ಬೆಂಗಳೂರು: ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಿದ್ದು, ಮೊದಲ ದಿನವೇ ಹೈಡ್ರಾಮಾ ನಡೆದಿದೆ. ಸದನದ ಬಾವಿಗಿಳಿದು ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಅಂಗಿ ಬಿಚ್ಚಿ ದುರ್ವರ್ತನೆ ತೋರಿದ್ದಾರೆ. ಇದನ್ನು ಖಂಡಿಸಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಒಂದು ವಾರಗಳ ಕಾಲ ಸದನಕ್ಕೆ ಭಾಗವಹಿಸದಂತೆ ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಸದನದಲ್ಲಿ ಶರ್ಟ್ ಬಿಚ್ಚಿ ಹೆಗಲ ಮೇಲೆ ಹಾಕಿಕೊಂಡು ಅಶಿಸ್ತು ಪ್ರದರ್ಶಿಸಿದ್ದು, ಈ ಹಿನ್ನೆಲೆ ಮಾರ್ಚ್ 12ರ ವರೆಗೆ ಸಂಗಮೇಶ್ರನ್ನು ಕಲಾಪದಿಂದ ಅಮಾನತು ಮಾಡಿ ಸ್ಪೀಕರ್ ಆದೇಶಿಸಿದ್ದಾರೆ. ನಿಯಮ 348ರ ಅಡಿ ಅಮಾನತು ಮಾಡಿ ಸ್ಪೀಕರ್ ಕಲಾಪ ಮುಂದೂಡಿದರು.
ಇಂದಿನಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಿದ್ದು, ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ಚರ್ಚೆ ನಡೆಸುವ ಬಗ್ಗೆ ಸ್ಪೀಕರ್ ಪ್ರಸ್ತಾಪಿಸಿದರು. ಇದಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಡಿಸಿತು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ಯಾವ ನಿಯಮಾವಳಿಗಳಲ್ಲಿ ಚರ್ಚೆ ಮಾಡುತ್ತೀರಿ ಎಂದು ಪ್ರಶ್ನಿಸಿದರು. ತಕ್ಷಣವೇ ಕಾಂಗ್ರೆಸ್ ನಾಯಕರು ಆಕ್ರೋಶಗೊಂಡು ಗದ್ದಲ ಎಬ್ಬಿಸಿದರು. ಅಲ್ಲದೆ ಸದನದ ಬಾವಿಗಿಳಿದು ಧರಣಿ ನಡೆಸಿದರು. ಈ ವೇಳೆ ಸಂಗಮೇಶ್ ಬಾವಿಗಿಳಿದಾಗ ಶರ್ಟ್ ಬಿಚ್ಚಿ ದುರ್ವರ್ತನೆ ತೋರಿದ್ದಾರೆ.
ಪುತ್ತೂರು : ಮಣ್ಣಿನಡಿಯಲ್ಲಿ ಸಿಲುಕಿದ್ದ ಇಬ್ಬರು ಕಾರ್ಮಿಕರ ಸಾವು -Vishwanews24
ವಿಧಾನಸಭೆ ಕಲಾಪಕ್ಕೆ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ, ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಸತೀಶ್ ಜಾರಕಿಹೊಳಿ, ತನ್ವೀರ್ ಸೇಠ್, ಅಖಂಡ ಶ್ರೀನಿವಾಸಮೂರ್ತಿ ಕಲಾಪಕ್ಕೆ ಗೈರಾಗಿದ್ದಾರೆ ಎಂದರು. ಈ ವೇಳೆ ಸಿದ್ದರಾಮಯ್ಯರವರಿಗೆ ಸಾಥ್ ನೀಡಿದ ರಮೇಶ್ ಕುಮಾರ್ ಮತ್ತು ಹೆಚ್.ಕೆ.ಪಾಟೀಲ್ ಒನ್ ನೇಷನ್, ಒನ್ ಎಲೆಕ್ಷನ್ ಚರ್ಚೆಗೆ ಅವಕಾಶ ಕೊಟ್ಟರೆ ಕ್ರಿಯಾಲೋಪ ಆಗುತ್ತದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಈ ಮಧ್ಯೆ ಎದ್ದು ನಿಂತ ಸಿಎಂ ಬಿಎಸ್ ಯಡಿಯೂರಪ್ಪ, ಸ್ಪೀಕರ್ ಅವರು ಸಂವಿಧಾನದ ಚೌಕಟ್ಟಿನಲ್ಲೇ ಚರ್ಚೆಗೆ ಅವಕಾಶ ಕೊಟ್ಟಿದ್ದಾರೆ ಸಹಕರಿಸಿ ಎಂದು ಮನವಿ ಮಾಡಿದರು.
80ನೇ ಸ್ವಾತಂತ್ರ್ಯ ದಿನಾಚರಣೆ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ ಬೆಂಗಳೂರು: ಇಡೀ ದೇಶವೇ ಇಂದು 80ನೇ…
80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ : ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ಬೆಂಗಳೂರು: ಇಡೀ ದೇಶವೇ ಇಂದು 80ನೇ ಸ್ವಾತಂತ್ರ್ಯ…
ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ…
ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ( ರಿ) ಮೂಳೂರು ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್…
ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ದಕ ಜಿಲ್ಲೆಗೆ ಯುಟಿ ಖಾದರ್, ಉಡುಪಿಗೆ ರಿಜ್ವಾನ್ ಅರ್ಷದ್ ಉಡುಪಿ/ಮಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಿಗೆ…
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 80 ನೇ ಸ್ವಾತಂತ್ರ್ಯ ದಿನಾಚರಣೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ…