ಉಡುಪಿ: ವಿಧಾನಸಭಾ ಚುನಾವಣೆ ಪ್ರಯುಕ್ತ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಥಾಪಿಸಲಾದ ಮಸ್ಟರಿಂಗ್ ಕೇಂದ್ರಗಳಲ್ಲಿ ಇಂದು ಮಸ್ಟರಿಂಗ್ ಪ್ರಕ್ರಿಯೆ ನಡೆಯಿತು.
ಬೈಂದೂರು ಕ್ಷೇತ್ರದ ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜು, ಕುಂದಾಪುರ ಕ್ಷೇತ್ರದ ಕುಂದಾಪುರ ಭಂಡಾರ್ಕಾರ್ಸ್ ಸಾಯನ್ಸ್ ಆಯಂಡ್ ಆರ್ಟ್ಸ್ ಕಾಲೇಜು, ಉಡುಪಿ ಕ್ಷೇತ್ರದ ಬ್ರಹ್ಮಗಿರಿ ಸೈಂಟ್ ಸಿಸಿಲೀಸ್ ಶಾಲೆ, ಕಾಪು ಕ್ಷೇತ್ರದ ಉಳಿಯಾರಗೋಳಿ ದಂಡತೀರ್ಥ ಪಿಯು ಕಾಲೇಜು ಹಾಗೂ ಕಾರ್ಕಳ ಕ್ಷೇತ್ರದ ಕಾರ್ಕಳ ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಮಸ್ಟರಿಂಗ್ ಕೇಂದ್ರಗಳಿಂದ ಮತಗಟ್ಟೆ ಅಧಿಕಾರಿಗಳು ತಮ್ಮ ತಂಡದೊಂದಿಗೆ ಮತಗಟ್ಟೆಗಳಿಗೆ ತೆರಳಿದರು.
ಮತಗಟ್ಟೆ ಅಧಿಕಾರಿಗಳು ಪೊಲೀಸ್ ಭದ್ರತೆ ಜೊತೆ ಮತಯಂತ್ರಗಳೊಂದಿಗೆ ತಮಗೆ ಸೂಚಿಸಿದ ಮಾರ್ಗಗಳ ಬಸ್ಗಳಲ್ಲಿ ಮತಗಟ್ಟೆಗಳಿಗೆ ತೆರಳಿದರು. ಆಯಾ ಕ್ಷೇತ್ರದ ತಾಲೂಕು ಚುನಾವಣಾಧಿಕಾರಿಗಳು ಮಸ್ಟರಿಂಗ್ ಕಾರ್ಯದ ನೇತೃತ್ವ ವನ್ನು ವಹಿಸಿದ್ದರು.
ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಹಾಗೂ ಎಸ್ಪಿ ಅಕ್ಷಯ್ ಹಾಕೇ ಮಚ್ಚೀಂದ್ರ ಉಡುಪಿ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೆ ಜಿಲ್ಲಾಧಿಕಾರಿ ಬೈಂದೂರು, ಕುಂದಾಪುರ, ಕಾಪು ಕೇಂದ್ರ ಗಳಿಗೂ ತೆರಳಿ ಮಸ್ಟರಿಂಗ್ ಪ್ರಕ್ರಿಯೆಯನ್ನು ಪರಿಶೀಲಿಸಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…