ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟಿಸುತ್ತಿದ್ದವರ ಮೇಲೆ ಗೋಲಿಬಾರ್ ನಡೆಸಿದ ಕ್ರಮವನ್ನು ವಿಧಾನಸಭೆಯಲ್ಲಿ ಬುಧವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಸ್ತಾಪಿಸಿದರು.
‘ಮಂಗಳೂರಿನಲ್ಲಿ ಪೊಲೀಸ್ ಅಧಿಕಾರಿಗಳೇ ನಿಂತು ಗೋಲಿಬಾರ್ ಮಾಡಿಸಿದ್ದಾರೆ. 144ನೇ ವಿಧಿಯ ಅನ್ವಯ ನಿಷೇಧಾಜ್ಞೆ ಹೇರಿದ್ದಾರೆ. ಸತ್ತವರಿಗೆ ಪರಿಹಾರ ಕೊಡಲು ಆಗಲ್ಲ ಎಂದರು’ ಎಂದು ಸಿದ್ದರಾಮಯ್ಯ ಟೀಕಿಸಿದರು.
‘ಕಲ್ಲಡ್ಕ ಪ್ರಭಾಕರ್ ಭಟ್ ನಡೆಸುವ ಶಾಲೆಯಲ್ಲಿ ಬಾಬ್ರಿ ಮಸೀದಿ ಕೆಡವುವ ನಾಟಕ ಪ್ರದರ್ಶನ ನಡೆದಿತ್ತು. ಅದರೆ ಯಾರ ಮೇಲೆಯೂ ಪ್ರಕರಣ ದಾಖಲಾಗಲಿಲ್ಲ. ಗೋಲಿಬಾರ್ ಮಾಡಿದರೆ ಮುಸ್ಲಿಮರ ಸಂಖ್ಯೆ ಕಡಿಮೆ ಆಗುತ್ತದೆ ಎಂದು ಮತ್ತೊಬ್ಬರು ಹೇಳಿದರು. ಆಗಲೂ ಪ್ರಕರಣ ದಾಖಲಾಗಲಿಲ್ಲ. ಬೀದರ್ ಶಾಲೆಯಲ್ಲಿ ಮಾತ್ರ ಶಿಕ್ಷಕಿಯನ್ನು ಬಂಧಿಸಿದರು. ಇದು ಅರಾಜಕತೆ ಅಲ್ಲದೆ ಇನ್ನೇನು’ ಎಂದು ಪ್ರಶ್ನಿಸಿದರು.
‘ಈ ಬಗ್ಗೆ ನ್ಯಾಯಾಂಗ ತನಿಖೆ ಆಗಬೇಕು. ತಪ್ಪಿತಸ್ಥ ಪೊಲೀಸರನ್ನು ಜೈಲಿಗೆ ಹಾಕಬೇಕು. ಇದರ ಜವಾಬ್ದಾಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟಿಸುತ್ತಿದ್ದವರ ಮೇಲೆ ಗೋಲಿಬಾರ್ ನಡೆಸಿದ ಕ್ರಮವನ್ನು ವಿಧಾನಸಭೆಯಲ್ಲಿ ಬುಧವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಪ್ರಸ್ತಾಪಿಸಿದರು.
‘ಮಂಗಳೂರಿನಲ್ಲಿ ಪೊಲೀಸ್ ಅಧಿಕಾರಿಗಳೇ ನಿಂತು ಗೋಲಿಬಾರ್ ಮಾಡಿಸಿದ್ದಾರೆ. 144ನೇ ವಿಧಿಯ ಅನ್ವಯ ನಿಷೇಧಾಜ್ಞೆ ಹೇರಿದ್ದಾರೆ. ಸತ್ತವರಿಗೆ ಪರಿಹಾರ ಕೊಡಲು ಆಗಲ್ಲ ಎಂದರು’ ಎಂದು ಸಿದ್ದರಾಮಯ್ಯ ಟೀಕಿಸಿದರು.
‘ಕಲ್ಲಡ್ಕ ಪ್ರಭಾಕರ್ ಭಟ್ ನಡೆಸುವ ಶಾಲೆಯಲ್ಲಿ ಬಾಬ್ರಿ ಮಸೀದಿ ಕೆಡವುವ ನಾಟಕ ಪ್ರದರ್ಶನ ನಡೆದಿತ್ತು. ಅದರೆ ಯಾರ ಮೇಲೆಯೂ ಪ್ರಕರಣ ದಾಖಲಾಗಲಿಲ್ಲ. ಗೋಲಿಬಾರ್ ಮಾಡಿದರೆ ಮುಸ್ಲಿಮರ ಸಂಖ್ಯೆ ಕಡಿಮೆ ಆಗುತ್ತದೆ ಎಂದು ಮತ್ತೊಬ್ಬರು ಹೇಳಿದರು. ಆಗಲೂ ಪ್ರಕರಣ ದಾಖಲಾಗಲಿಲ್ಲ. ಬೀದರ್ ಶಾಲೆಯಲ್ಲಿ ಮಾತ್ರ ಶಿಕ್ಷಕಿಯನ್ನು ಬಂಧಿಸಿದರು. ಇದು ಅರಾಜಕತೆ ಅಲ್ಲದೆ ಇನ್ನೇನು’ ಎಂದು ಪ್ರಶ್ನಿಸಿದರು.
‘ಈ ಬಗ್ಗೆ ನ್ಯಾಯಾಂಗ ತನಿಖೆ ಆಗಬೇಕು. ತಪ್ಪಿತಸ್ಥ ಪೊಲೀಸರನ್ನು ಜೈಲಿಗೆ ಹಾಕಬೇಕು. ಇದರ ಜವಾಬ್ದಾರಿ ಸರ್ಕಾರ ಹೊರಬೇಕು’ ಎಂದು ಆಗ್ರಹಿಸಿದರು.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…