ಬೆಂಗಳೂರು: ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಿದ್ದು, ಮೊದಲ ದಿನವೇ ಹೈಡ್ರಾಮಾ ನಡೆದಿದೆ. ಸದನದ ಬಾವಿಗಿಳಿದು ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಅಂಗಿ ಬಿಚ್ಚಿ ದುರ್ವರ್ತನೆ ತೋರಿದ್ದಾರೆ. ಇದನ್ನು ಖಂಡಿಸಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಒಂದು ವಾರಗಳ ಕಾಲ ಸದನಕ್ಕೆ ಭಾಗವಹಿಸದಂತೆ ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಸದನದಲ್ಲಿ ಶರ್ಟ್ ಬಿಚ್ಚಿ ಹೆಗಲ ಮೇಲೆ ಹಾಕಿಕೊಂಡು ಅಶಿಸ್ತು ಪ್ರದರ್ಶಿಸಿದ್ದು, ಈ ಹಿನ್ನೆಲೆ ಮಾರ್ಚ್ 12ರ ವರೆಗೆ ಸಂಗಮೇಶ್ರನ್ನು ಕಲಾಪದಿಂದ ಅಮಾನತು ಮಾಡಿ ಸ್ಪೀಕರ್ ಆದೇಶಿಸಿದ್ದಾರೆ. ನಿಯಮ 348ರ ಅಡಿ ಅಮಾನತು ಮಾಡಿ ಸ್ಪೀಕರ್ ಕಲಾಪ ಮುಂದೂಡಿದರು.
ಇಂದಿನಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಿದ್ದು, ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ಚರ್ಚೆ ನಡೆಸುವ ಬಗ್ಗೆ ಸ್ಪೀಕರ್ ಪ್ರಸ್ತಾಪಿಸಿದರು. ಇದಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಡಿಸಿತು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ಯಾವ ನಿಯಮಾವಳಿಗಳಲ್ಲಿ ಚರ್ಚೆ ಮಾಡುತ್ತೀರಿ ಎಂದು ಪ್ರಶ್ನಿಸಿದರು. ತಕ್ಷಣವೇ ಕಾಂಗ್ರೆಸ್ ನಾಯಕರು ಆಕ್ರೋಶಗೊಂಡು ಗದ್ದಲ ಎಬ್ಬಿಸಿದರು. ಅಲ್ಲದೆ ಸದನದ ಬಾವಿಗಿಳಿದು ಧರಣಿ ನಡೆಸಿದರು. ಈ ವೇಳೆ ಸಂಗಮೇಶ್ ಬಾವಿಗಿಳಿದಾಗ ಶರ್ಟ್ ಬಿಚ್ಚಿ ದುರ್ವರ್ತನೆ ತೋರಿದ್ದಾರೆ.
ಪುತ್ತೂರು : ಮಣ್ಣಿನಡಿಯಲ್ಲಿ ಸಿಲುಕಿದ್ದ ಇಬ್ಬರು ಕಾರ್ಮಿಕರ ಸಾವು -Vishwanews24
ವಿಧಾನಸಭೆ ಕಲಾಪಕ್ಕೆ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ, ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಸತೀಶ್ ಜಾರಕಿಹೊಳಿ, ತನ್ವೀರ್ ಸೇಠ್, ಅಖಂಡ ಶ್ರೀನಿವಾಸಮೂರ್ತಿ ಕಲಾಪಕ್ಕೆ ಗೈರಾಗಿದ್ದಾರೆ ಎಂದರು. ಈ ವೇಳೆ ಸಿದ್ದರಾಮಯ್ಯರವರಿಗೆ ಸಾಥ್ ನೀಡಿದ ರಮೇಶ್ ಕುಮಾರ್ ಮತ್ತು ಹೆಚ್.ಕೆ.ಪಾಟೀಲ್ ಒನ್ ನೇಷನ್, ಒನ್ ಎಲೆಕ್ಷನ್ ಚರ್ಚೆಗೆ ಅವಕಾಶ ಕೊಟ್ಟರೆ ಕ್ರಿಯಾಲೋಪ ಆಗುತ್ತದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಈ ಮಧ್ಯೆ ಎದ್ದು ನಿಂತ ಸಿಎಂ ಬಿಎಸ್ ಯಡಿಯೂರಪ್ಪ, ಸ್ಪೀಕರ್ ಅವರು ಸಂವಿಧಾನದ ಚೌಕಟ್ಟಿನಲ್ಲೇ ಚರ್ಚೆಗೆ ಅವಕಾಶ ಕೊಟ್ಟಿದ್ದಾರೆ ಸಹಕರಿಸಿ ಎಂದು ಮನವಿ ಮಾಡಿದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…