ಬೆಂಗಳೂರು: ಇಂದಿನಿಂದ ಏಳು ದಿನಗಳ ವಿಧಾನಮಂಡಲ ಅಧಿವೇಶ ಆರಂಭವಾಗಿದೆ. ಮೊದಲ ದಿನದಂದು ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲ ವಜುಭಾಯಿ ವಾಲಾ ಮಾತನಾಡಿ ಕೊರೊನಾ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪನವರ ನೇತೃತ್ವದಲ್ಲಿ ರಾಜ್ಯ ಸರ್ಕಾರ ಉತ್ತಮ ಕಾರ್ಯ ಕೈಗೊಂಡಿದೆ ಎಂದು ಶ್ಲಾಘಿಸಿದ್ದಾರೆ.
ಕೋವಿಡ್ ವಾರಿಯರ್ಸ್ ಹಗಲು ರಾತ್ರಿ ಕೆಲಸ ಮಾಡಿದ್ದಾರೆ. ಕರ್ತವ್ಯ ನಿರ್ವಹಿಸುವ ಸಮಯದಲ್ಲಿ ಕೋವಿಡ್ ನಿಂದ ಮೃತಪಟ್ಟವರಿಗೆ ಸರ್ಕಾರ 30ಲಕ್ಷ ಪರಿಹಾರ ಘೋಷಣೆ ಮಾಡಿದೆ. ಕೋವಿಡ್ ರೋಗಿಗಳಿಗೆ ಸರ್ಕಾರದಿಂದ 248 ಕೋಟಿ ರೂ. ವೆಚ್ಚ ಮಾಡಲಾಗಿದ್ದು, ಸುಮಾರು 1.36 ಲಕ್ಷ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲಾಗಿದೆ ಎನ್ನುವ ಮೂಲಕ ಸರ್ಕಾರ ಕಾರ್ಯಕ್ಕೆ ಫುಲ್ ಮಾರ್ಕ್ಸ್ ಕೊಟ್ಟಿದ್ದಾರೆ.
ಸಿಂದಗಿ ಶಾಸಕ ಎಮ್.ಜಿ ಮನಗೂಳಿ ನಿಧನಕ್ಕೆ ಉಡಪಿ ಜೆ ಡಿ ಎಸ್ ಜಿಲ್ಲಾಧ್ಯಕ್ಷ ಯೋಗಿಶ್ ಶೆಟ್ಟಿ ಸಂತಾಪ.vishwanews24
ಬೇಳೆಕಾಳುಗಳು ಉತ್ಪಾದನೆಯಲ್ಲಿ ಪ್ರಥಮ ಹಾಗೂ ಹಾಲು ಉತ್ಪಾದನೆಯಲ್ಲಿ ಎರಡನೇ ಸ್ಥಾನ ಪಡೆದಿದ್ದೇವೆ. ದೇಶದ ಮಾಹಿತಿ ತಂತ್ರಜ್ಞಾನಕ್ಕೆ ಶೇಕಡಾ 40 ರಷ್ಟು ಕೊಡುಗೆಯನ್ನು ನಾವು ನೀಡಿದ್ದೇವೆ.
ಕೊರೊನಾ ಸಂಕಷ್ಟದಲ್ಲೂ ವಾಣಿಜ್ಯ ತೆರಿಗೆ 30.467 ಕೋಟಿ ಹಾಗು ಅಬಕಾರಿ ಇಲಾಖೆ 16788 ಕೋಟಿ ರೂ. ರಾಜಸ್ವ ಸಂಗ್ರಹವಾಗಿದೆ. ಗರೀಬ್ ಕಲ್ಯಾಣ ಅನ್ನ ಯೋಜನೆ ಅಡಿಯಲ್ಲಿ ಆಹಾರ ಭದ್ರತೆಯನ್ನು ಸರ್ಕಾರ ಖಾತರಿಪಡಿಸಿದೆ. ಕರೊನಾ ಲಾಕ್ಡೌನ್ ಸಮಯದಲ್ಲಿ 90 ಲಕ್ಷ ಪ್ಯಾಕ್ ಮಾಡಿದ ಪೌಷ್ಟಿಕ ಆಹಾರ ಪೊಟ್ಟಣಗಳನ್ನು ಒದಗಿಸಿದೆ ಎಂದು ಸರ್ಕಾರವನ್ನು ರಾಜ್ಯಪಾಲು ಶ್ಲಾಘಿಸಿದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…