಪಕ್ಷದ ಅಭ್ಯರ್ಥಿ ಗೆಲವು ಸಾಧಿಸುವುದು ನಿಶ್ಚಿತವೆನೆಸಿದ್ದು ಇಂದು ಅಥವಾ ನಾಳೆಯೊಳಗೆ ಅಭ್ಯರ್ಥಿ ಪ್ರಕಟಿಸಲಾಗುವುದು. ಈಗಾಗಲೇ ಚುನಾವಣೆಗೆ ಅಗತ್ಯ ತಯಾರಿ ನಡೆಸಲಾಗಿದೆ ಎಂದರು.

ಕಾಂಗ್ರೆಸ್ ದೇಶಾದ್ಯಂತ ಅವನತಿ ಹಾದಿ ಹಿಡಿದಿದ್ದು, ಕರ್ನಾಟಕ ದಲ್ಲಿ ಡಿ. ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ನಡುವಿನ ಒಳಜಗಳವೇ ಆ ಪಕ್ಷವನ್ನು ನಿರ್ಮೂಲನೆ ಮಾಡಲಿದೆ. ಬಿಟ್ ಕಾಯಿನ್ ವಿಚಾರವಾಗಿ ಯಾವುದೇ ಪುರಾವೆಯಿಲ್ಲದೆ ಬಿಜೆಪಿ ಸರಕಾರ ವನ್ನು ದೂಷಿಸುವ ಕೆಲಸ ಮಾಡುತ್ತಿದೆ ಎಂದು ತಿರುಗೇಟು ನೀಡಿದರು.

ಸುದ್ದಿಗೋಷ್ಠಿಯಲ್ಲಿ ಸಚಿವರಾದ ಜೆ. ಸಿ. ಮಾಧುಸ್ವಾಮಿ, ಬೈರತಿ ಬಸವರಾಜ್, ಗೋಪಾಲಯ್ಯಾ, ಬಿ. ಸಿ. ನಾಗೇಶ್, ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ, ಸಂಸದ ಜಿ. ಎಸ್. ಬಸವರಾಜ್, ಶಾಸಕರಾದ ಜಿ. ಬಿ. ಜ್ಯೋತಿ ಗಣೇಶ್, ಮಸಾಲೆ ಜಯರಾಂ, ಸಿ. ಎಂ. ರಾಜೇಶ್ ಗೌಡ, ಎಂಎಲ್ಸಿಗಳಾದ ತುಳಸಿ ಮುನಿರಾಜು ಗೌಡ, ಮಹೇಶ್ ತೆಂಗಿನಕಾಯಿ, ವೈ. ಎ. ನಾರಾಯಣ ಸ್ವಾಮಿ, ಚಿದಾನಂದ ಗೌಡ, ಮಾಜಿ ಸಚಿವ ಎಸ್. ಶಿವಣ್ಣ, ಮಾಜಿ ಶಾಸಕ ಕೆ. ಎಸ್ ಕಿರಣ್ ಕುಮಾರ್, ರಾಜ ಉಪಾಧ್ಯಕ್ಷ ಎಂ. ಬಿ ನಂದೀಶ್, ಹೆಬ್ಬಾಕರವಿ, ಬಿ. ಕೆ. ಮಂಜುನಾಥ್, ಬಾವಿ ಕಟ್ಟೆ ನಾಗಣ್ಣ ಮತ್ತಿತರ ಮುಖಂಡರು ಹಾಜರಿದ್ದರು.

Vishwa News 24

Recent Posts

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ – vishwanews24

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…

17 hours ago

ನಿಮ್ಮ ಜೊತೆ ಸರಕಾರವಿದೆ ;ನಿಮ್ಮ ಸಂಕಷ್ಟಕ್ಕೆ ನಾವು ಸ್ಪಂದಿಸುತ್ತೇವೆ , ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಅಭಯ – vishwanews24

ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…

18 hours ago

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ – vishwanews24

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…

18 hours ago

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ – vishwanews24

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…

18 hours ago

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ – vishwanews24

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…

21 hours ago

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ – vishwanews24

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…

21 hours ago