Featured

ವಿಧಾನಮಂಡಲ ಅಧಿವೇಶನ : ಶರ್ಟ್ ಬಿಚ್ಚಿ ಅಸಭ್ಯ ವರ್ತನೆ ತೋರಿದ ಕಾಂಗ್ರೆಸ್ ಶಾಸಕ ಸಂಗಮೇಶ್ ;ಸದನದಿಂದ 1 ವಾರ ಅಮಾನತುಗೊಳಿಸಿದ ಸ್ಪೀಕರ್ -Vishwanews24

ಶರ್ಟ್ ಬಿಚ್ಚಿ ಅಸಭ್ಯ ವರ್ತನೆ ತೋರಿದ ಕಾಂಗ್ರೆಸ್ ಶಾಸಕ ಸಂಗಮೇಶ್ ;ಸದನದಿಂದ 1 ವಾರ ಅಮಾನತುಗೊಳಿಸಿದ ಸ್ಪೀಕರ್ -Vishwanews24

ಬೆಂಗಳೂರು: ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಿದ್ದು, ಮೊದಲ ದಿನವೇ ಹೈಡ್ರಾಮಾ ನಡೆದಿದೆ. ಸದನದ ಬಾವಿಗಿಳಿದು ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಅಂಗಿ ಬಿಚ್ಚಿ ದುರ್ವರ್ತನೆ ತೋರಿದ್ದಾರೆ. ಇದನ್ನು ಖಂಡಿಸಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಒಂದು ವಾರಗಳ ಕಾಲ ಸದನಕ್ಕೆ ಭಾಗವಹಿಸದಂತೆ ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಸದನದಲ್ಲಿ ಶರ್ಟ್ ಬಿಚ್ಚಿ ಹೆಗಲ ಮೇಲೆ ಹಾಕಿಕೊಂಡು ಅಶಿಸ್ತು ಪ್ರದರ್ಶಿಸಿದ್ದು, ಈ ಹಿನ್ನೆಲೆ ಮಾರ್ಚ್ 12ರ ವರೆಗೆ ಸಂಗಮೇಶ್‍ರನ್ನು ಕಲಾಪದಿಂದ ಅಮಾನತು ಮಾಡಿ ಸ್ಪೀಕರ್ ಆದೇಶಿಸಿದ್ದಾರೆ. ನಿಯಮ 348ರ ಅಡಿ ಅಮಾನತು ಮಾಡಿ ಸ್ಪೀಕರ್  ಕಲಾಪ ಮುಂದೂಡಿದರು.

ಪಡುಬಿದ್ರಿ: UPCL ಬೃಹತ್ ಗಾತ್ರದ ಪೈಪ್‌ಲೈನ್ ತುಂಡು: ಉಪ್ಪು ಮಿಶ್ರಿತ ಬಿಸಿ ನೀರು ಮತ್ತೆ ಸಮುದ್ರಕ್ಕೆ ; ಸ್ಥಳೀಯರ ಆಕ್ರೋಶ -Vishwanews24

ಇಂದಿನಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಿದ್ದು, ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ಚರ್ಚೆ ನಡೆಸುವ ಬಗ್ಗೆ ಸ್ಪೀಕರ್ ಪ್ರಸ್ತಾಪಿಸಿದರು. ಇದಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಡಿಸಿತು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ಯಾವ ನಿಯಮಾವಳಿಗಳಲ್ಲಿ ಚರ್ಚೆ ಮಾಡುತ್ತೀರಿ ಎಂದು ಪ್ರಶ್ನಿಸಿದರು. ತಕ್ಷಣವೇ ಕಾಂಗ್ರೆಸ್ ನಾಯಕರು ಆಕ್ರೋಶಗೊಂಡು ಗದ್ದಲ ಎಬ್ಬಿಸಿದರು. ಅಲ್ಲದೆ ಸದನದ ಬಾವಿಗಿಳಿದು ಧರಣಿ ನಡೆಸಿದರು. ಈ ವೇಳೆ ಸಂಗಮೇಶ್ ಬಾವಿಗಿಳಿದಾಗ ಶರ್ಟ್ ಬಿಚ್ಚಿ ದುರ್ವರ್ತನೆ ತೋರಿದ್ದಾರೆ.

ಪುತ್ತೂರು : ಮಣ್ಣಿನಡಿಯಲ್ಲಿ ಸಿಲುಕಿದ್ದ ಇಬ್ಬರು ಕಾರ್ಮಿಕರ ಸಾವು -Vishwanews24

ವಿಧಾನಸಭೆ ಕಲಾಪಕ್ಕೆ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ, ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಸತೀಶ್ ಜಾರಕಿಹೊಳಿ, ತನ್ವೀರ್ ಸೇಠ್, ಅಖಂಡ ಶ್ರೀನಿವಾಸಮೂರ್ತಿ ಕಲಾಪಕ್ಕೆ ಗೈರಾಗಿದ್ದಾರೆ ಎಂದರು. ಈ ವೇಳೆ ಸಿದ್ದರಾಮಯ್ಯರವರಿಗೆ ಸಾಥ್ ನೀಡಿದ ರಮೇಶ್ ಕುಮಾರ್ ಮತ್ತು ಹೆಚ್.ಕೆ.ಪಾಟೀಲ್ ಒನ್ ನೇಷನ್, ಒನ್ ಎಲೆಕ್ಷನ್ ಚರ್ಚೆಗೆ ಅವಕಾಶ ಕೊಟ್ಟರೆ ಕ್ರಿಯಾಲೋಪ ಆಗುತ್ತದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಈ ಮಧ್ಯೆ ಎದ್ದು ನಿಂತ ಸಿಎಂ ಬಿಎಸ್ ಯಡಿಯೂರಪ್ಪ, ಸ್ಪೀಕರ್ ಅವರು ಸಂವಿಧಾನದ ಚೌಕಟ್ಟಿನಲ್ಲೇ ಚರ್ಚೆಗೆ ಅವಕಾಶ ಕೊಟ್ಟಿದ್ದಾರೆ ಸಹಕರಿಸಿ ಎಂದು ಮನವಿ ಮಾಡಿದರು.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ : ಬೆದರಿಕೆ ಕರೆಗಳು ಬರುತ್ತಿರುವ ಹಿನ್ನಲೆಯಲ್ಲಿ ವಿಚಾರಣೆಗೆ ಹಾಜರಾಗದ ದಿನೇಶ್ ಕಲ್ಲಹಳ್ಳಿ -Vishwanews24

Vishwa News 24

Recent Posts

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

8 hours ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

8 hours ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

8 hours ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

8 hours ago

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ – vishwanews24

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…

8 hours ago

ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ – vishwanews24

ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ…

8 hours ago