ಬೆಂಗಳೂರು: ಇಂದಿನಿಂದ ಏಳು ದಿನಗಳ ವಿಧಾನಮಂಡಲ ಅಧಿವೇಶ ಆರಂಭವಾಗಿದೆ. ಮೊದಲ ದಿನದಂದು ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲ ವಜುಭಾಯಿ ವಾಲಾ ಮಾತನಾಡಿ ಕೊರೊನಾ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪನವರ ನೇತೃತ್ವದಲ್ಲಿ ರಾಜ್ಯ ಸರ್ಕಾರ ಉತ್ತಮ ಕಾರ್ಯ ಕೈಗೊಂಡಿದೆ ಎಂದು ಶ್ಲಾಘಿಸಿದ್ದಾರೆ.
ಕೋವಿಡ್ ವಾರಿಯರ್ಸ್ ಹಗಲು ರಾತ್ರಿ ಕೆಲಸ ಮಾಡಿದ್ದಾರೆ. ಕರ್ತವ್ಯ ನಿರ್ವಹಿಸುವ ಸಮಯದಲ್ಲಿ ಕೋವಿಡ್ ನಿಂದ ಮೃತಪಟ್ಟವರಿಗೆ ಸರ್ಕಾರ 30ಲಕ್ಷ ಪರಿಹಾರ ಘೋಷಣೆ ಮಾಡಿದೆ. ಕೋವಿಡ್ ರೋಗಿಗಳಿಗೆ ಸರ್ಕಾರದಿಂದ 248 ಕೋಟಿ ರೂ. ವೆಚ್ಚ ಮಾಡಲಾಗಿದ್ದು, ಸುಮಾರು 1.36 ಲಕ್ಷ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲಾಗಿದೆ ಎನ್ನುವ ಮೂಲಕ ಸರ್ಕಾರ ಕಾರ್ಯಕ್ಕೆ ಫುಲ್ ಮಾರ್ಕ್ಸ್ ಕೊಟ್ಟಿದ್ದಾರೆ.
ಸಿಂದಗಿ ಶಾಸಕ ಎಮ್.ಜಿ ಮನಗೂಳಿ ನಿಧನಕ್ಕೆ ಉಡಪಿ ಜೆ ಡಿ ಎಸ್ ಜಿಲ್ಲಾಧ್ಯಕ್ಷ ಯೋಗಿಶ್ ಶೆಟ್ಟಿ ಸಂತಾಪ.vishwanews24
ಬೇಳೆಕಾಳುಗಳು ಉತ್ಪಾದನೆಯಲ್ಲಿ ಪ್ರಥಮ ಹಾಗೂ ಹಾಲು ಉತ್ಪಾದನೆಯಲ್ಲಿ ಎರಡನೇ ಸ್ಥಾನ ಪಡೆದಿದ್ದೇವೆ. ದೇಶದ ಮಾಹಿತಿ ತಂತ್ರಜ್ಞಾನಕ್ಕೆ ಶೇಕಡಾ 40 ರಷ್ಟು ಕೊಡುಗೆಯನ್ನು ನಾವು ನೀಡಿದ್ದೇವೆ.
ಕೊರೊನಾ ಸಂಕಷ್ಟದಲ್ಲೂ ವಾಣಿಜ್ಯ ತೆರಿಗೆ 30.467 ಕೋಟಿ ಹಾಗು ಅಬಕಾರಿ ಇಲಾಖೆ 16788 ಕೋಟಿ ರೂ. ರಾಜಸ್ವ ಸಂಗ್ರಹವಾಗಿದೆ. ಗರೀಬ್ ಕಲ್ಯಾಣ ಅನ್ನ ಯೋಜನೆ ಅಡಿಯಲ್ಲಿ ಆಹಾರ ಭದ್ರತೆಯನ್ನು ಸರ್ಕಾರ ಖಾತರಿಪಡಿಸಿದೆ. ಕರೊನಾ ಲಾಕ್ಡೌನ್ ಸಮಯದಲ್ಲಿ 90 ಲಕ್ಷ ಪ್ಯಾಕ್ ಮಾಡಿದ ಪೌಷ್ಟಿಕ ಆಹಾರ ಪೊಟ್ಟಣಗಳನ್ನು ಒದಗಿಸಿದೆ ಎಂದು ಸರ್ಕಾರವನ್ನು ರಾಜ್ಯಪಾಲು ಶ್ಲಾಘಿಸಿದರು.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…